ಮಿಣ್ ಸಂದ್ರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ


Team Udayavani, Jan 21, 2023, 10:41 PM IST

1-sadsad

ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಮಿಣ್ ಸಂದ್ರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ  ಕಾರ್ಯಕ್ರಮ ಜರುಗಿತು.

ತಹಶೀಲ್ದಾರ್ ನಾಹಿದಾ ಜಮ್ ಜಮ್ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ ಸರ್ಕಾರ ರೈತರಿಗೆ ಹಲವಾರು ಸೌಲಭ್ಯಗಳನ್ನು ಹೊರತರುತ್ತಿದೆ. ಸರ್ಕಾರ ಗ್ರಾಮೀಣ ಜನತೆಗಾಗಿ ಉದ್ಯೋಗ ಖಾತರಿ ಮೂಲಕ ರೈತರ ಜಮೀನು ಹಾಗೂ ತಮ್ಮ ತಮ್ಮ ಗ್ರಾಮಗಳಲ್ಲಿ ಕೂಲಿ ಕೆಲಸಕ್ಕೆ ಉತ್ತೇಜನ ನೀಡಲಾಗುತ್ತಿದೆ.ಕಂದಾಯ ಇಲಾಖೆಯ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಮನೆ ಬಾಗಿಲಿಗೆ ಅಗತ್ಯ ಸೇವೆಗಳನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ ರೇಷ್ಮೆ ಕೃಷಿ ಹಾಗೂ ಕುರಿ-ಮೇಕೆ ಸಾಕಾಣಿಕೆಗಳ ಮೂಲಕ ರೈತರು ನಮ್ಮಲ್ಲಿಯೇ ಉದ್ಯೋಗ ಸೃಷ್ಟಿಸಿಕೊಂಡು ಇತರರಿಗೆ ಉದ್ಯೋಗ ಕಲ್ಪಿಸುತ್ತಿರುವುದು ಅತ್ಯಂತ ಸಂತಸದ ವಿಷಯ. ಗ್ರಾಮೀಣಾಭಿವೃದ್ಧಿಯೇ  ಸರಕಾರದ ಗುರಿ ಎಂದು ತಿಳಿಸಿದರು.

ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದನಗೌಡ ಮಾತನಾಡಿ, ರಾಸುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು ನಮ್ಮ ಇಲಾಖೆಯು ಯುದ್ದೋಪಹಾದಿಯಲ್ಲಿ ರಾಸುಗಳಿಗೆ ಲಸಿಕೆ ಚಿಕಿತ್ಸೆ ನೀಡಲಾಗಿದೆ. ಚರ್ಮ ಗಂಟು ಕಾಯಿಲೆಯಿಂದ ಸಾವನ್ನಪ್ಪಿದ ರಾಸುಗಳಿಗೆ ಸರ್ಕಾರದಿಂದ ಪರಿಹಾರದ ಹಣವನ್ನು ಸಂದಾಯ ಮಾಡಲಾಗುತ್ತಿದೆ.  ರಾಸುಗಳಲ್ಲಿ ಈ ರೋಗ ಕಂಡು ಬಂದಲ್ಲಿ ನೇರವಾಗಿ ಇಲಾಖೆಯ ಗಮನಕ್ಕೆ ತಂದು ಔಷದೋಪಚಾರ ಮಾಡಬಹುದಾಗಿದೆ. ರೈತರು ಕೊಟ್ಟಿಗೆಗಳನ್ನು ಸ್ವಚ್ಚವಾಗಿರಿಸತ್ತಕ್ಕದ್ದು, ಕಾಲು ಬಾಯಿ ಜ್ವರಕ್ಕೆ ಈ ಗ್ರಾಮದಲ್ಲಿ ಲಸಿಕೆ ಸಹ ನೀಡಲಾಗಿದೆ ರಾಸುಗಳಿಗೆ   ಸರ್ಕಾರದ ಸಬ್ಸಿಡಿ ದರದಲ್ಲಿ  ರಾಸುಗಳ ವಿಮೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬ ರೈತರು ವಿಮೆ ಮಾಡಿಸಿಕೊಳ್ಳಲು ಮನವಿ ಮಾಡಿದರು. ಎಸ್ಸಿ ಎಸ್ಟಿ ರೈತರಿಗೆ ರಬ್ಬರ್ ನೆಲಹಾಸು ರಾಸುಗಳಿಗೆ ನೀಡಲಾಗುತ್ತಿದೆ. ರಸಮೇವು ಘಟಕ, ಹಾಗೂ ಪರಿಕರಗಳ ವಿತರಣೆ ಮಾಡಲಾಗುತ್ತಿದೆ ರಾಸುಗಳಿಗೆ ಸತ್ವಗಳಿರುವ ಮೇವನ್ನು ಬಳಸಬೇಕು. ಸರ್ಕಾರದ ಅಮೃತ ಯೋಜನೆ ಗುರಿಯನ್ನು ಸರ್ಕಾರ ನೀಡಿದ್ದು ಅರ್ಜಿ ಕರೆದಿದ್ದು ಸರ್ಕಾರ ಮಂಜೂರು ಮಾಡಲಿದೆ. ಹಾಗೂ ಎಸ್ಸಿ ಪಿ.ಟಿ.ಎಸ್. ಅಡಿಯಲ್ಲಿ ಕುರಿ ಮೇಕೆ ಘಟಕಕ್ಕೂ ಉತ್ತೇಜನ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಾವತ್ತೂರು ಗ್ರಾ. ಪಂ ಅದ್ಯಕ್ಷರಾದ ಅನುಸೂಯಮ್ಮ, ಸದಸ್ಯರಾದ ಮಂಜುನಾಥ್, ಭಾಗ್ಯಮ್ಮ,  ಹನುಮಂತರಾಯಪ್ಪ, ಕುಮಾರ್, ರೇಷ್ಮೆ ಇಲಾಖೆಯ ಉಪ ನಿರ್ದೇಶಕರಾದ ವೈ.ಕೆ ಬಾಲಕೃಷ್ಣ, ವೈಧಾದ್ಯಿಕಾರಿ ಡಾ. ವಿಜಯ ಕುಮಾರ್ , ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು, ಪಂಚಾಯತ್ ರಾಜ್ ಇಂಜಿನಿಯರ್ ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಉಮಾದೇವಿ, ತೋಟಗಾರಿಕೆಯ ಗೋವಿಂದರಾಜು, ಮೀನುಗಾರಿಕೆ ಸಹಾಯಕ ನಿರ್ದೇಶಕ ಮಹೇಶ್ವರ್, ವಲಯ ಅರಣ್ಯಾಧಿಕಾರಿ ಸುರೇಶ್,  ಎ.ಡಿ ಎಲ್.ಆರ್  ಬಿ.ಸಿ ಮಹೇಶ್,  ರಾಜಸ್ವ ನಿರೀಕ್ಷಕ ಜಯಪ್ರಕಾಶ್, ಪ್ರತಾಪ್ ಕುಮಾರ್ , ಮುಖ್ಯ ಶಿಕ್ಷಕ ಗೋಪಿನಾಥ್ ,  ಗ್ರಾಮ ಲೆಕ್ಕಾಧಿಕಾರಿಗಳಾದ ರಂಜಿತಾ, ರಶ್ಮಿ, ಮಧು, ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.