Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ


Team Udayavani, May 7, 2024, 7:38 PM IST

9-koratagere

ಕೊರಟಗೆರೆ: ಇನ್ಫೋಸಿಸ್ ನ ಡಾ.ಸುಧಾಮೂರ್ತಿ ಅವರ ಪ್ರೇರಣೆಯಂತೆ ಶ್ರೀ ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು ಈ ವರ್ಷದ ಜೂ.9 ರಂದು ಉಚಿತ ಸಮೂಹಿಕ ವಿವಾಹ ನಡೆಸಲಾಗುವುದು ಎಂದು ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿ ತಿಳಿಸಿದರು.

ಅವರು ಶ್ರೀ ಕ್ಷೇತ್ರ ಸಿದ್ದರ ಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ 18ನೇ ವಾರ್ಷಿಕೋತ್ಸವ ಹಾಗೂ ಉಚಿತ ಸಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಶ್ರೀ ಮಠ 17 ವರ್ಷಗಳಿಂದ ನೂರಾರು ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ವಿದ್ಯಾಭ್ಯಾಸ ನೀಡುವ ವ್ಯವಸ್ಥೆಯಾಗುತ್ತಿದೆ. ಇಲ್ಲಿ ಅನೇಕ ಬಡ ವಿದ್ಯಾರ್ಥಿಗಳು ವೇದ ಪಾಠ ಕಲಿತು ರಾಜ್ಯದ ಅನೇಕ ದೇವಾಲಯಗಳಲ್ಲಿ ಹಾಗೂ ಸಂಸ್ಕೃತ ಶಾಲೆಗಳಲ್ಲಿ ಉದ್ಯೋಗದೊಂದಿಗೆ ಜೀವನ ನಡೆಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವು ಶ್ರೀ ಮಠದಲ್ಲಿ ರಂಭಾಪುರಿಯ ಡಾ.ವೀರಸೋಮೇಶ್ವರ ರಾಜ ದೇಶಿ ಕೇಂದ್ರ ಶಿವಾಚಾರ್ಯಸ್ವಾಮೀಜಿಗಳ ದಿವ್ಯ ಸಾನಿದ್ಯದಲ್ಲಿ 18ನೇ ವಾರ್ಷಿಕೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ನಡೆಸಲಾಗುವುದು ಎಂದರು.

ಈ ವಿವಾಹ ಮಹೋತ್ಸವದ ಪ್ರೇರಣೆಯು ಡಾ.ಸುಧಾಮೂರ್ತಿಯವರದ್ದಾಗಿದ್ದು ಕಾರ್ಯಕ್ರಮವೊಂದರಲ್ಲಿ ಅವರು ನೀಡಿದ ಸಲಹೆ ಮೇರೆಗೆ ಈ ವಿವಾಹ ಮಹೋತ್ಸವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಸಹಕಾರದಲ್ಲಿ ಹಾಗೂ ಹಲವು ಭಕ್ತರ ದೇಣಿಗೆಯಿಂದ ಈ ಕಾರ್ಯಕ್ರಮಗಳು ನಡೆದುಕೊಂಡು ಬರುತ್ತಿದ್ದು ವಿವಾಹ ಮಹೋತ್ಸವದಲ್ಲಿ ಮದುವೆಯಾಗುವ ದಂಪತಿಗಳು ಅವರ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್‍ಗಳು ಸೇರಿದಂತೆ ಅವಶ್ಯಕ ದಾಖಲಾತಿಗಳನ್ನು ತಂದೆ-ತಾಯಿಗಳೊಂದಿಗೆ ಆಥವಾ ಪೋಷಕರೊಂದಿಗೆ ಶ್ರೀ ಮಠಕ್ಕೆ ಬಂದು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.

ಜೂ.9 ರಂದು ನಡೆಯುವ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ, ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಂಸ್ಕಾರ, ಉಚಿತ ಸಾಮೂಹಿತ ಆದರ್ಶ ವಿವಾಹ ಹಾಗೂ ಜನಜಾಗೃತಿ ಸಮಾವೇಶ ನಡೆಸಲಾಗುವುದು. ಬರಗಾಲದ ಹಿನ್ನೆಲೆ ಕಾರ್ಯಕ್ರಮ ಸರಳವಾಗಿ ಮಾಡುವ ಸಲಹೆಗಳು ಬಂದರೂ ಸಾಮೂಹಿಕ ವಿವಾಹ ಬಡ ಜೋಡಿಗಳಿಗೆ ಜೀವನದಲ್ಲಿ ಒಮ್ಮೆ ನಡೆಯುವುದರಿಂದ ಅದರಲ್ಲಿ ಯಾವುದೇ ಕೊರತೆಯಾಗದಂತೆ ನಡೆಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಸೇವಾ ಮನೋಭಾವ ಅಗತ್ಯ ಎಂದರು.

ವಿವಾಹ ನೋಂದಣಿ ಪ್ರಾರಂಭವಾಗಿದ್ದು, ವಿವಾಹವಾಗುವ ಜೋಡಿಗಳು ಶ್ರೀ ಮಠಕ್ಕೆ ಬಂದು ನೊಂದಾಯಿಸುವಂತೆ ಕೋರಿದರು.

ಪೂರ್ವ ಭಾವಿ ಸಬೆಯಲ್ಲಿ ಕೃಷ್ಣಪ್ಪ, ವಾಗೀಶ್, ಮೋಹನ್‍ಕುಮಾರ್ ಪಾಟೀಲ್, ಆರ್.ಎಸ್.ರಾಜಣ್ಣ, ತರಕಾರಿ ಶಿವಕುಮಾರ್, ರಘು, ಕೆ.ಬಿ.ಲೋಕೇಶ್, ದರ್ಶನ್, ಹೆಚ್.ವಿ.ಪಾಳ್ಯ ಮಂಜುನಾಥ್, ಗೀತಾನಾಗರಾಜು, ಸಿದ್ದಪ್ಪ, ಅಂಖರಾಧ್ಯ, ಶಿವಶಂಕರ್, ಪರ್ವತಯ್ಯ, ತೋಟದಪ್ಪ, ಸೋಮಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.