ಹಲ್ಲಿದ್ರೆ ಕಡ್ಲೆ ಇಲ್ಲ, ಕಡ್ಲೆ ಇದ್ರೆ ಹಲ್ಲಿಲ್ಲ ಎಂಬಂತಾಗಿದೆ ಇಲ್ಲಿನ ಸರ್ಕಾರಿ ನೌಕರರ ಪಾಡು


Team Udayavani, Jun 7, 2022, 11:43 PM IST

ಹಲ್ಲಿದ್ರೆ ಕಡ್ಲೆ ಇಲ್ಲ, ಕಡ್ಲೆ ಇದ್ರೆ ಹಲ್ಲಿಲ್ಲ… ಎಂಬಂತಾಗಿದೆ ಸರ್ಕಾರಿ ನೌಕರರ ಪಾಡು

ಕೊರಟಗೆರೆ : ಹಲ್ಲಿದ್ರೆ ಕಡ್ಲೆ ಇಲ್ಲ, ಕಡ್ಲೆ ಇದ್ರೆ ಹಲ್ಲಿಲ್ಲ’ ಎನ್ನುವ ಗಾದೆ ಮಾತಂತೆ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿನ ಸರಕಾರಿ ನೌಕರರಿಗೆ ಸೌಲಭ್ಯಗಳ ಕೊರತೆಯಿದ್ದು, ವಸತಿ ಸೌಲಭ್ಯ ಮರೀಚಿಕೆಯಾಗಿದೆ.

ತಾಲೂಕಿನ ಬಹಳಷ್ಟು ಊರುಗಳಲ್ಲಿ ಸರಕಾರಿ ವಸತಿ ಗೃಹಗಳಿಲ್ಲದೆ ಸಾಕಷ್ಟು ಮಂದಿ ನೌಕರರು ಬಾಡಿಗೆ ಮನೆಯನ್ನೇ ಅವಲಂಬಿಸಿದ್ದಾರೆ. ಆದರೆ ಹೊಳವನಹಳ್ಳಿ ಆರಕ್ಷಕ ಠಾಣೆ. ಆರೋಗ್ಯ ಇಲಾಖೆಯ ವೈದ್ಯರು ಮತ್ತು ಶುಶ್ರೂಶಕಿಯರು. ಕಂದಾಯ ಇಲಾಖೆಯ ವಸತಿ ಗೃಹಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ವಸತಿ ಗೃಹ ಹೀಗೆ . 20 – 25 ವರ್ಷದಿಂದ ಯಾರೂ ವಾಸಿಸದೇ. ಪಾಳು ಬಿದ್ದ ಕಾರಣ ಈ ಎಲ್ಲಾ ಅಧಿಕಾರಿಗಳು ತಮಗೆ ಯೋಗ್ಯವಾದ ಕಡೆ ಮತ್ತು ಜಿಲ್ಲೆಗಳಿಂದ ಬಸ್ ಮೂಲಕ ಕಛೇರಿಯ ಕೆಲಸಕ್ಕೆ ಬರುತ್ತಾರೆ.

ಇನ್ನು ಈ ಭಾಗದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಸರ್ಕಾರಿ ಪ್ರಾರ್ಥಮಿಕ ಶಾಲೆ ಹತ್ತಿರ ಇದ್ದ ಕಾರಣ ಪಾಳುಬಿದ್ದ ವಸತಿಗೃಹಗಳಿಂದ ವಿಷಕಾರಿ ಹಾವುಗಳು ಹೆಚ್ಚಾಗಿದ್ದು ಇಲ್ಲಿ ಓದಲು ಬರುವ ಮಕ್ಕಳು ಆಟವಾಡುವ ಸಮಯದಲ್ಲಿ ಇವುಗಳ ಕಾಟ ಹೆಚ್ಚಾದರೆ ಆ ಮಕ್ಕಳ ಪಾಡೇನು ಎಂಬುದು ನಾಗರೀಕರ ಪ್ರಶ್ನೆಯಾಗಿದೆ.

ಈ ವಸತಿ ಗೃಹದಲ್ಲಿ ಹಿಂದೆ ಶುಶ್ರೂಶಕಿಯರು ವಾಸಿಸುತ್ತಿದ್ದರು. ವಸತಿ ಗೃಹ ಶಿಥೀಲಗೊಂಡಿದ್ದು , ಈ ಕಟ್ಟಡಗಳನ್ನು ದುರಸ್ತಿಪಡಿಸದೆ. ದಿನೆ ದಿನೇ ಕಟ್ಟಡ ಶಿಥಿಲಗೊಳ್ಳುತ್ತಾ ಇದೆ. ಈಗ ಕುಸಿಯುವ ಹಂತದಲ್ಲಿವೆ. ವಸತಿ ಗೃಹಗಳ ಸುತ್ತ ಮುತ್ತ ಬೆಳೆದಿರುವ ಗಿಡಗಂಟಿಗಳನ್ನು , ದುರಸ್ತಿ ಮಾಡಲು ಸಂಬಂಧಿಸಿದ ಇಲಾಖೆ ಮುಂದಾಗುತ್ತಿಲ್ಲ. ಹೀಗಾಗಿ ಈ ಕಟ್ಟಡಗಳು ಕುಸಿಯುವ ಹಂತದಲ್ಲಿವೆ. ಅಲ್ಲದೇ ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ರೂಪುಗೊಂಡಿದೆ.

ಇದನ್ನೂ ಓದಿ : ಪಾವಗಡ : ಟ್ರ್ಯಾಕ್ಟರ್ – ಬೈಕ್ ನಡುವೆ ಅಪಘಾತ , ಇಬ್ಬರು ಸ್ಥಳದಲ್ಲೇ ಸಾವು

ಹೊಳವನಹಳ್ಳಿ ಹೋಬಳಿ ಕೇಂದ್ರವಾಗಿದ್ದು, ಕಂದಾಯ ಇಲಾಖೆ ಸೇರಿದಂತೆ ನಾನಾ ಇಲಾಖೆಗಳು ಕೆಲಸ ಕಾರ್ಯ ನಿರ್ವಹಿಸುತ್ತಿವೆ. ನೂರಾರು ಸರಕಾರಿ ನೌಕರರು ಕೆಲಸ ಮಾಡುತ್ತಿದ್ದು, ಅವರಿಗೆ ವಸತಿ ಗೃಹ ಸೌಕರ್ಯ ಕಲ್ಪಿಸಿಲ್ಲ. ಹೀಗಾಗಿ ಅನೇಕರು ಬಾಡಿಗೆ ಮನೆಗಳಲ್ಲಿ ಅಧಿಕ ಬಾಡಿಗೆ ನೀಡಿ ವಾಸಿಸುವಂತಾಗಿದೆ.

ಬಾಡಿಗೆ ಮನೆ ಕೊರತೆ:

ಸಣ್ಣ ಪಟ್ಟಣವಾಗಿರುವುದರಿಂದ ಗ್ರಾಮದಲ್ಲಿ ಹೆಚ್ಚು ಬಾಡಿಗೆ ಮನೆಗಳಿಲ್ಲ. ಹೀಗಾಗಿ ಸರಕಾರಿ ಕಚೇರಿಗಳಲ್ಲಿ, ಶಾಲೆಯಲ್ಲಿ ಕೆಲಸ ಮಾಡುತ್ತಿರುವ ನೌಕಕರಿಗೆ ಮನೆ ಸಿಗದೇ ಅಕ್ಕಪಕ್ಕದ ಊರುಗಳಲ್ಲಿ ನೆಲೆಸಿದ್ದಾರೆ. ದುಬಾರಿ ಬಾಡಿಗೆ ಕೊಡುವುದಲ್ಲದೇ, ನಿತ್ಯ ಬಸ್‌ನಲ್ಲಿ ಪ್ರಯಾಣ ಮಾಡಿ ಕಚೇರಿಗೆ ಬರುವವರೂ ಇದ್ದಾರೆ. ದುಸ್ಥಿತಿಯಲ್ಲಿರುವ ಇಲ್ಲಿನ ವಸತಿ ಗೃಹಗಳನ್ನು ದುರಸ್ತಿ ಮಾಡಿಸಿ ನೌಕರರಿಗೆ, ಅಧಿಕಾರಿಗಳಿಗೆ ವಿತರಿಸಿದರೆ ಕೆಲವರಿಗಾದರೂ ಅನುಕೂಲವಾಗಲಿದೆ. ಈ ಬಗ್ಗೆ ಜನಪ್ರತಿ ನಿಧಿಗಳು, ಹಿರಿಯ ಅಧಿಕಾರಿಗಳು ಗಮನಹರಿಸಬೇಕಾಗಿದೆ.

ಈ ಪಾಳು ಬಿದ್ದ ವಸತಿ ಗೃಹಗಳನ್ನು ಸದ್ಯದಲ್ಲೇ ದುರಸ್ತಿಪಡಿಸಲಾಗುವುದು. ಹಾಗೆ ನಮ್ಮ ಇಲಾಖೆಯಿಂದ ಹೊಸದಾಗಿ ವಸತಿಗೃಹಗಳನ್ನು ನಿರ್ಮಿಸಿ ಕಾಂಪೌಂಡ್ ಮಾಡಲಾಗುವುದು.

– ಸಿದ್ದರಾಮೇಶ್ವರ ಸರ್ಕಲ್ ಇನ್ಸ್‌ಪೆಕ್ಟರ್ ಕೊರಟಗೆರೆ

ಕೊರಟಗೆರೆ ಮತ್ತು ಹೊಳವನಹಳ್ಳಿಯಲ್ಲಿ ಬಾಡಿಗೆ ಮನೆಗಳ ಕೊರತೆಯಿಂದ ನೌಕರರು ದೂರದ ಊರಿನಿಂದ ಬಸ್‌ನಲ್ಲಿ ಬರುತ್ತಿದ್ದಾರೆ. ಹೀಗಾಗಿ ಅವರು ಕಚೇರಿ ಸೇರುವುದು ವಿಳಂಬವಾಗುತ್ತಿದೆ. ಇದರಿಂದ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ. ಕೂಡಲೇ ವಸತಿಗೃಹವನ್ನು ಸರಿಪಡಿಸಿ ನೌಕರರಿಗೆ ವಿತರಿಸಿದರೆ ನೌಕರರಿಗೂ, ಸಾರ್ವಜನಿಕರಿಗೂ ಅನುಕೂಲವಾಗಲಿದೆ.

– ಶ್ರೀನಿವಾಸ್ ಹೆಚ್ ಎನ್ ಗ್ರಾಮಸ್ಥರು ಹೊಳವನಹಳ್ಳಿ.

ನಾಳೆಯೇ ಖುದ್ದಾಗಿ ಪಾಳುಬಿದ್ದ ವಸತಿ ಗೃಹಗಳನ್ನು ವೀಕ್ಷಣೆ ಮಾಡಿ ಸಂಭಂದಿಸಿದ ಇಲಾಖೆಗಳ ಗಮನಕ್ಕೆ ತರುತ್ತೇನೆ. ಮತ್ತು ಜಿಪಂ ಕಾರ್ಯನಿರ್ವಾಹಕ ಅಧಿಕಾರಿಯ ಗಮನಕ್ಕೆ ಪತ್ರದ ಮುಖೇನ ಶಿಪಾರಸ್ಸು ಮಾಡುತ್ತೇನೆ.

– ದೊಡ್ಡಸಿದ್ದಯ್ಯ, ತಾಪಂ ಕಾರ್ಯನಿರ್ವಣಾಧಿಕಾರಿ

– ಸಿದ್ದರಾಜು. ಕೆ ಕೊರಟಗೆರೆ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.