![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-415x219.jpg)
ಸಿರಿಧಾನ್ಯ ಬೆಳೆವ ರೈತರಿಗೆ ಉತ್ತೇಜನ
Team Udayavani, Jan 28, 2021, 1:57 PM IST
![Incentives for farmers](https://www.udayavani.com/wp-content/uploads/2021/01/thumkiur-620x372.jpg)
ತುಮಕೂರು: ಜಿಲ್ಲೆಯಲ್ಲಿ ಸಾವಯವ ಕೃಷಿ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ, ರೈತ ರಲ್ಲಿ ಸಾವಯವ ಕೃಷಿ ಹಾಗೂ ಸಿರಿಧಾನ್ಯ ಬೆಳೆಯಲು ಅರಿವು ಮೂಡಿಸುವುದಾಗಿ ಜಿಲ್ಲಾ ಪ್ರಾಂತೀಯ ಸಹ ಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗೋವಿಂದಯ್ಯ ತಿಳಿಸಿದರು.
ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ ಜಿಲ್ಲಾ ಪಾಂತ್ರಿಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಚುನಾವಣೆ ಯಲ್ಲಿ ನಿರ್ದೇಶಕರು ಮತ್ತು ಅಧ್ಯಕ್ಷರು ಅವಿರೋಧವಾಗಿ ಆಯ್ಕೆ ಆಯ್ಕೆಯಾದ ನಂತರ ಮಾತನಾಡಿ, ಕೃಷಿ ಇಲಾಖೆ ಸಹಯೋಗದೊಂದಿಗೆ ಸಾವಯವ ಕೃಷಿಗೆ ಉತ್ತೇಜನ ನೀಡುವುದರೊಂದಿಗೆ ಸಾವ ಯವ ಕೃಷಿಗೆ ಉತ್ತಮ ಮಾರುಕಟ್ಟೆಯನ್ನು ನಿರ್ಮಾಣ ಮಾಡುವ ಗುರಿ ಹೊಂದಲಾ ಗಿದ್ದು, ಈಗಾಗಲೇ ಸಿರಿಧಾನ್ಯವನ್ನು ಸಾವಯವ ಕೃಷಿಯಲ್ಲಿ ಮಾಡುವ ರೈತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯ ಕ್ಷೇತ್ರವನ್ನು ವಿಸ್ತರಿಸಲಾಗುವುದು ಎಂದರು.
ಒಕ್ಕೂಟದಿಂದ ಸ್ಥಾಪನೆಯಾದ ಸಿರಿಧಾನ್ಯ ಸಂಸ್ಕರಣಾ ಘಟಕ ಉತ್ತಮವಾಗಿಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಖರೀದಿಯಲ್ಲಿ ತೊಡಗಿರುವುದು ಸಂತಸದ ಸಂಗತಿ. ಸಾವಯವ ಕೃಷಿ ಉತ್ತೇಜನವೇ ಒಕ್ಕೂಟದ ಪ್ರಮುಖ ಉದ್ದೇಶ ಎಂದರು. ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನ ಮಾತನಾಡಿ, ಸಾವಯವಕೃಷಿಗೆ ಸರ್ಕಾರದಿಂದ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಸಾವಯವ ಕೃಷಿ ಯೋಜನೆಯಡಿ ಇಲಾಖೆ ಬೆಂಬಲ ನೀಡುತ್ತಿದೆ. ಮಳೆಯಾಶ್ರೀತ ಪ್ರದೇಶದಲ್ಲಿ ಸಿರಿಧಾನ್ಯಬೆಳೆಯುವ ರೈತರಿಗೆ ಸಿರಿಧಾನ್ಯ ಸಂಸ್ಕರಣಾ ಘಟಕ ಸ್ಥಾಪಿಸಲಾಗುತ್ತಿದ್ದು, ಇದರ ಪ್ರಯೋಜನ ಪಡೆಯಿರಿ ಎಂದರು.
ಇದನ್ನೂ ಓದಿ:ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್
ನೂತನ ಉಪಾಧ್ಯಕ್ಷರಾಗಿ ಚಂದ್ರಶೇಖರಯ್ಯ, ನಿರ್ದೇಶಕರಾಗಿ ಎನ್.ವಿ. ನಂಜುಂಡಾ ರಾಧ್ಯ, ಎ.ಬಿ.ಮಹೇಶ್, ಜಿ. ಕುಮಾ ರಸ್ವಾಮಿ, ಬೋರೇಗೌಡ, ಗೋವಿಂದಯ್ಯ, ಎ.ಎಸ್.ಚಂದ್ರ ಶೇಖರಯ್ಯ, ಟಿ.ಪ್ರಕಾಶ್, ಕೆ.ಆರ್.ಶಿವಕುಮಾರ್, ಸರೋಜಮ್ಮ, ಹೆಚ್.ವಿ. ಷಡಾಕ್ಷರಿ, ಸಿ.ಎಚ್.ದೇವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಒಕ್ಕೂಟಕ್ಕೆ ಜಿಲ್ಲಾ ಒಕ್ಕೂಟದಿಂದ ಕೆ.ಆರ್.ಶಿವಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ಚುನಾವಣಾಧಿಕಾರಿ ಜೆ.ಎಸ್.ಪಾರ್ಥ ಅವರು ಘೋಷಿಸಿದರು. ಒಕ್ಕೂಟದ ಸಿಇಒ ಆರ್.ಕೆ.ಮಧು, ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ](https://www.udayavani.com/wp-content/uploads/2024/12/12-14-150x90.jpg)
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
![suicide (2)](https://www.udayavani.com/wp-content/uploads/2024/12/suicide-2-1-150x81.jpg)
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
![ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್](https://www.udayavani.com/wp-content/uploads/2024/12/drone-pratap1-150x104.jpg)
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
![4-pavagada](https://www.udayavani.com/wp-content/uploads/2024/12/4-pavagada-150x90.jpg)
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
![1-pavagada](https://www.udayavani.com/wp-content/uploads/2024/12/1-pavagada-150x90.jpg)
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…](https://www.udayavani.com/wp-content/uploads/2024/12/Kannada-Sahitya-Sammelana-2024-150x79.jpg)
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
![Kannada-Sahitya-Sammelana-2024](https://www.udayavani.com/wp-content/uploads/2024/12/Kannada-Sahitya-Sammelana-2024-1-150x79.jpg)
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
![hdd](https://www.udayavani.com/wp-content/uploads/2024/12/hdd-1-150x93.jpg)
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
![Kallabete](https://www.udayavani.com/wp-content/uploads/2024/12/Kallabete-150x90.jpg)
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
![Fake-Gold](https://www.udayavani.com/wp-content/uploads/2024/12/Fake-Gold-150x90.jpg)
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.