ದ್ವೇಷ, ಅಸೂಯೆ ನಿಯಂತ್ರಿಸಬೇಕಿದೆ; ರಾಹುಲ್‌ ಗಾಂಧಿ

ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖರೆನಿಸಿರುವ ಅವರಿಗೆ ದೇವರು ನಾಡನ್ನು ಮುನ್ನಡೆಸುವ ಸ್ಫೂರ್ತಿ, ಶಕ್ತಿ ನೀಡಲೆಂದು ಹಾರೈಸಿದರು.

Team Udayavani, Apr 1, 2022, 5:34 PM IST

ದ್ವೇಷ, ಅಸೂಯೆ ನಿಯಂತ್ರಿಸಬೇಕಿದೆ; ರಾಹುಲ್‌ ಗಾಂಧಿ

ತುಮಕೂರು: ದೇಶದಲ್ಲಿ ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರೂ ಬದುಕಬೇಕಿದೆ. ಸದ್ಯ ದ್ವೇಷ, ಅಸೂಯೆ ಭಾವನೆ ಹೆಚ್ಚಾಗಿ ಹರಡುತ್ತಿದ್ದು, ಇದನ್ನು ನಿಯಂತ್ರಿಸುವ ಕೆಲಸ ಆಗಬೇಕಿದೆ. ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ತಪೋನೆಲವಾದ ಸಿದ್ಧಗಂಗೆಯಲ್ಲಿ ಈ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದರು.

ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಗುರುವಂದನಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಮಠಕ್ಕೆ ಭೇಟಿ ನೀಡಿದ ರಾಹುಲ್‌ ಗಾಂಧಿ ಅವರು, ಗದ್ದುಗೆ ದರ್ಶನ ಪಡೆದು ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಸ್ವಲ್ಪ ಸಮಯ ಧ್ಯಾನ ಮಾಡಿದರು. ನಂತರ ಮಠದ ಮಕ್ಕಳ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಠಕ್ಕೂ ತಮ್ಮ ಕುಟುಂಬಕ್ಕೂ ಇರುವ ನಂಟನ್ನು ಮೆಲುಕು ಹಾಕಿ ಮಾತನಾಡಿದರು.

ಡಾ.ಶಿವಕುಮಾರ ಸ್ವಾಮೀಜಿ ಅವರು ಬದುಕಿದ್ದಾಗ ಶ್ರೀಮಠಕ್ಕೆ ಭೇಟಿ ನೀಡಿದ್ದೆ. ಎರಡನೇ ಭೇಟಿಯಲ್ಲಿ ಅವರ ಅಗಲಿಕೆಯ ದುಃಖ ಕಾಡುತ್ತಿದೆ. ಭವ್ಯ ಭಾರತದ ಬಗ್ಗೆ ದೂರದೃಷ್ಟಿ ಹೊಂದಿದ್ದ ಶ್ರೀಗಳು ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹ ಮೂಲಕ ಭವಿಷ್ಯ ರೂಪಿಸಿಕೊಟ್ಟಿದ್ದಾರೆ. ಬಸವಣ್ಣನವರ ಆಶಯದಂತೆ ಎಲ್ಲರೂ ಒಟ್ಟಾಗಿ ಬಾಳಬೇಕು ಎಂದರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ಧ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಿ, ನಾವೆಲ್ಲರೂ ಮಾನವೀಯತೆಯ ಹಾದಿಯಲ್ಲಿ ದ್ವೇಷ, ಅಸೂಯೆ ತೊರೆದು ಬಾಳಬೇಕಿದೆ ಎಂದು ನುಡಿದರು. ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರತಿಭಾ ವಂತರು, ಗುಣಸಂಪನ್ನರ ನಾಯಕತ್ವ ಅತ್ಯವಶ್ಯಕ. ರಾಹುಲ್‌ಗಾಂಧಿ ಅವರು ಇಂತಹ ಗುಣಸಂಪನ್ನರಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖರೆನಿಸಿರುವ ಅವರಿಗೆ ದೇವರು ನಾಡನ್ನು ಮುನ್ನಡೆಸುವ ಸ್ಫೂರ್ತಿ, ಶಕ್ತಿ ನೀಡಲೆಂದು ಹಾರೈಸಿದರು.

ಸಮಾರಂಭದಲ್ಲಿ ರಾಹುಲ್‌ಗಾಂಧಿ ಭಾಷಣವನ್ನು ವಿಧಾನಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಕನ್ನಡಕ್ಕೆ ಅನುವಾದಿಸಿದರು. ಮಠದ ಮಕ್ಕಳ ಸಾಮೂಹಿಕ ಪ್ರಾರ್ಥನೆ,  ಬಸವಣ್ಣನವರ ವಚನಕ್ಕೆ ತಲೆದೂಗಿದ ರಾಹುಲ್‌ ಗಾಂಧಿ ಮಕ್ಕಳೊಡನೆ ಗ್ರೂಪ್‌ ಫೋಟೋ ಕ್ಲಿಕ್ಕಿಸಿಕೊಂಡಿದ್ದು ಗಮನಸೆಳೆಯಿತು. ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲಾ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಸೇರಿ ಹಲವು ಗಣ್ಯರು ಹಾಜರಿದ್ದರು.

ಕಾರ್ಯಕರ್ತರ ಪರಿಶ್ರಮದಿಂದ ಕಾಂಗ್ರೆಸ್‌ ಪಕ್ಷದ ಉಳಿವು ಸಾಧ್ಯ

ನೆಲಮಂಗಲ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹಮತ ನೀಡುವ ಮೂಲಕ ಬಿಜೆಪಿಯನ್ನು ರಾಜ್ಯದಿಂದ ಓಡಿಸಲು ಕಾರ್ಯಕರ್ತರು ಸಂಪೂರ್ಣ ಸಹಕಾರ ನೀಡಬೇಕು ಎಂದು ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಮನವಿ ಮಾಡಿದರು.

ತಾಲೂಕಿನ ಬೊಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರ ಸಮೀಪ ತುಮಕೂರಿನಿಂದ ಬೆಂಗ ಳೂರಿಗೆ ಹೋಗುವ ಮಾರ್ಗ  ಮಧ್ಯೆ ಕಾಂಗ್ರೆಸ್‌ ಮುಖಂಡ ಶ್ರೀನಿವಾಸ್‌ ಹಾಗೂ ಮಾಜಿ ಸಚಿವ ಅಂಜನಮೂರ್ತಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತದ ಮೂಲಕ ಅಧಿಕಾರಕ್ಕೆ ಬರಬೇಕಾಗಿದೆ. ಕಾರ್ಯಕರ್ತರ ಪರಿಶ್ರಮದಿಂದ ಪಕ್ಷದ ಉಳಿವು ಸಾಧ್ಯ ಎಂದರು.

ಕಾರ್ಯಕರ್ತರ ಜಮಾವಣೆ: ತಾಲೂಕಿನ ಮುಖಂಡರು ರಾಹುಲ್‌ ಗಾಂಧಿ ಸ್ವಾಗತಕ್ಕೆ ಬೂತ್‌ ಮಟ್ಟದಿಂದ ಕಾರ್ಯಕರ್ತರನ್ನು ಕರೆಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 48ರ ಟೋಲ್‌ ಬಳಿ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.