ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ: ಶಾಸಕ ಡಾ.ಜಿ ಪರಮೇಶ್ವರ್


Team Udayavani, Apr 23, 2022, 12:48 PM IST

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ: ಶಾಸಕ ಡಾ.ಜಿ ಪರಮೇಶ್ವರ್

ಕೊರಟೆಗೆರೆ: ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ ಕ್ಷೇತ್ರ ಅಭಿವೃದ್ಧಿಯೇ ನನ್ನ ಉದ್ದೇಶ ಎಂದು ಶಾಸಕ ಡಾ.ಜಿ ಪರಮೇಶ್ವರ್ ತಿಳಿಸಿದರು.

ತಾಲೂಕಿನ ಕೋಳಾಲ ಹೋಬಳಿಯ ಸುಮಾರು 5 ಕೋಟಿಯ ಹಲವು ಕಾಮಗಾರಿಗಳನ್ನು ನೀಲಗೊಂಡನಹಳ್ಳಿ, ಎಲೆರಾಂಪುರ, ವಜ್ಜನಕುರಿಕೆ,ಚಿನ್ನಹಳ್ಳಿ ಗ್ರಾ.ಪಂಗಳಲ್ಲಿನ ಹಲವು ಗ್ರಾಮಗಳ ಸಿಸಿ ರಸ್ತೆ,ಶಾಲಾ ಕಟ್ಟಡ, ಸಮುದಾಯ ಭವನ, ಗ್ರಾ.ಪಂ ಕಟ್ಟಡ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿ ಮಾತನಾಡಿದರು.

ವಸತಿ ಸಚಿವ ಸೋಮಣ್ಣ ಅವರಿಂದ 5 ಸಾವಿರ  ಮನೆಯನ್ನು ಮಂಜೂರು ಮಾಡಿಸಿಕೊಂಡಿದ್ದು ಗ್ರಾಮ ಸಭೆಗಳನ್ನು ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ವಿತರಿಸಿಸುವುದಾಗಿ ಹೇಳಿದರು.

ಪ್ರತಿ ಹಂತದಲ್ಲಿಯೂ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನನ್ನ ನಿರಂತರ ಪ್ರಯತ್ನ ಇದ್ದೇ ಇರುತ್ತದೆ. ನಾನು ಕ್ಷೇತ್ರದಲ್ಲಿ 15 ವರ್ಷದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಆದರೆ ನನಗೆ ಸಿಕ್ಕಿರುವಂತಹ ಒಂಬತ್ತು ವರ್ಷ ಆಕಾಶದಲ್ಲಿ ಸ್ಮರಣೀಯ ಕೆಲಸಗಳನ್ನು ಕ್ಷೇತ್ರದಲ್ಲಿ ಮಾಡಿದ್ದೇನೆ ಎಂದು ತಿಳಿಸಿದರು.

ಸಿಂಗ್ರಿಹಳ್ಳಿ ಗ್ರಾಮದಲ್ಲಿ 30 ಮತ್ತು ವಜ್ಜನಕುರಿಕೆ ಗ್ರಾಮದಲ್ಲಿ ವಯೋವೃದ್ಧ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳಿಗೆ ಕಂದಾಯ ಇಲಾಖೆಯ ವತಿಯಿಂದ ಶಾಸಕರ ನೇತೃತ್ವದಲ್ಲಿ ಪಿಂಚಣೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು.

ಎಲೆರಾಂಪುರ ಗ್ರಾ.ಪಂ ವ್ಯಾಪ್ತಿಯ ಸಿಂಗ್ರಿಹಳ್ಳಿ ಗ್ರಾಮಸ್ಥರು, ಗ್ರಾಮಕ್ಕೆ ಸರಕಾರಿ ಬಸ್, ಪಶು ಆಸ್ಪತ್ರೆ, ಅಂಬೇಡ್ಕರ್ ಭವನ, ಗ್ರಾಮ ಲೆಕ್ಕಿಗರ ನಿವಾಸ ದುರಸ್ಥಿ, ಗ್ರಾಮದಲ್ಲಿನ ತಿಮ್ಮಪ್ಪ ಸ್ವಾಮಿ ದೇವಾಲಯವನ್ನು ಅಭಿವೃದ್ಧಿ ಪಡಿಸುವುದು ಸೇರಿದಂತೆ ಇತರೆ ಕೆಲಸಗಳನ್ನು ಮಾಡಿಕೊಡುವಂತೆ ಶಾಸಕರನ್ನು ಮನವಿ ಮಾಡಿದರು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಎಲ್ಲವನ್ನೂ ಪೂರೈಸುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ  ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅರಕೆರೆ ಶಂಕರ್, ತಹಶೀಲ್ದಾರ್ ನಹೀದಾ ಜಮ್ ಜಮ್,ವಜ್ಜನಕುರಿಕೆ ಗ್ರಾ.ಪಂ ಅಧ್ಯಕ್ಷ ನಾಗೇಂದ್ರ, ಎಲೆರಾಂಪುರ ಗ್ರಾ.ಪಂ ಗಂಗಾಭಿಕೆ, ಉಪಾಧ್ಯಕ್ಷ ಉಮೇಶ್ ಚಂದ್ರ, ನೀಲಗೊಂಡನಹಳ್ಳಿ ಗ್ರಾ.ಪಂ ಉಪಾಧ್ಯಕ್ಷ ಕಿರಣ್ ಕುಮಾರ್, ಬಿಇಒ ಸುಧಾಕರ್, ಎಇಇ ರವಿಕುಮಾರ್ ಸೇರಿದಂತೆ ಇತರರು ಇದ್ದರು.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.