Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ
Team Udayavani, Oct 7, 2024, 7:04 PM IST
ಕೊರಟಗೆರೆ: ರವೀಂದ್ರ ಭಾರತಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊರಟಗೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಪಟ್ಟಣದ ರವೀಂದ್ರ ಭಾರತಿ ವಿದ್ಯಾಮಂದಿರ ಸಮೀಪವಿರುವ ಶಬೀನಾ ಬೇಗಮ್ ಎಂಬುವರ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ರೆಹಮಾನ್ (15 ವರ್ಷ) ಸಾವಿಗೀಡಾದ ದುರ್ದೈವಿ.
ಘಟನೆ ವಿವರ:
ಮೃತ ಮಹಮ್ಮದ್ ರೆಹಮಾನ್ ಶಬೀನಾ ಬೇಗಂ ದಂಪತಿ ದತ್ತು ಪಡೆದಿದ್ದರು. ತಾಯಿಯೊಡನೆ ಮನೆಯ ಮೇಲ್ಚಾವಣಿ ಮೇಲ್ಭಾಗ ಬಟ್ಟೆ ಒಗೆದು ಒಣಗಾಕಿದ ಬಣ್ಣೆಯನ್ನ ತೆಗೆದುಕೊಂಡು ಬರಲು ಹೋದ ಸಂದರ್ಭದಲ್ಲಿ ತಾಯಿ ಶಬೀನಾ ಬೇಗಂ ಬಟ್ಟೆ ತಂದು ಒಂದೆರಡು ನಿಮಿಷಗಳಾದರೂ ಮಗ ಬಾರದಿದ್ದನ್ನು ಕಂಡು ಮತ್ತೆ ಮನೆ ಮೇಲ್ಭಾಗಕ್ಕೆ ಹೋಗಿ ನೋಡುವಷ್ಟರಲ್ಲಿ ಪುತ್ರ ಕುಸಿದು ಬಿದ್ದಿರುವುದು ಕಂಡು ತಾಯಿ ಅಕ್ಕಪಕ್ಕದ ಮನೆಯವರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳಿದಿದ್ದಾನೆ .
ಹೃದಯಾಘಾತ ಶಂಕೆ:
ಮೃತ ಮೊಹಮ್ಮದ್ ರೆಹಮಾನ್ ಆರೋಗ್ಯವಂತ ವಿದ್ಯಾರ್ಥಿ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ಬಿದ್ದ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಿಸಿದ ಪೋಷಕರು ವೈದ್ಯರು ಚಿಕಿತ್ಸೆ ನೀಡಿದರೂ ಫಲಿಸದೆ ಹೃದಯಾಘಾತದಿಂದ ಕೊನೆಯುಸಿರು ಎಳೆದಿರಬಹುದು ಎಂದು ಊಹಿಸಲಾಗಿದೆ.
ಈ ಸಂಬಂಧ ಕೊರಟಗೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಅನಿಲ್, ಪಿಎಸ್ಐ ಚೇತನ್ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..
Bramavara: ಟಾಟಾ ಪ್ಲೇ ಅಳವಡಿಕೆ ನೆಪದಲ್ಲಿ ವಂಚನೆ
Udupi: ಅಸಹಾಯಕ ಸ್ಥಿತಿಯಲ್ಲಿದ್ದ ಬಾಲಕಿಯ ರಕ್ಷಣೆ
UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ
Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.