ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್‌ ರಸ್ತೆ ನಿರ್ಮಾಣ


Team Udayavani, Sep 15, 2019, 2:25 PM IST

tk-tdy-1

ತುಮಕೂರು: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಪ್ರಮಾಣ ತಗ್ಗಿಸಿ ಸುಗಮ ಸಂಚಾರ ಒದಗಿಸುವ ಸಲುವಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕ್ಯಾತಸಂದ್ರದಿಂದ ಗುಬ್ಬಿ ಗೇಟ್ವರೆಗೆ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ 10.5 ಕಿ.ಮೀ ಉದ್ದದ ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್‌ ರಸ್ತೆ ನಿರ್ಮಿಸಲು ಮುಂದಾಗಿದೆ.

ರಾಜಧಾನಿ ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತೆ ಬೆಳವಣಿಗೆಯಾಗುತ್ತಿರುವ ಶೈಕ್ಷಣಿಕ ನಗರದಲ್ಲಿ ದಿನೆದಿನೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಬೆಂಗಳೂರಿನ ನಂತರ ವೇಗವಾಗಿ ವಿಸ್ತಾರಗೊಳ್ಳುತ್ತಿರುವ ತುಮಕೂರಿನ ಪ್ರವಾಸಿ ತಾಣ, ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಹಾಗೂ ಜಿಲ್ಲಾದ್ಯಂತ ಕೈಗಾರಿಕಾ ವಲಯದ ಅಭಿವೃದ್ಧಿಯಿಂದ ನಗರದ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದೆ. ಇದನ್ನು ಮನಗಂಡ ಸ್ಮಾರ್ಟ್‌ಸಿಟಿ ಲಿಮಿಟೆಡ್‌ ನಗರದಲ್ಲಿ ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್‌ ರಸ್ತೆ ನಿರ್ಮಾಣ ಮಾಡಲು ಸಿದ್ಧತೆ ನಡೆಸಿದೆ.

85 ಕೋಟಿ ರೂ. ವೆಚ್ಚದಲ್ಲಿ ಪಿಆರ್‌ಆರ್‌: ಸ್ಮಾರ್ಟ್‌ ಸಿಟಿ ಲಿಮಿಟೆಡ್‌ ಅಧ್ಯಕ್ಷೆ ಡಾ. ಶಾಲಿನಿ ರಜನೀಶ್‌ ಮಾರ್ಗದರ್ಶನದಲ್ಲಿ ಯೋಜನಾ ನಿರ್ವಹಣ ಸಲಹೆದಾರ ಸಂಸ್ಥೆಯಾದ ಐಪಿಇ ಗ್ಲೋಬಲ್ ಲಿ. ಈಗಾಗಲೇ ಪಿಆರ್‌ಆರ್‌ ಕಾಮಗಾರಿ ಕೈಗೊಂಡಿದ್ದು, ಪ್ರಗತಿಯಲ್ಲಿದೆ. ನಗರದ ಹೊರವಲಯದ ಕ್ಯಾತಸಂದ್ರದಿಂದ ಗುಬ್ಬಿ ಗೇಟ್ವರೆಗೆ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ 10.5 ಕಿ.ಮೀ ಉದ್ದದ ಈ ಸಿಗ್ನಲ್ ಫ್ರೀ ಪೆರಿಫೆರಲ್ ರಿಂಗ್‌ ರಸ್ತೆ ನಿರ್ಮಿಸಲಾಗುತ್ತಿದೆ.

ಪೆರಿಫೆರಲ್ ರಿಂಗ್‌ ರಸ್ತೆ ನಿರ್ಮಾಣದಿಂದ ಸಂಚಾರ ದಟ್ಟಣೆ ಕಡಿಮೆಯಾಗುವುದಲ್ಲದೆ ನಗರವನ್ನು ಕಾಡುತ್ತಿರುವ ವಾಯುಮಾಲಿನ್ಯ ಪ್ರಮಾಣವೂ ಕಡಿಮೆಯಾಗಲಿದೆ.

ಪ್ರಸ್ತುತ ಉತ್ತರ-ದಕ್ಷಿಣ ರಾಜ್ಯಗಳಿಗೆ ಸೇರಿದ ಸರಕು ಸಾಗಣೆ ವಾಹನಗಳು ತುಮಕೂರು ಮೂಲಕವೇ ಹಾದು ಹೋಗುತ್ತಿದ್ದು, ಪೆರಿಫೆರಲ್ ರಸ್ತೆ ಪೂರ್ಣಗೊಂಡ ನಂತರ ಶೇ.25 ಸಂಚಾರದ ಒತ್ತಡ‌ ಕಡಿಮೆಯಾಗಲಿದೆ.

ಕಾರಿಡಾರ್‌ ಮಾದರಿ: ಹಾಲಿ ಕೈಗೊಂಡಿರುವ ವರ್ತುಲ ರಸ್ತೆ ಎರಡೂ ದಿಕ್ಕಿನಲ್ಲಿ ಎರಡು ಲೇನ್‌ ಹಾಗೂ ಸರ್ವಿಸ್‌ ರಸ್ತೆ ಹೊಂದಿದೆ. ಪಿಆರ್‌ ರಸ್ತೆಯು 75 ಮೀ. ಅಗಲ ಹೊಂದಲಿದ್ದು,ಚತುಷ್ಪಥ ರಸ್ತೆಯಾಗಲಿದೆ.

ರಸ್ತೆಯು ಕಾರಿಡಾರ್‌ ಮಾದರಿಯಲ್ಲಿರುತ್ತದೆ. ಜೊತೆಗೆ ಎರಡೂ ಬದಿ ಸರ್ವಿಸ್‌ ರಸ್ತೆಯನ್ನೂ ನಿರ್ಮಿಸಲಾಗುವುದು. ಜೊತೆಗೆ ವಿಶಾಲ ಪಾದಚಾರಿ ಮಾರ್ಗದೊಂದಿಗೆ ನೀರಿನ ಕೊಳವೆ, ಕೇಬಲ್ ಸಹಿತ ವಿವಿಧ ಯುಟಿಲಿಟಿ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಹೊಸ ಮಾರ್ಗದಲ್ಲಿ ಗಂಟೆಗೆ 100 ಕಿ.ಮೀ. ವೇಗದಲ್ಲಿ ಸಂಚರಿಸಬಹುದು. ಇದಲ್ಲದೆ ಭವಿಷ್ಯದಲ್ಲಿ ರೈಲು ಸಂಚರಿಸಲು ಸ್ಥಳಾವಕಾಶ ಕಾಯ್ದಿರಿಸಲಾಗುತ್ತದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.