ಭಾರಿ ಮಳೆಯಿಂದ ನೂರಾರು ಎಕರೆ ಜಮೀನಿಗಳಿಗೆ ನುಗ್ಗಿದ ಕೆರೆ ನೀರು : ಕಂಗಾಲಾದ ರೈತರು


Team Udayavani, Oct 16, 2022, 11:48 AM IST

koratagere

ಕೊರಟಗೆರೆ : ಭಾರಿ ಮಳೆಯ ಅವಾಂತರಕ್ಕೆ ನೂರಾರು ರೈತರ ಬದುಕು ಮೂರಾಬಟ್ಟೆಯಾಗುತ್ತಿದ್ದು, ಕೆರೆಯ ನೀರು ನುಗ್ಗಿ ನೂರಾರು ಎಕರೆ ಜಮೀನು ಜಲಾವೃತ ಗೊಂಡು ಬೆಳೆ ಹಾಗೂ ಅಡಿಕೆ ತೋಟ ನಾಶವಾಗುವ ಭೀತಿಯಲ್ಲಿ ರೈತರು ಕಂಗಾಲಾಗಿರುವ ಪರಿಸ್ಥಿತಿ ಕೊರಟಗೆರೆ ತಾಲೂಕಿನಲ್ಲಿ ನಿರ್ಮಾಣಗೊಂಡಿದೆ .

ತಾಲೂಕಿನ ದೊಡ್ಡಸಾಗ್ಗೆರೆ ಕೆರೆಯ ತೂಬಿನಿಂದ ಹಾದು ಹೋಗುವ ನೀರು ಸಮರ್ಪಕವಾಗಿ ಹಾದು ಹೋಗಲು ಕಾಲುವೆ ಮುಚ್ಚಿ ಹೋದ ಪರಿಣಾಮ ಅಡಿಕೆ ತೋಟ ಹಾಗೂ ರೈತರ ಬೆಳೆಗೆ ನುಗ್ಗಿ ಬೆಳೆ ನಾಶವಾಗುವುದರ ಜೊತೆಗೆ ಬೆಳೆದು ನಿಂತ ಅಡಿಕೆ ತೋಟ ಕೊಚ್ಚಿ ಹೋಗಿ ನಾಶವಾಗುವ ಭೀತಿಯಲ್ಲಿ ರೈತರು ಆತಂಕ ಪಡುತ್ತಿರುವುದು ಕಂಡು ಬರುತ್ತಿದೆ.

ದೊಡ್ಡ ಸಾಗ್ಗೆರೆ ಹಾಗೂ ಗಜಮುದ್ದನಹಳ್ಳಿ ಮಧ್ಯಭಾಗದಲ್ಲಿ ಬರುವಂತಹ ದೊಡ್ಡಸಾಗ್ಗೆರೆ ಕೆರೆ ಸುತ್ತಮುತ್ತಲಿನ 4-5 ಹಳ್ಳಿಗಳ ಜನರ ಮನೆಗಳಿಗೆ ನುಗ್ಗುವ ಆತಂಕಕ್ಕೆ ಎಡೆ ಮಾಡುವುದರ ಜೊತೆಗೆ ನೂರಾರು ಎಕರೆ ಜಮೀನಿನಲ್ಲಿ ಬೆಳೆದು ನಿಂತ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳು ಕೊಚ್ಚಿ ಹೋಗುವುದರ ಜೊತೆಗೆ ಸತತ ಮಳೆ ನೀರಿನಿಂದ ಬೆಳೆ ನಾಶವಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಾರಿ ಸತತ ಮಳೆಯಿಂದ ಅತಿವೃಷ್ಟಿ ಹೆಚ್ಚಾಗಿ ಎಲ್ಲಾ ಕೆರೆಕಟ್ಟೆಗಳು ತುಂಬಿ ನೀರಿನ ಹರಿವು ಹೆಚ್ಚಾಗುತ್ತಿರುವುದರಿಂದ ಈ ಹಿಂದಿನ ರಾಜಗಾಲುವೆಗಳು ಸೇರಿದಂತೆ ಇನ್ನಿತರ ಕಾಲುವೆಗಳು ಮುಚ್ಚಿ ಹೋಗಿರುವ ಪರಿಣಾಮ ಅನಿವಾರ್ಯವಾಗಿ ರೈತರ ಜಮೀನುಗಳ ಮೇಲೆ ನೀರು ನುಗ್ಗುತ್ತಿದ್ದು ಇದರಿಂದ ಬೆಳೆ ನಾಶವಾಗಿ ಸತತ ಬರಗಾಲದಿಂದ 20 – 25 ವರ್ಷ‌ ನೊಂದು- ಬೆಂದು ಹೋದ ರೈತನ ಬಾಳಿಗೆ ಅತಿವೃಷ್ಟಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆದ 15-20 ವರ್ಷಗಳ ಭೀಕರ ಬರಗಾಲದ ಸಂದರ್ಭದಲ್ಲಿ ಇಲ್ಲಿನ ರೈತರು ಕಾಲುವೆ ಒತ್ತುವರಿ ಮಾಡಿಕೊಂಡಿರುವ ಕಾರಣ ಜೊತೆಗೆ ಇಲ್ಲಿನ ಜನ ಒತ್ತುವರಿಯ ಬಗ್ಗೆ ಈ ಮಟ್ಟದ ನೀರು ಮುಂದೊಂದು ದಿನ ಬರುವ ಅರಿವು ಇಲ್ಲದ ಕಾರಣ ಇಂದು ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೊತೆಗೆ ಹೊಸದಾಗಿ ನಿರ್ಮಾಣವಾಗಿರುವ ರಸ್ತೆಗೆ ಸೇತುವೆ ನಿರ್ಮಾಣ ಮಾಡದ ಕಾರಣ ನೀರು ಹಾದು ಹೋಗಲು ತಡೆ ಒಡ್ಡಿದ ಪರಿಣಾಮ ಕಾಲುವೆಯಲ್ಲಿ ಹಾದು ಹೋಗುವ ಬದಲು ರೈತರ ಜಮೀನುಗಳಿಗೆ ನೀರು ನುಗ್ಗಿದ ಕಾರಣ ರೈತರ ಬೆಳೆಗಳು ನಾಶವಾಗಿವೆ.

ಈ ಭಾಗದ ನೂರಾರು ರೈತರು ಹಲವು ಬಾರಿ ಜಿಲ್ಲಾ ಪಂಚಾಯತ್ ಹಾಗೂ ಸಣ್ಣ ನೀರಾವರಿ ಇಲಾಖೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಯಾವುದೇ ಅಧಿಕಾರಿಗಳು ಸ್ಥಳ ಬಾರದೆ ಈಗಿನ ಪರಿಸ್ಥಿತಿ ನಿರ್ಮಾಣಕ್ಕೆ ಅಧಿಕಾರಿಗಳೇ ನೇರ ಹೊಣೆಗಾರಿಕೆಯಾಗಿದ್ದು, ತ್ವರಿತವಾಗಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಜೊತೆಗೆ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.