ಜಿಲ್ಲಾಧಿಕಾರಿಗಳ ಆದೇಶ ಇನ್ನೂ ಅನುಷ್ಠಾನವಾಗಿಲ್ಲ 


Team Udayavani, Dec 8, 2021, 4:01 PM IST

ಜಿಲ್ಲಾಧಿಕಾರಿಗಳ ಆದೇಶ ಇನ್ನೂ ಅನುಷ್ಠಾನವಾಗಿಲ್ಲ 

ಚಿಕ್ಕನಾಯಕನಹಳ್ಳಿ: ರಾಗಿ ಕಟಾವು ಯಂತ್ರಕ್ಕೆ ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಪ್ರತಿ ಗಂಟೆಗೆ ನಿಗದಿತ ಬೆಲೆಯನ್ನು ನಿಗದಿಪಡಿಸಿದ್ದಾರೆ, ಆದರೆ, ಜಿಲ್ಲಾಧಿಕಾರಿಗಳ ಆದೇಶ ತಾಲೂಕಿನಲ್ಲಿಪಾಲನೆಯಾಗುತ್ತಿಲ್ಲ. ಕಟಾವು ಯಂತ್ರದ ಏಜೆಂಟರ್‌ ಗಳು ಬೇಡಿಕೆಗೆ ಅನುಗುಣವಾಗಿ ರೈತರಿಂದ ಹಣ ಪಡೆಯುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಇಲ್ಲವೇ ಎಂಬ ಪ್ರಶ್ನೆ ರೈತರಲ್ಲಿ ಕಾಡುತ್ತಿದೆ.

ಅಕಾಲಿಕ ಮಳೆಯಿಂದ ರಾಗಿ ಬೆಳೆ ಬಹುತೇಕ ನೆಲಕಚ್ಚಿದ್ದು, ಅರ್ಧದಷ್ಟು ರಾಗಿಯೂ ಸಹ ರೈತರ ಕೈ ಸೇರದಾಗಿದೆ. ಅಳಿದು ಉಳಿದ ರಾಗಿಯನ್ನು ಕಟಾವುಮಾಡಲು ಕೂಲಿ ಆಳುಗಳ ಸಮಸ್ಯೆ ಒಂದೆಡೆಯಾದರೆ,ಯಂತ್ರಗಳಲ್ಲಿ ಕಟಾವು ಮಾಡಿಸಲು ದುಬಾರಿ ದರದಸಮಸ್ಯೆ ಇನ್ನೊಂದೆಡೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ರೈತರ ಹಿತದೃಷ್ಟಿಯಿಂದ ಪ್ರತಿ ಗಂಟೆಗೆ 2700 ಹಣ ಮೀರದಂತೆ ಬಾಡಿಗೆಯನ್ನು ನಿಗದಿ ಮಾಡಿ ಆದೇಶ ನೀಡಿದ್ದಾರೆ. ಆದರೆ, ತಾಲೂಕಿನಲ್ಲಿ ಈ ಆದೇಶ ಇನ್ನೂ ಅನುಷ್ಠಾನವಾಗಿಲ್ಲ ಎಂಬ ಆರೋಪ ರೈತರಿಂದ ಕೇಳಿ ಬರುತ್ತಿದೆ.

ರಾಗಿ ಕಟಾವು ಅನಿವಾರ್ಯ: ತಾಲೂಕಿನಲ್ಲಿ ಬಹುತೇಕ ರಾಗಿ ಕಟಾವು ಯಂತ್ರಗಳು ಜಿಲ್ಲಾಧಿಕಾರಿಗಳು ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಬೇಡಿಕೆ ಇಡುತ್ತಿದ್ದಾರೆ. ಮಳೆಯಿಂದ ಮತ್ತೆ ಎಲ್ಲಿ ರಾಗಿ ಹಾಳಾಗುತ್ತದೆ ಎಂಬ ಭಯದಿಂದ ರೈತರು ಅನಿವಾರ್ಯವಾಗಿ ಹೆಚ್ಚು ಹಣ ನೀಡಿ, ರಾಗಿಯನ್ನು ಕಟಾವು ಮಾಡಿಸುತ್ತಿದ್ದಾರೆ. ತಾಲೂಕು ಆಡಳಿತ ತಾಲೂಕಿಗೆ ಬಂದಿರುವ ಯಂತ್ರಗಳ ಮಾಲೀಕರು ಅಥವಾ ಏಜೆಂಟರ್‌ ಗಳನ್ನು ಕರೆಸಿ ಸಭೆ ಮಾಡಿ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲನೆ ಮಾಡುವಂತೆ ಸೂಚನೆ ನೀಡಬೇಕಿದೆ. ಇಲ್ಲವಾದರೇ ಜಿಲ್ಲಾಧಿಕಾರಿಗಳು ರೈತರ ಹಿತಕ್ಕಾಗಿ ಮಾಡಿರುವ ಆದೇಶಕ್ಕೆ ಬೆಲೆ ಇಲ್ಲದಂತಾಗುತ್ತದೆ.

ಹೆಚ್ಚು ಹಣ ಪಡೆಯುತ್ತಿರುವ ಯಂತ್ರಗಳ ಮಾಹಿತಿ ನೀಡಿದರೆ,ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸ್‌ ಇಲಾಖೆಗೆ ಇದರ ಬಗ್ಗೆಪರಿಶೀಲನೆ ನಡೆಸುವಂತೆ ತಿಳಿಸಲಾಗುತ್ತದೆ. ಜಿಲ್ಲಾಧಿ ಕಾರಿಗಳು ನಿಗದಿ ಪಡಿಸಿದದರದ ಹಣವನ್ನು ಮಾತ್ರ ಪಡೆಯಬೇಕು. – ತೇಜಸ್ವಿನಿ, ತಹಶೀಲ್ದಾರ್‌, ಚಿಕ್ಕನಾಯಕನಹಳ್ಳಿ

ರಾಗಿ ಕಟಾವು ಯಂತ್ರದ ಮಾಲೀಕರು ಹಾಗೂ ಏಜೆಂಟರ್‌ಗಳು ತಮ್ಮ ಮನಸ್ಸಿಗೆ ಬಂದಂತೆ ದರ ನಿಗದಿಪಡಿಸುತ್ತಿದ್ದಾರೆ. 3500ದಿಂದ 3900ವರಗೆ ಹಣ ಪಡೆಯುತ್ತಿದ್ದಾರೆ. ಡೀಸಿ ಆದೇಶ ನಮಗೆ ಗೊತ್ತೇ ಇಲ್ಲ ಎಂದು ತಿಳಿಸುತ್ತಾರೆ. ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ನಡೆಸಬೇಕು. -ಸುರೇಶ್‌, ರೈತ

– ಚೇತನ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.