ಮೈತ್ರಿ ಅಭ್ಯರ್ಥಿ ಗೆಲ್ಲಿಸಿಕೊಡುವಂತೆ ಡಿಸಿಎಂ ಒತ್ತಾಯ


Team Udayavani, Mar 25, 2019, 3:44 PM IST

maitry-abyar

ತುಮಕೂರು: ಕಾಂಗ್ರೆಸ್‌, ಜೆಡಿಎಸ್‌ ಒಟ್ಟಾಗಿ ರಾಜ್ಯದ ಎಲ್ಲಾ ಕಡೆ ಅಭ್ಯರ್ಥಿಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಿದ್ದೇವೆ. ನಮ್ಮ ಉದ್ದೇಶ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಮಾಜಿ ಶಾಸಕರು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಿಂದ ನಮ್ಮ ರಾಜ್ಯಕೆ ಅನ್ಯಾಯವಾಗಿದೆ. ರಾಜ್ಯದಲ್ಲಿ ರೈತರು ಸರಣಿ ಆತ್ಮಹತ್ಯೆ ಮಾಡಿಕೊಂಡರು ರೈತರಿಗೆ ಯಾವುದೇ ಅನುಕೂಲವಾಗುವಂಥ ಯೋಜನೆಗಳನ್ನು ನೀಡಲಿಲ್ಲ ಎಂದರು.

ಜವಾಬ್ದಾರಿ: ದೇವೇಗೌಡರನ್ನು ಈ ಕ್ಷೇತ್ರದಿಂದ ಗೆಲ್ಲಿಸಬೇಕು ಎನ್ನುವ ಜವಾಬ್ದಾರಿ ನನ್ನ ಮೇಲೆ ಹಾಕಿದ್ದಾರೆ. ನಾವೆಲ್ಲ ಒಗ್ಗಟ್ಟಾಗಿ ಅವರ ಗೆಲುವಿಗೆ ಶ್ರಮಿಸಬೇಕು. ಚುನಾವಣೆಯಲ್ಲಿ ಎಲ್ಲ ರಣತಂತ್ರಗಳನ್ನು ಪ್ರಯೋಗಿಸಿ ದೇವೇಗೌಡರನ್ನು ಗೆಲ್ಲಿಸಬೇಕು ಎಂದರು.

ಸಭೆಯಲ್ಲಿ ಮುದ್ದಹನುಮೇಗೌಡರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ಏಕೆ ಕೈತಪ್ಪಿದೆ. ಇನ್ನು ಕಾಲಾವಕಾಶ ಇದೆ. ಅವರಿಗೆ ತುಮಕೂರು ಲೋಕಸಭಾ ಟಿಕೆಟ್‌ ನೀಡಿ ಎಂದು ಸಂಸದ ಮುದ್ದಹನುಮೇಗೌಡ ಬೆಂಬಲಿತ ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದರು. ಡಾ.ಜಿ.ಪರಮೇಶ್ವರ್‌ ಅವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು ಆದರೆ ಕಾರ್ಯಕರ್ತರು ಅವರ ಮಾತು ಕೇಳದೆ ಸಭೆಯಿಂದ ಹೊರನಡೆದರು.

ಮೈತ್ರಿ ಧರ್ಮವೇ?: ಸಂಸದ ಮುದ್ದಹನುಮೇಗೌಡರಿಗೆ ಟಿಕೆಟ್‌ ತಪ್ಪಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು, ಮುದ್ದಹನುಮೇಗೌಡರು ಸಂಸದರಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಹಾಲಿ ಒಂಬತ್ತು ಜನರಿಗೆ ಟಿಕೆಟ್‌ ನೀಡಿ ಮುದ್ದಹನುಮೇಗೌಡರಿಗೆ ಯಾಕೆ ನೀಡಲಿಲ್ಲ. ಇದು ಮೈತ್ರಿ ಧರ್ಮವೇ ಎಂದರು.

ಸಭೆ ಬಳಿಕ ಮಾತನಾಡಿದ ಡಿಸಿಎಂ ಪರಮೇಶ್ವರ್‌, ಸಭೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ದೇವೇಗೌಡರನ್ನು ಬೆಂಬಲಿಸುವಂತೆ ಕಾರ್ಯಕರ್ತರಿಗೆ ತಿಳಿಸಲಾಗಿದೆ, ದೇವೇಗೌಡರು ನಾಮಪತ್ರವನ್ನು ಸಲ್ಲಿಸುವ ವೇಳೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ದೇವೇಗೌಡರಿಗೆ ಬೆಂಬಲವನ್ನ ನೀಡಲಿದ್ದಾರೆ ಎಂದು ನುಡಿದರು.

ಕಾಂಗ್ರೆಸ್‌ ಜೆಡಿಎಸ್‌ ಒಂದಾಗಿ ಅಭ್ಯರ್ಥಿಗಳನ್ನು ಹಾಕಿದ್ದೇವೆ. ಒಪ್ಪಂದದಂತೆ 8 ಕ್ಷೇತ್ರಗಳನ್ನು ಅವರಿಗೆ ಬಿಟ್ಟುಕೊಟ್ಟಿದ್ದೇವೆ. ತುಮಕೂರು ಕ್ಷೇತ್ರದಲ್ಲಿ ದೇವೇಗೌಡರೇ ಸ್ಪರ್ಧಿಸುತ್ತಿದ್ದಾರೆ. ಮುದ್ದಹನುಮೇಗೌಡರಿಗೆ ಟಿಕೆಟ್‌ ಸಾಧ್ಯವಾಗಿಲ್ಲ. ಅವರಲ್ಲಿ ವಿನಂತಿ ಮಾಡುತ್ತೇನೆ ಎಂದರು.
ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕರಾದ ಎಸ್‌.ರಫೀಕ್‌ ಅಹಮದ್‌, ಎಸ್‌.ಷಫೀ ಅಹಮದ್‌, ಕೆ.ಷಡಕ್ಷರಿ, ಆರ್‌.ನಾರಾಯಣ್‌ ಇತರ ಮುಖಂಡರು ಹಾಜರಿದ್ದರು.

ಸಂಸದರ ಜತೆ ಮಾತನಾಡುವೆ – ಪರಂ: ನಮ್ಮ ಪಕ್ಷದ ಮುಖಂಡರ ಯಾರೇ ಇರಲಿ, ಇಲ್ಲಿಬಂಡಾಯ ಮಾಡಬೇಡಿ, ಎಲ್ಲರೂ ಒಗ್ಗಟ್ಟಾಗಿ ದೇವೇಗೌಡರನ್ನು ಗೆಲ್ಲಿಸೋಣ. ಮುದ್ದಹನುಮೇಗೌಡರಿಗೆ ಉದ್ದೇಶ ಪೂರಿತವಾಗಿ ಟಿಕೆಟ್‌ ತಪ್ಪಿಸಿಲ್ಲ. ಎಲ್ಲ ಪಕ್ಷಗಳು ಒಟ್ಟಿಗೆ ಸೇರಿ ಬಿಜೆಪಿಯನ್ನು ದೂರ ಇಡಬೇಕು ಎಂದು ಹೊಂದಾಣಿಕೆ ಮಾಡಿಕೊಂಡಿದ್ದೇವೆ.

ಮುದ್ದಹನುಮೇಗೌಡರಿಗೆ ಟಿಕೆಟ್‌ ನೀಡಬೇಕು ಎಂದು ಸ್ಕಿನಿಂಗ್‌ ಕಮಿಟಿಯಲ್ಲಿ ನಾನು ಮಾತನಾಡಿದ್ದೇನೆ. ಹಾಲಿ ಇರುವ ಸಂಸದರಿಗೆ ಟಿಕೆಟ್‌ ತಪ್ಪಿಸಬೇಡಿ ಎಂದು ಹೇಳಿದ್ದೆ. ಆದರೆ, ಇದು ಪಕ್ಷದ ವರಿಷ್ಠರ ತೀರ್ಮಾನವಾಗಿದೆ. ಯಾರೂ ಬಂಡಾಯ ಏಳಬೇಡಿ. ನಾನೇ ಸಂಸದರ ಮನೆಗೆ ಹೋಗಿ ಮನವಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ತಿಳಿಸಿದರು.

ಟಾಪ್ ನ್ಯೂಸ್

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.