ಕೊರಟಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 40 ಮನೆಗಳು ರಾತ್ರೋರಾತ್ರಿ ನೆಲಸಮ

ರಾಷ್ಟ್ರೀಯ ಹೆದ್ದಾರಿ ಜಾಗದಲ್ಲೇ ಮನೆಯ ಖಾತೆ ಮಂಜೂರು

Team Udayavani, Mar 29, 2023, 9:20 PM IST

1-ssdasd

ಕೊರಟಗೆರೆ: ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಪಂಯ ಅರಸಾಪುರ, ಬೈರೇನಹಳ್ಳಿ ಮತ್ತು ಅರಸಾಪುರ ತಾಂಡದ40ಕ್ಕೂ ಅಧಿಕ ಬಡಜನರ ಮನೆಗಳು ರಾತ್ರೋರಾತ್ರಿ ನೆಲಸಮವಾಗಿವೆ. ರೈತಾಪಿವರ್ಗ ಮತ್ತು ಕೂಲಿಕಾರ್ಮಿಕ ಕುಟುಂಬಗಳಿಗೆ ಸಮಸ್ಯೆಯಾದ್ರು ತುಮಕೂರು ಜಿಲ್ಲೆಯ ಸಂಸದ, ಸಚಿವ ಅಥವಾ ಸ್ಥಳೀಯ ಶಾಸಕರು ಭೇಟಿ ನೀಡದೇ ನಿರ್ಲಕ್ಷ್ಯ ವಹಿಸಿರುವುದೇ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆಯ ಜಾಗದಲ್ಲಿ ರೈತಾಪಿವರ್ಗ ಮತ್ತು ಕೂಲಿಕಾರ್ಮಿಕರ ಮನೆಗಳು ಸೇರಿದಂತೆ ಸರಕಾರಿ ಶಾಲೆ, ಅಂಗನವಾಡಿ ಕೇಂದ್ರ, ಕಂದಾಯ ಇಲಾಖೆಯ ಕಚೇರಿ, ಶುದ್ದ ಕುಡಿಯುವ ನೀರಿನ ಘಟಕವು ಸಹ ನಿರ್ಮಾಣ ಆಗಿವೆ. ರೈತರೇನೂ ಸರಿ ಅವರಿಗೆ ತಿಳಿಯಲಿಲ್ಲ ಸರಕಾರಿ ಅಧಿಕಾರಿಗಳಿಗೆ ಇದರ ಮಾಹಿತಿ ಇಲ್ಲವೇ. ಇದ್ದರೂ ಅನುದಾನ ಬಳಕೆ ಮಾಡುವ ತರಾತುರಿಯ ಕೆಲಸಕ್ಕೆ ಮುಂದಾಗಿ ಈಗ ಪಶ್ಚಾತಾಪ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

235 ಕೋಟಿ ರೂ. ವೆಚ್ಚದ ಹೆದ್ದಾರಿ ಕಾಮಗಾರಿ

ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು ಮಾರ್ಗವಾಗಿ ಕೊರಟಗೆರೆಯ ಬೈರೇನಹಳ್ಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ 51.5 ಕಿಮೀ ನಾಲ್ಕುಪಥದ ರಾಷ್ಟ್ರೀಯ ಹೆದ್ದಾರಿ ರಸ್ತೆ ಉನ್ನತೀಕರಣ ಕಾಮಗಾರಿ. ಬೀದರ್ ಮೂಲದ ಕೆಜಿಸಿಐಪಿಎಲ್ ಖಾಸಗಿ ಕಂಪನಿಯು 235 ಕೋಟಿ ರೂ. ಅನುದಾನದ ಟೆಂಡರ್ ಪಡೆದಿದ್ದಾರೆ. ಸ್ಥಳೀಯರಿಗೆ ಮಾಹಿತಿಯನ್ನೇ ನೀಡದೇ ಗ್ರಾಮಗಳಲ್ಲಿ 41 ಅಡಿ ವiತ್ತು ಹೊರಗಡೆ 46 ಅಡಿ ಅಗಲೀಕರಣದ ಕಾಮಗಾರಿಯನ್ನು ಸ್ಥಳೀಯರಿಗೆ ತಿಳಿಸದೇ ರಾತ್ರೋರಾತ್ರಿ ಪ್ರಾರಂಭ ಮಾಡಲಾಗಿದೆ.

ನಮಗೆ ಮಾಹಿತಿಯೇ ನೀಡದೇ ರಾತ್ರೋರಾತ್ರಿ ಮನೆಗಳ ನೆಲಸಮ ಮಾಡಿದ್ದಾರೆ. ನಮ್ಮ ಕುಟುಂಬಗಳ ಜೀವಕ್ಕೆ ಬೆಲೆಯೇ ಇಲ್ಲವೇ. ನಾವು ಪ್ರಶ್ನೆ ಮಾಡಿದ್ರೇ ನಮ್ಮ ಮೇಲೆ ದಬ್ಬಾಳಿಕೆ ಮಾಡ್ತಾರೇ. ರಂಜಾನ್ ಹಬ್ಬವಿದೆ ೧ ತಿಂಗಳ ಅವಕಾಶ ನೀಡಿ ಅಂದರೂ ಕರುಣೆಯೇ ತೋರದೇ ಮನೆಗಳನ್ನ ಒಡೆದು ಹಾಕಿದರು. ಮತ ಕೇಳಲು ಯಾರಾದರೂ ನಮ್ಮೂರಿಗೆ ಬರಲಿ ಬುದ್ದಿ ಕಲಿಸುತ್ತೇವೆ ಎಂದು ಅರಸಾಪುರ ಸ್ಥಳೀಯ ನಿವಾಸಿ ನಹೀಮ್ ಉನ್ನಿಸಾ ಪ್ರಶ್ನಿಸಿದ್ದಾರೆ.

ಅರಸಾಪುರ ಗ್ರಾಪಂ 30 ವರ್ಷದ ಹಿಂದೆ ಮನೆಯ ಖಾತೆ ಮಾಡಿಕೊಟ್ಟು ವಸತಿ ಯೋಜನೆಯಡಿ ಅನುಧಾನವು ನೀಡಿದೆ. ಪ್ರತಿವರ್ಷವು ನಮ್ಮ ಹತ್ತಿರ ಮನೆ ಮತ್ತು ನೀರಿನ ಕಂದಾಯ ವಸೂಲಿ ಮಾಡ್ತಾರೇ. ಈಗ ರಾಷ್ಟ್ರೀಯ ಹೆದ್ದಾರಿಯವ್ರು ಬಂದು ಜಾಗ ನಮ್ಮದು ಅಂತಾರೇ. ಸಾಲ ಮಾಡಿ ಮನೆ ಕಟ್ಟಿದ್ದೇವೆ ಈಗ ನಾವು ಎಲ್ಲಿಗೇ ಹೋಗ್ಬೇಕು ಎಂದು ಅರಸಾಪುರ ನಿವಾಸಿ ಶಮೀವುಲ್ಲಾ ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಜಾಗದಲ್ಲಿ ಮನೆ ಅಥವಾ ಸರಕಾರಿ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಗ್ರಾಪಂಯಿಂದ ಮನೆ ಜಾಗ ಮಂಜೂರು ಮತ್ತು ಕಂದಾಯ ವಸೂಲಾತಿಯ ಬಗ್ಗೆ ತಕ್ಷಣ ಮಾಹಿತಿ ಪಡೆಯುತ್ತೇನೆ. ಅರಸಾಪುರ ಗ್ರಾಮಕ್ಕೆ ತಕ್ಷಣ ಬೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಚರ್ಚಿಸಿ ರೈತಾಪಿವರ್ಗ ಮತ್ತು ಕೂಲಿಕಾರ್ಮಿಕರಿಗೆ ಅನುಕೂಲ ಕಲ್ಪಿಸುತ್ತೇನೆ ಎಂದು ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.