Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

ಸಮಯಕ್ಕೆ ಸರಿಯಾಗಿ ಶಾಲಾ, ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ

Team Udayavani, Jul 6, 2024, 5:34 PM IST

1-ewewqe

ಕೊರಟಗೆರೆ: ವಿದ್ಯಾರ್ಥಿಗಳಿಗೆ ತಿಂಗಳ ಹಿಂದೆಯಷ್ಟೇ ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ. ಆದರೆ ಕೆಎಸ್‍ಆರ್‍ಟಿಸಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಸ್ ಸಮಸ್ಯೆ ಉಂಟಾಗಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.

ಪಟ್ಟಣದ ಎಸ್‍ಎಸ್‍ಆರ್ ವೃತ್ತದಲ್ಲಿ ಮುಂಜಾನೆ 6 ರಿಂದಲೇ ವಿದ್ಯಾರ್ಥಿಗಳು ಬಸ್‍ಗಾಗಿ ಕಾಯುತ್ತಿರುತ್ತಾರೆ. ಕಾರಣ ಬಸ್ ಪ್ರಯಾಣಿಕರು ಹೆಚ್ಚಾಗಿದ್ದರೆ ಬಸ್‍ನಲ್ಲಿ ಕಂಡಕ್ಟರ್ ಬಸ್‍ನಲ್ಲಿ ಹತ್ತಿಸೋಲ್ಲವೆಂದು ಒಂದು ಗಂಟೆಯ ಮುಂಚೆಯೇ ವಿದ್ಯಾರ್ಥಿಗಳು ಬಸ್‍ಗಾಗಿ ಕಾಯುವಂತಹ ಪ್ರಸಂಗ ಎದುರಾಗಿದೆ.

ಪ್ರತಿನಿತ್ಯ ಮಧುಗಿರಿಯಿಂದ ತುಮಕೂರಿಗೆ ಮುಂಜಾನೆ 5ರಿಂದ ಬೆ.9 ರವರೆಗೆ 30ಕ್ಕೂ ಹೆಚ್ಚು ಬಸ್‍ಗಳು ಬರುತ್ತಿವೆ ಎಂದು ಇಲ್ಲಿನ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಬೆ.9ರವರಗೆ ಕೆಎಸ್‍ಆರ್‍ಟಿಸಿ ಬಸ್ ಸಂಚಾರವೇ ವಿರಳ. ಈಗೇ ಆದರೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಕತೆಯೇನು ಎಂದು ವಿದ್ಯಾರ್ಥಿಗಳ ಸಾರ್ವಜನಿಕರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಇವರ ಮಧ್ಯೆ ಬಡಕುಟುಂಬದ ಕೂಲಿ ಕಾರ್ಮಿಕ ಹೆಣ್ಣು ಮಕ್ಕಳು ಸಹ ಬಸ್‍ಗೆ ಪರದಾಡುತ್ತಿದ್ದು, ಅಧಿಕಾರಿಗಳು ಕಂಡರೂ ಕಾಣದಂತೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ತಂದೆ-ತಾಯಿಗಳು ಕೂಲಿ ಕೆಲಸ ಮಾಡಿಕೊಂಡು ನನ್ನ ತುಮಕೂರಿನ ಕಾಲೇಜಿನಲ್ಲಿ ಓದಿಸುತ್ತಿದ್ದಾರೆ. ಆದರೆ ನಮ್ಮಂತೆಯೇ ಅದೆಷ್ಟೋ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬಂದು ಪ್ರತಿನಿತ್ಯ ತುಮಕೂರಿನ ಕಾಲೇಜುಗಳಿಗೆ ಹೋಗುತ್ತಾರೆ. ಆದರೆ ಸರಿಯಾಗಿ ಸರ್ಕಾರಿ ಬಸ್ ವ್ಯವಸ್ಥೆ ಇಲ್ಲಾ, ಇದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹೋಗಲು ಸಾಧ್ಯವಾಗದೆ ಖಾಸಗಿ ಬಸ್‍ನಲ್ಲಿ ಸಂಚರಿಸುವಂತಹ ಅನಿವಾರ್ಯತೆ ಎದುರಾಗಿದೆ ಎಂದು ಹೊಳವನಹಳ್ಳಿಯ ವಿದ್ಯಾರ್ಥಿನಿ ನಯನ ನೋವು ತೋಡಿಕೊಂಡಿದ್ದಾರೆ.
,
ಸಂಜೆಯೂ ಯಥಾಸ್ಥಿತಿ
ಪ್ರತಿನಿತ್ಯ ಬೆಳಗ್ಗೆ ಶಾಲೆಗಳಿಗೆ ತೆರಳಲು ಮತ್ತು ಸಂಜೆ ಸಮಯದಲ್ಲಿ ಮನೆಗೆ ತೆರಳಲು ಕೆಎಸ್‍ಆರ್‍ಟಿಸಿ ಬಸ್‍ಗಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈ ಸಮಸ್ಯೆಯ ಕುರಿತು ವಿದ್ಯಾರ್ಥಿಗಳ ಪ್ರತಿಭಟನೆ, ಮಾಧ್ಯಮಗಳಲ್ಲಿ ಸುದ್ಧಿ ಬಿತ್ತರವಾದರೂ, ಅಧಿಕಾರಿಗಳು ಎಚ್ಚೆತುಕೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ದೂಷಿಸುತ್ತಿರುವುದು ಒಂದೆಡೆಯಾದರೆ ವಿದ್ಯಾರ್ಥಿಗಳು ಸಾರಿಗೆ ಬಸ್‍ಗಾಗಿ ಗಂಟೆ ಗಟ್ಟಲೆ ಖಾದು ಬಸ್ ಬಾರದ ಸಂದರ್ಭದಲ್ಲಿ ಕೇಳಿದಷ್ಟು ಹಣ ನೀಡಿ ಖಾಸಗಿ ವಾಹನಗಳೊಂದಿಗೆ ಮನೆಕಡೆ ಸಂಚರಿಸುತ್ತಿದ್ದು ಆಕಸ್ಮಿಕ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂಬುದೇ ಯಕ್ಷಪ್ರಶ್ನೆಯಾಗಿದೆ.

ಟಾಪ್ ನ್ಯೂಸ್

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.