ಹೇಮೆ ನಾಲೆ ಅಗಲೀಕರಣ ಶೀಘ್ರ


Team Udayavani, Dec 25, 2019, 3:00 AM IST

heme

ಹುಳಿಯಾರು: 1030 ಕೋಟಿ ರೂ. ವೆಚ್ಚದಲ್ಲಿ ತುಮಕೂರು ಜಿಲ್ಲೆಯಲ್ಲಿನ ಹೇಮೆ ನಾಲೆ ಅಗಲೀಕರಣ ಮಾಡಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹೋಬಳಿಯ ಬರಕನಹಾಲ್‌ ಗ್ರಾಮದಲ್ಲಿ ಮಂಗಳವಾರ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಬ್ಯಾಂಕ್‌ ಕೌಂಟರ್‌ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತುಮಕೂರು ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ಲಭ್ಯವಿರುವ 1200 ಕ್ಯೂಸೆಕ್‌ ನೀರನ್ನು ಎರಡ್ಮೂರು ತಿಂಗಳು ಹರಿಸಬೇಕಿತ್ತು. ನಾಲೆಯ ಅಗಲೀಕರಣದಿಂದ ಒಂದೂವರೆ ತಿಂಗಳಲ್ಲಿ ಜಿಲ್ಲೆಗೆ ಮೀಸಲಿಟ್ಟ ನೀರು ಹರಿಸಿಕೊಳ್ಳಲು ಸಾಧ್ಯವಾಗುತ್ತದೆ. ಕಾಮಗಾರಿಯು 2 ವರ್ಷ ನಡೆಯಲಿದೆ ಎಂದು ತಿಳಿಸಿದರು.

ಅಂತರ್ಜಲ ವೃದ್ಧಿ: ಹುಳಿಯಾರು ಹೋಬಳಿಯ ರೈತರ ಜೀವನಾಡಿಯಾದ ಬೋರನಕಣಿವೆ ಜಲಾಶಯಕ್ಕೆ ಭದ್ರ ಮತ್ತು ಹೇಮಾವತಿ ಯೋಜನೆಯಿಂದ ನದಿ ನೀರು ಹರಿಸಲಾಗುತ್ತದೆ. ಈ ಜಲಾಶಯ ತುಂಬಿದರೆ 2 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೆರವಾಗಲಿದೆ ಎಂದರು.

ಸರ್ಕಾರ 10-15 ದಿನಗಳಲ್ಲಿ ಬಗರ್‌ ಹುಕುಂ ಕಮಿಟಿ ರಚಿಸಲಿದೆ. ಪ್ರತಿ ತಿಂಗಳು ಸಭೆ ನಡೆಸಿ ಅರ್ಹ ರೈತರ ಗುರುತಿಸಿ ಸಾಗುವಳಿ ಚೀಟಿ ನೀಡಲಾಗುವುದು. ತಾಲೂಕಿನಲ್ಲಿ 6 ಸಾವಿರ ಪವತಿ ಖಾತೆ, 24 ಸಾವಿರ ಪಹಣಿ ಸಮಸ್ಯೆ ಪರಿಹರಿಸಿ ರೈತರಿಗೆ ಅನುಕೂಲ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮುಚ್ಚುವ ಸ್ಥಿತಿ ತಲುಪಿದ್ದ ಬರಕನಹಾಲ್‌ ಸೊಸೈಟಿ ಇಂದು ಕೆ.ಎನ್‌.ರಾಜಣ್ಣ ಮತ್ತು ಜೆ.ಸಿ.ಮಾಧುಸ್ವಾಮಿ ವಿಶೇಷ ಕಾಳಜಿಯಿಂದ ಅಭಿವೃದ್ಧಿ ಪಥದತ್ತ ಹೋಗುತ್ತಿದೆ. ಕಳೆದ ವರ್ಷ ನೀಡಿದ್ದ 1 ಕೋಟಿ ರೂ. ಸಾಲ ಮನ್ನಾವಾಗಿ ಹೊಸ ಸಾಲ ನೀಡಲು ಕ್ರಮ ಕೈಗೊಂಡಿದೆ ಎಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸಿಂಗದಹಳ್ಳಿ ರಾಜ್‌ ಕುಮಾರ್‌ ಹೇಳಿದರು.

ಸಂಘದ ಅಧ್ಯಕ್ಷ ಎಚ್‌.ಎಂ.ವಿಶ್ವನಾಥ್‌, ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಹಳೆಮನೆ ಶಿವನಂಜಪ್ಪ, ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಕೆ.ಎಚ್‌.ಮಹಾಂತೇಶಯ್ಯ, ಮೇಲ್ವಿಚಾರಕ ಎಸ್‌.ಆರ್‌.ರಂಗಸ್ವಾಮಿ, ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ತನ್ವೀರ್‌ ಖಾನ್‌, ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಕಲ್ಪನಾ, ತಾಪಂ ಸದಸ್ಯೆ ಕಲಾವತಿ, ಗ್ರಾಪಂ ಅಧ್ಯಕ್ಷೆ ಲಲಿತಾಬಾಯಿ, ಕೇಶವಮೂರ್ತಿ, ಶಿವಕುಮಾರ್‌, ಬರಗೂರು ನಾಗರಾಜು, ರಾಜಣ್ಣ, ನಾಗರಾಜು, ನಿಂಗಮ್ಮ, ಪದ್ಮಾಕ್ಷಮ್ಮ, ರಾಮಣ್ಣ, ಸೀತರಾಮಯ್ಯ ಮತ್ತಿತರರಿದ್ದರು.

ಚಿಕ್ಕನಾಯನಕನಹಳ್ಳಿ ತಾಲೂಕಿಗೆ ಮಂಜೂರಾಗಿದ್ದ ಮುರಾರ್ಜಿ, ರಾಣಿ ಚೆನ್ನಮ್ಮ, ಇಂದಿರಾಗಾಂಧಿ  ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಹಾಗೂ ವಾಲ್ಮೀಕಿ, ಜಗಜೀವನರಾಮ್‌ ಸಮುದಾಯ ಭವನಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಉದ್ಘಾಟನೆಗೆ ಜ.1ರಂದು ಡಿಸಿಎಂ ಗೋವಿಂದಕಾರಜೋಳ ಆಗಮಿಸಲಿದ್ದಾರೆ.
-ಜೆ.ಸಿ.ಮಾಧುಸ್ವಾಮಿ, ಸಚಿವ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.