ಕೊರಟಗೆರೆ : ಉಪಯೋಗಕ್ಕೆ ಬಾರದೇ ಪಾಳು ಬಿದ್ದ ಪ್ರವಾಸಿ ಮಂದಿರ ಮತ್ತು ವಸತಿಗೃಹ ಕಟ್ಟಡ


Team Udayavani, Jul 26, 2022, 7:45 PM IST

ಕೊರಟಗೆರೆ : ಉಪಯೋಗಕ್ಕೆ ಬಾರದೇ ಪಾಳು ಬಿದ್ದ ಪ್ರವಾಸಿ ಮಂದಿರ ಮತ್ತು ವಸತಿಗೃಹ ಕಟ್ಟಡ

ಕೊರಟಗೆರೆ : ತಾಲೂಕಿನ ಇತಿಹಾಸ ಪ್ರಸಿದ್ಧಿ ಪಡೆದ ಸಿದ್ದರಬೆಟ್ಟದ ಪ್ರವಾಸಿ ಮಂದಿರ ಮತ್ತು ವಸತಿಗೃಹ ಕಟ್ಟಡಗಳು ಉಪಯೋಗಕ್ಕೆ ಬಾರದಂತಾಗಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿಗೆ ಹೊಂದಿಕೊಂಡಿರುವ ಪ್ರವಾಸಿ ಮಂದಿರ ಹಾಗೂ ವಸತಿ ಗೃಹಗಳನ್ನು ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಯ ಅನುದಾನದಲ್ಲಿ ನಿರ್ಮಿಸಲಾಗಿತ್ತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಅಖಂಡ ರಾಧ್ಯ ಮಾತನಾಡಿ 1954- 55 ರಲ್ಲಿ ಸಾವಿರಾರು ರೂಪಾಯಿಗಳನ್ನು ವೆಚ್ಚ ಮಾಡಿ ಪ್ರವಾಸಿ ಮಂದಿರವನ್ನು ವಿಐಪಿಗಳಿಗೆ ನಿರ್ಮಿಸಲಾಗಿತ್ತು. ಹಾಗೂ ಸುಮಾರು 30 ವರ್ಷಗಳ ಹಿಂದೆ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಅನುದಾನದಿಂದ ಭಕ್ತಾದಿಗಳಿಗೆ ಉಳಿದುಕೊಳ್ಳಲು ನಿರ್ಮಿಸಲಾಗಿದ್ದ ವಸತಿಗೃಹಗಳು ಈಗ ಉಪಯೋಗಕ್ಕೆ ಬಾರದೇ ಪಾಳು ಬಿದ್ದಾಗಿದೆ. ಎಂದು ಹೇಳಿದರು.

ಸರಿಯಾದ ನಿರ್ವಹಣೆಯಿಲ್ಲದೆ ಕಟ್ಟಡದ ಕಿಟಿಕಿ ಬಾಗಿಲುಗಳು ಮುರಿದು ಹೋಗಿದ್ದು ಪಡ್ಡೆ ಹುಡುಗರ ಆಶ್ರಯ ತಾಣವಾಗಿದೆ.
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿರುವ ಎಲ್ಲಾ ಕಟ್ಟಡವನ್ನು ದುರಸ್ತಿ ಮಾಡಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿದರೆ ಒಳ್ಳೆಯದು ಎಂದು ಊರಿನ ಗ್ರಾಮಸ್ಥರು ಹಾಡುವ ಮಾತಾಗಿದೆ.

ಇನ್ನಾದರೂ ಮುಜರಾಯಿ ಇಲಾಖೆಯವರು ಇಲ್ಲಿರುವ ಕಟ್ಟಡಗಳ ಬಗ್ಗೆ ಗಮನಹರಿಸಿ ಇಲ್ಲಿಗೆ ಬರುವಂತಹ ಭಕ್ತಾದಿಗಳಿಗೆ. ರಾತ್ರಿಯ ಸಮಯದಲ್ಲಿ ಉಳಿದುಕೊಳ್ಳಲು ಈ ಕಟ್ಟಡವನ್ನು ಆದಷ್ಟು ಬೇಗ ಸ್ವಚ್ಛ ಮಾಡಿದರೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುತ್ತದೆ. ಎಂಬುದು ಪ್ರಜ್ಞಾವಂತರ ಹೇಳಿಕೆಯಾಗಿದೆ.

ಅಕ್ರಮ ಚಟುವಟಿಕೆಗಳ ತಾಣ

ಕರೆಂಟ್ ಇಲ್ಲದೆ ಕಟ್ಟಡಗಳು ಕತ್ತಲಾಗಿವೆ. ಗುಟ್ಕಾ ಪ್ಯಾಕೇಟ್, ಚಾಕೋಲೆಟ್ ಕವರ್ ಸರಿಯಾದ ನಿರ್ವಹಣೆಯಿಲ್ಲದೆ ಕಟ್ಟಡದ ಕಿಟಿಕಿ ಬಾಗಿಲುಗಳು ಮುರಿದು ಹೋಗಿದ್ದು ಪಡ್ಡೆ ಹುಡುಗರ ಆಶ್ರಯ ತಾಣವಾಗಿದೆ. ಕಟ್ಟಡದ ಹಿಂಬದಿಯ ಬಾಗಿಲು ಮತ್ತು ಶೌಚಾಲಯದ ಬಾಗಿಲುಗಳು ಮುರಿದಿದ್ದು , ರಾತ್ರಿ ವೇಳೆಗೆ ಪಾಳು ಬಿದ್ದ ಕಟ್ಟಡದಲ್ಲಿ ಅನೈತಿಕ ಮತ್ತು ಅಕ್ರಮ ಚಟುವಟಿಕೆಗಳ ಕೇಂದ್ರವಾಗಿದೆ ಎಂದು ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿದೆ.

– ವಿಜಯ್ ಕುಮಾರಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಬೂದಗವಿ ಗ್ರಾಮ ಪಂಚಾಯಿತಿ

ಹಿಂದೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಅನುದಾನದಲ್ಲಿ ನಿರ್ಮಾಣ ವಾದಂತಹ ವಸತಿ ಗೃಹಗಳು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲವಾಗಿವೆ. ನಾವು ಸಹ ತಾಲೂಕು ದಂಡಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ತಿಳಿಸಿದ್ದೇನೆ. ಆದರೆ ದಂಡಧಿಕಾರಿಗಳಿಂದ ಯಾವುದೇ ಮಾಹಿತಿ ಇನ್ನು ಬಂದಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.