ವರ್ತಕರಿಂದ ಅಗತ್ಯ ವಸ್ತು ಸಂಗ್ರಹ


Team Udayavani, Apr 2, 2020, 2:54 PM IST

ವರ್ತಕರಿಂದ ಅಗತ್ಯ ವಸ್ತು ಸಂಗ್ರಹ

ತುಮಕೂರು: ಕೋವಿಡ್ 19 ವೈರಸ್‌ ಹರಡದಂತೆ ತಡೆ ಗಟ್ಟಲು ಲಾಕ್‌ಡೌನ್‌ ಘೋಷಣೆ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಿರ್ಗತಿಕರು, ಬಡವರು, ಕೂಲಿಕಾರ್ಮಿಕರಿಗೆ ನೀಡಲು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ನೇತೃತ್ವದಲ್ಲಿ ನಗರದ ಮಂಡಿಪೇಟೆಯಲ್ಲಿ ವರ್ತಕರಿಂದ ದಿನಸಿ ಪದಾರ್ಥಗಳನ್ನು ಸಂಗ್ರಹ ಮಾಡಲಾಯಿತು.

ಶಾಸಕ ಜ್ಯೋತಿಗಣೇಶ್‌ ಮಂಡಿ ಪೇಟೆಯ ಪ್ರತಿ ಅಂಗಡಿ ಮಳಿಗೆಗೆ ಖುದ್ದಾಗಿ ಭೇಟಿ ನೀಡಿ ಸಂಕಷ್ಟದಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ನೀಡ ಬೇಕೆಂದು ವರ್ತಕರಲ್ಲಿ ಮನವಿ ಮಾಡಿ ಮಾತನಾಡಿ, ವರ್ತಕರೆಲ್ಲಾ ತುಂಬು ಹೃದಯದಿಂದ ದಿನಸಿ ಪದಾರ್ಥಗಳನ್ನು ನೀಡಲು ಮುಂದೆ ಬಂದಿದ್ದು, ಸಂಗ್ರಹಿಸಿದ ದಿನಸಿಯನ್ನು ಕ್ರೋಢಿಕರಿಸಿ ಅರ್ಹರಿಗೆ ವಿತರಿಸಲಾಗುವುದು ಎಂದರು.

ನಗರದ ವೀರಶೈವ ಕಲ್ಯಾಣ ಮಂಟಪ, ಅಯ್ಯಪ್ಪಸ್ವಾಮಿ ಮಂದಿರ, ಶಂಕರಮಠ, ಬ್ರಾಹ್ಮಣರ ವಸತಿ ನಿಲಯ ಮತ್ತಿ ತರ ಕಡೆ ದಾನಿಗಳಿಂದ ಸಂಗ್ರಹಿಸಿದ ದವಸ ಧಾನ್ಯ ಗಳನ್ನು ಬಳಸಿ ತಯಾರಿಸಿದ ಊಟವನ್ನು ನಿರ್ಗತಿಕರು, ಕೂಲಿ ಕಾರ್ಮಿಕರಿಗೆ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

ಸಮಾಜ ಸೇವಕ ಶ್ರೀ ಭಗವಾನ್‌ ರೈಸ್‌ ಇಂಡಸ್ಟ್ರೀಸ್‌ನ ರಮೇಶ್‌ ಬಾಬು ಮಾತನಾಡಿ, ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ. ಇಂತಹ ಕಾರ್ಯಕ್ಕೆ ವರ್ತಕರು ಅಗತ್ಯವಿರುವ ದಿನನಿತ್ಯದ ವಸ್ತುಗಳನ್ನು ನೀಡಲು ಮುಂದೆ ಬಂದಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಅಜಯ್‌ ಮಾತನಾಡಿ, ವರ್ತಕರಿಗೆ ದಿನಸಿ ಪದಾರ್ಥಗಳ ನೆರವು ನೀಡುವ ಮನೋ ಭಾವವಿದ್ದರೂ, ಹೇಗೆ ನೀಡ ಬೇಕೆಂಬ ಮಾರ್ಗ ತಿಳಿದಿರಲಿಲ್ಲ. ಶಾಸಕರೇ ಖುದ್ದಾಗಿ ಅಂಗಡಿ ಮಾಲೀಕರನ್ನು ಭೇಟಿ ಮಾಡಿ ದಿನಸಿ ಪದಾರ್ಥಗಳನ್ನು ನಿರ್ಗತಿಕರಿಗೆ ಹೇಗೆ ತಲುಪಿಸಬೇಕೆಂಬ ಮಾಹಿತಿ ನೀಡಲಾಗಿದೆ. ಸಂಕಷ್ಟದಲ್ಲಿರುವವರಿಗೆ ಧನ ಸಹಾಯ ಮಾಡಲಿಚ್ಛಿಸುವವರು ಜಿಲ್ಲಾಡಳಿತವನ್ನು ಸಂಪರ್ಕಿಸಬಹುದಾಗಿದೆ ಎಂದು ಮನವಿ ಮಾಡಿದರು. ತಹ ಶೀಲ್ದಾರ್‌ ಮೋಹನ್‌, ಸಮಾಜ ಸೇವಕರು, ಸ್ವಯಂ ಸೇವಕರು, ವರ್ತಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.