ದೇವರಾಯನ ದುರ್ಗ ಸಮಗ್ರ ಅಭಿವೃದ್ಧಿ


Team Udayavani, Jan 1, 2020, 3:00 AM IST

devarayana

ತುಮಕೂರು: ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ದೇವರಾಯನ ದುರ್ಗದಲ್ಲಿ 10.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಭರದಿಂದ ಸಾಗಿದೆ. ದೇವರಾಯನದುರ್ಗದ ಯೋಗ ನರಸಿಂಹಸ್ವಾಮಿ ಕ್ಷೇತ್ರ ಹಲವು ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿತ್ತು, ದೇವರಾಯನ ದುರ್ಗಕ್ಕೆ ಬರುವ ಭಕ್ತಾದಿಗಳ ಸಮಸ್ಯೆಯನ್ನು ಸ್ಥಳೀಯರು ಚುನಾವಣಾ ಪ್ರಚಾರಕ್ಕೆ ತೆರಳಿದ್ದಾದ ಡಿ.ಸಿ ಗೌರಿಶಂಕರ್‌ ಅವರ ಗಮನಕ್ಕೆ ತಂದಿದ್ದರು.

ಸ್ಥಳೀಯರ ಸಮಸ್ಯೆ ಆಲಿಸಿದ್ದ ಶಾಸಕ ಡಿ.ಸಿ ಗೌರಿಶಂಕರ್‌ ಮೂಲಭೂತ ಸೌಕರ್ಯ ಕಲ್ಪಿಸಲು ಸಾಕಾರಗೊಳಿಸಿದ್ದಾರೆ. ಎಚ್‌.ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಶಾಸಕ ಗೌರಿಶಂಕರ್‌ ಮುಖ್ಯಮಂತ್ರಿಗಳಿಗೆ ಒತ್ತಡ ತಂದು ದೇವರಾಯನ ದುರ್ಗದ ಸಮಗ್ರ ಅಭಿವೃದ್ಧಿಗೆ 10.5 ಕೋಟಿ ಅನುದಾನ ಮಂಜೂರು ಮಾಡಿಸಿ ದೇವರಾಯನ ದುರ್ಗದಲ್ಲಿ ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿವೆ.

ಶಾಸಕ ಡಿ.ಸಿ ಗೌರಿಶಂಕರ್‌ ವಾರಕ್ಕೊಮ್ಮೆ ದೇವರಾಯನದುರ್ಗಕ್ಕೆ ಭೇಟಿ ನೀಡಿ ಗುತ್ತಿಗೆದಾರರು ಹಾಗೂ ಅಧಿಕಾರಿ ಗಳೊಂದಿಗೆ ಮಾತುಕತೆ ನಡೆಸಿ ಗುಣಮಟ್ಟದ ಕಾಮಗಾರಿ ಮಾಡಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡುತ್ತಿರುವ ಪರಿಣಾಮ ಕಾಮಗಾರಿಗಳು ವೇಗ ಪಡೆದಿವೆ. ಶಾಸಕ ಡಿ.ಸಿ ಗೌರಿಶಂಕರ್‌ ಅವರ ಖಡಕ್‌ ಸೂಚನೆ ಪರಿಣಾಮ ದೇವಸ್ಥಾನದ ರಥ ಬೀದಿಯ ಸಿಸಿ ರಸ್ತೆ ಕಾಮಗಾರಿ ಪ್ರಕ್ರಿಯೆ ಚುರುಕಿನಿಂದ ಸಾಗಿದೆ.

ದೇವಸ್ಥಾನದ ವಿಮಾನ ಗೋಪುರ ಸ್ಥಳದಿಂದ ರಥಗೋಪುರ ರಸ್ತೆ ದುರಸ್ತಿ ಕಾರ್ಯ ಚಾಲ್ತಿಯಲ್ಲಿದೆ. ಒಳ ಚರಂಡಿ ಕಾಮಗಾರಿಗಳೂ ಸಹ ಪ್ರಗತಿಯಲ್ಲಿದ್ದು, ಕಾಮಗಾರಿಗೆ ಬೇಕಾದ ಕಲ್ಲು, ಜೆಲ್ಲಿ, ಮರಳು, ಪೈಪು, ಕಬ್ಬಿಣ ಇನ್ನಿತರೆ ಸಾಮಾನುಗಳನ್ನು ದಾಸ್ತಾನು ಮಾಡಲಾಗಿದೆ. ಬೋಜನಾಲಯದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.

ನಾಮದ ಚಿಲುಮೆ ಆರತಿ ಬಂಡೆ ತಿರುವು ರಸ್ತೆಯ ಇಕ್ಕೆಲಗಳಲ್ಲಿ ರಸ್ತೆ ಮಧ್ಯೆ ಬಿದ್ದಿದ್ದ ಗುಂಡಿಗಳನ್ನು ಲೋಕೋಪಯೋಗಿ ಇಲಾಖೆ ಡಾಂಬರು ಹಾಕಿ ಮುಚ್ಚಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಒಟ್ಟಾರೆ ದೇವರಾಯನ ದುರ್ಗದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕ್ಷೇತ್ರದ ಜನರು ಶಾಸಕ ಡಿ.ಸಿ ಗೌರಿಶಂಕರ್‌ ಅವರನ್ನು ಪ್ರಶಂಸಿಸಿದ್ದಾರೆ.

ದೇವರಾಯನದುರ್ಗ ಅತೀ ಪುಣ್ಯ ಕ್ಷೇತ್ರ. ನಾಡಿನ ಮೂಲೆ ಮೂಲೆಗಳಲ್ಲಿ ಈ ಸನ್ನಿಧಿಯ ಭಕ್ತರಿದ್ದಾರೆ. ಆದರೆ ಈ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದಿ ಕಾಣುತ್ತಿತ್ತು, ಇಲ್ಲಿ ಮೂಲಬೂತ ಸೌಕರ್ಯ ಕಲ್ಪಿಸುವಂತೆ ಇಲ್ಲಿನ ಸ್ಥಳೀಯರು ಹಾಗೂ ಭಕ್ತರು ಒತ್ತಾಯಿಸುತ್ತಿದ್ದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದ 10.5 ಕೋಟಿ ಅನುದಾನ ಮಂಜೂರು ಮಾಡಿಸಿದೆ. ಇಂದು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ, ಭಕ್ತರ ಮುಖದಲ್ಲಿ ನೆಮ್ಮದಿ ಮೂಡಿದೆ ಈ ಕೆಲಸದಿಂದ ನನಗೆ ದೇವರ ಸೇವೆ ಮಾಡಿದ ತೃಪ್ತಿ ಸಿಕ್ಕಿದೆ.
-ಡಿ.ಸಿ ಗೌರಿಶಂಕರ್‌. ಗ್ರಾಮಾಂತರ ಶಾಸಕ

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.