Kunigal: ತಲೆ ಮೇಲೆ ಹಾಲೋ ಬ್ಲಾಕ್ ಇಟ್ಟಿಗೆ ಎತ್ತಿ ಹಾಕಿ ಸ್ನೇಹಿತನ ಕೊಲೆ!
Team Udayavani, Aug 12, 2024, 10:39 AM IST
ಕುಣಿಗಲ್: ಇಬ್ಬರು ಸ್ನೇಹಿತರ ನಡುವೆ ವೈಮನಸ್ಸು ಉಂಟಾಗಿ ಹಾಲೋ ಬ್ಲಾಕ್ ಇಟ್ಟಿಗೆಯಿಂದ ಓರ್ವನ ತಲೆಗೆ ಜಜ್ಜಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಪಟ್ಟಣದ ಕೆ.ಆರ್.ಎಸ್ ಅಗ್ರಹಾರದಲ್ಲಿ ಸೋಮವಾರ (ಆ.12) ನಡೆದಿದೆ.
ತಾಲೂಕಿನ ಹುಲಿಯೂರುದುರ್ಗ ಹೋಬಳಿ ಅಂಗರಹಳ್ಳಿ ಗ್ರಾಮ ಹಾಲಿ ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ವಾಸಿ ರವಿ (40) ಕೊಲೆಯಾದ ವ್ಯಕ್ತಿ. ಈತ ಗಾರೆ ಕೆಲಸಗಾರನಾಗಿದ್ದ. ಶಿವಕುಮಾರ್ ಕೊಲೆ ಆರೋಪಿ.
ಘಟನೆ ವಿವರ: ರವಿ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವಕುಮಾರ್ ಇಬ್ಬರು ಸ್ನೇಹಿತರಾಗಿದ್ದು, ಒಂದೇ ಕಡೆ ಗಾರೆ ಕೆಲಸ ಮಾಡುತ್ತಿದ್ದರು. ಭಾನುವಾರ ರವಿ ಗಾರೆ ಕೆಲಸಕ್ಕೆ ಕುಣಿಗಲ್ ಗೆ ಬಂದಿದ್ದರೆ ಆತನ ಹೆಂಡತಿ ಭಾಗ್ಯ ಅವರು ದೀಕ್ಷಾವಾಟರ್ ಗೆ ಕೆಲಸಕ್ಕೆ ಬಂದಿದ್ದರು. ಭಾಗ್ಯ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹೋಗಿದ್ದಾರೆ. ಆದರೆ ರವಿ ಮನೆಗೆ ಹೋಗದೆ ಶಿವಕುಮಾರ್ ಶೆಡ್ ಗೆ ಹೋಗಿದ್ದಾನೆ.
ಮಳವಳ್ಳಿಯ ಶಿವಕುಮಾರ್ ಇಲ್ಲಿನ ಕೆಆರ್ ಎಸ್ ಅಗ್ರಹಾರದ ನಾಗರಾಜು ಎಂಬುವರು ಬಳಿ ಕೆಲಸ ಮಾಡುತ್ತಿದ್ದ. ಶೆಡ್ ನಲ್ಲಿ ಇವರಿಬ್ಬರ ನಡುವೆ ರಾತ್ರಿ ಏನು ನಡೆದಿದೆ ಎಂದು ತಿಳಿದು ಬಂದಿಲ್ಲ. ಈ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಶಿವಕುಮಾರನು ರವಿಯ ತಲೆ ಮೇಲೆ ಹಾಲೋಬ್ಲಾಕ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಮೇಸ್ತ್ರಿ ನಾಗರಾಜು ಅವರ ಅಣ್ಣ ರಂಗಸ್ವಾಮಿ ಅವರು ಗೋಡೌನ್ ನಲ್ಲಿ ಇರುವ ಗಾರೆ ಸಾಮಾಗ್ರಿ ತೆಗೆದುಕೊಳ್ಳಲು ಹೊದ ವೇಳೆ ಘಟನೆ ಬೆಳಕಿಗೆ ಬಂದಿದೆ. ಆದರೆ, ಕೊಲೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ,
ಈ ಸಂಬಂಧ ಡಿವೈಎಸ್ ಪಿ ಓಂಪ್ರಕಾಶ್, ಸಿಪಿಐ ನವೀನ್ ಗೌಡ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.