![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 3, 2020, 6:53 AM IST
ಕುಣಿಗಲ್: ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಕೋವಿಡ್ 19 ಸೋಂಕಿತ ಮೃತ ವ್ಯಕ್ತಿಯನ್ನು ಸಂಬಂಧಿಕರು, ಪಿಪಿಇ ಕಿಟ್ ಧರಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ತಾಲೂಕಿನ ಎಡಿಯೂರು ಹೋಬಳಿ ತಿಮ್ಮಗೌಡನಪಾಳ್ಯದಲ್ಲಿ ನಡೆದಿದೆ. ಗ್ರಾಮದ 68 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟ ವ್ಯಕ್ತಿ.
ಆರೋಗ್ಯ ಇಲಾಖೆಯ ಅಧಿಕಾರಿಗಳು ಕೋವಿಡ್ನ ಕ್ರಮವನ್ನು ಅನುಸರಿಸಿ ಅಂತ್ಯಸಂಸ್ಕಾರ ಮಾಡದೇ, ಮೃತನ ಸಂಬಂಧಿಕರಿಗೆ ಪಿಪಿಇ ಕಿಟ್ ನೀಡಿ ಅಂತ್ಯಸಂಸ್ಕಾರ ಮಾಡಿಸಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಮೃತ ಹಾಗೂ ಆತನ ಪತ್ನಿ ವಾರದ ಹಿಂದೆ ಬೆಂಗಳೂರಿನ ಸಂಬಂಧಿಯ ಶವ ಸಂಸ್ಕಾರಕ್ಕೆ ಹೋಗಿದ್ದು, ಅಲ್ಲಿಂದ ವಾಪಸಾದ ಬಳಿಕ ಕೋವಿಡ್ ತಪಾಸಣೆಗೊಳಗಾದರು.
ಆದರೆ ವರದಿ ಬರುವ ಮುನ್ನವೇ ವೃದ್ಧ ಜೂ.30 ರಂದು ಮೃತಪಟ್ಟಿದ್ದು, ಜು.1 ರಂದು ವರದಿ ಬಂದು ಸೋಂಕು ದೃಢಪಟ್ಟಿದೆ. ಆದರೆ ವರದಿ ಬರುವವರೆಗೂ ಶವವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ವಶ ಪಡಿಸಿಕೊಳ್ಳದೇ,ಪಿಪಿಇ ಕಿಟ್ಗಳನ್ನು ಮೃತನ ಸಂಬಂಧಿಕರಿಗೆ ನೀಡಿ ಶವ ಸಂಸ್ಕಾರ ಮಾಡಿಸಿದ್ದಾರೆ. ಅಂತ್ಯ ಸಂಸ್ಕಾರದಲ್ಲಿ ನೂರಾರು ಜನರು ಭಾಗವಹಿಸಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಕೋವಿಡ್ ನಿಯಮ ದಂತೆ ಶವ ಸಂಸ್ಕಾರ ಮಾಡಲಾಗಿದೆ. ಇಲಾಖೆ ಯಿಂದ ಯಾವುದೇ ಲೋಪವಾಗಿಲ್ಲ, ಮೃತರ ಹೆಂಡತಿ ಸೇರಿದಂತೆ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ಒಂಬತ್ತು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡಬಾರದು.
-ವಿ.ಆರ್.ವಿಶ್ವನಾಥ್, ತಹಶೀಲ್ದಾರ್
ಅಧಿಕಾರಿಗಳ ಯಡವಟ್ಟಿದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಮೃತ ವ್ಯಕ್ತಿಯ ಶವ ಸಂಸ್ಕಾರದ ವೇಳೆ ತಾ. ಆಡಳಿತ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇರಲಿಲ್ಲ. ಮೃತರು ಸಾಯುವ ಮುನ್ನ ಕಗ್ಗೆರೆ, ಗೌಡಗೆರೆ, ಅಮೃತೂರು, ಕುಣಿಗಲ್ ತಾಲೂಕು ಕಚೇರಿ ಸೇರಿದಂತೆ ಹಲವೆಡೆ ಸಂಚರಿಸಿರುವುದು ಆತಂಕಕ್ಕೆ ಕಾರಣವಾಗಿದೆ.
-ಲವ, ವಕೀಲ
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.