Kunigal; ಶಾಲೆ ಬಸ್ ಹರಿದು ವಿದ್ಯಾರ್ಥಿ ಭೀಕರ ದುರ್ಮರಣ: ಭಾರಿ ಪ್ರತಿಭಟನೆ

ಆಡಳಿತ ಮಂಡಳಿ ಬೇಜವಾಬ್ದಾರಿ ಖಂಡಿಸಿ ಭಾರಿ ಪ್ರತಿಭಟನೆ; ಪೊಲೀಸರ ಹರಸಾಹಸ

Team Udayavani, Sep 4, 2023, 9:55 PM IST

1-SDSAS

ಕುಣಿಗಲ್ :  ಶಾಲಾ ಬಸ್ ತಲೆಯ ಮೇಲೆ ಬಸ್ ಹರಿದ ಪರಿಣಾಮ, ವಿದ್ಯಾರ್ಥಿ ಸ್ಥಳದಲ್ಲೇ ಭೀಕರವಾಗಿ ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಕಸಬಾ ಹೋಬಳಿ ಹೇರೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.  ಘಟನೆ ಬಳಿಕ ಆಕ್ರೋಶಗೊಂಡ ವಿದ್ಯಾರ್ಥಿ ಪೋಷಕರು, ಸಂಬಂಧಿಕರು, ಗ್ರಾಮಸ್ಥರು ಬಿಜಿಎಸ್ ಶಾಲಾ ಮುಂಭಾಗ ಮೃತನ ಶವವಿಟ್ಟು, ರಸ್ತೆ ತಡೆದು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ತಾಲೂಕಿನ ಎಡಿಯೂರು ಹೋಬಳಿ ಕಟ್ಟಿಗೆಹಳ್ಳಿ ಗ್ರಾಮದ, ಬಿಜಿಎಸ್ ಶಾಲೆಯ ವಿದ್ಯಾರ್ಥಿ, 9 ವರ್ಷದ ಕೆ.ಆರ್.ಮೋಹಿತ್ (ಬಾಲಾಜಿ) ಮೃತ ದುರ್ದೈವಿ.

ಘಟನೆ ವಿವರ

ಪಟ್ಟಣದ ಬಿಜಿಎಸ್ ಶಾಲೆಯಲ್ಲಿ ಮೋಹಿತ್ ಮೂರನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.  ತನ್ನ ಗ್ರಾಮದಿಂದ ಶಾಲೆಯ ಬಸ್‌ನಲ್ಲೇ ಶಾಲೆಗೆ ಬಂದು ಹೋಗುತ್ತಿದ್ದ. ಎಂದಿನಂತೆ ಸೋಮವಾರ ಸಹಾ ಮೋಹಿತ್ ತನ್ನ ಶಾಲೆಯ ವಾಹನದಲ್ಲೇ ತನ್ನ ಗ್ರಾಮಕ್ಕೆ ಹೋಗಲು ಸಂಜೆ 4 ಗಂಟೆಗೆ ಶಾಲಾ ಬಸ್ ಹತ್ತಿ ಕುಳಿತಿದ್ದ. ಚಾಲಕ ಬಸ್ ಅನ್ನು ಪಟ್ಟಣದ ಮದ್ದೂರು ರಸ್ತೆ, ಕೊತ್ತಿಪುರ ಮಾರ್ಗವಾಗಿ ಹೇರೂರಿಗೆ ತೆರಳಿ ಅಲ್ಲಿ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಕಟ್ಟಿಗೆಹಳ್ಳಿಗೆ ಹೋಗುತ್ತಿರಬೇಕಾದರೆ, ಬಸ್‌ನ ಮುಂಭಾಗದ ಬಾಗಿಲು ಇದಕ್ಕಿದಂತೆ ತೆಗೆದುಕೊಂಡಿತ್ತು ಎನ್ನಲಾಗಿದೆ.  ಬಸ್‌ನ ಬಾಗಿಲ ಬಳಿ ಇದ್ದ ಮೋಹಿತ್ ಬಸ್‌ನಿಂದ ಕೆಳಗೆ ಬಿದ್ದಿದ್ದಾನೆ. ಬಸ್‌ನ ಹಿಂಬದಿಯ ಚಕ್ರ ಮೋಹಿತನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.  ಕುಣಿಗಲ್ ಪೊಲೀಸರು ಬಸ್ ಚಾಲಕ ಸದಾನಂದ ಎಂಬಾತನನ್ನು ಬಂಧಿಸಿದ್ದಾರೆ.

ಶವ ಇಟ್ಟು ಪ್ರತಿಭಟನೆ 

ಮೃತ ವಿದ್ಯಾರ್ಥಿಯನ್ನು ಅಂಬುಲೆನ್ಸ್ ನಲ್ಲಿ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶಾವಾಗಾರಕ್ಕೆ ತರಲಾಯಿತು. ಶವವನ್ನು ಶವಗಾರಕ್ಕೆ ಸಾಗಿಸಲು ಬಿಡದ ವಿದ್ಯಾರ್ಥಿಯ ಸಂಬಂಧಿಕರು ಹಾಗೂ ನೂರಾರು ಗ್ರಾಮಸ್ಥರು ಮಗುವಿನ ಸಾವಿಗೆ ಶಾಲಾ ಆಡಳಿತ ಮಂಡಲಿ ನೇರ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶವವನ್ನು ಶಾಲಾ ಮುಂಭಾಗದಲ್ಲಿ ಇಟ್ಟು ಉಗ್ರ ಪ್ರತಿಭಟನೆ ನಡೆಸಿದರು, ಬಳಿಕ ಹಳೇಯ ರಾಷ್ಟ್ರೀಯ ಹೆದ್ದಾರಿ 48 ರ ಬಿ.ಎಂ ರಸ್ತೆಯಲ್ಲಿ ಶವವನ್ನು ಇಟ್ಟು ಹಲವು ಸಮಯ ಪ್ರತಿಭಟನೆ ನಡೆಸಿದರು, ನಮಗೆ ನ್ಯಾಯ ಬೇಕೂ ಎಂದರು, ಶಾಲಾ ಆಡಳಿತ ಮಂಡಲಿಯ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಇದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸಂಚಾರ ದಲ್ಲಿ ವ್ಯತ್ಯಯ ಉಂಟಾಯಿತು, ಪರಿಸ್ಥತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ರಾಮಕೃಷ್ಣ ದಂಪತಿಗೆ ಮೋಹಿತ್ ಹಾಗೂ ಒಂದು ಹೆಣ್ಣು ಮಗುವಿದ್ದು, ಇವರಲ್ಲಿ ಮೋಹಿತ ಅಪಘಾತದಲ್ಲಿ ಮೃತಪಟ್ಟ ವಿಷಯ ತಿಳಿದ  ತಂದೆ, ತಾಯಿ ಹಾಗೂ ಗ್ರಾಮಸ್ಥರು ಶಾಲೆ ಬಳಿಗೆ ದೌಡಾಯಿಸಿ ಶವವನ್ನು ನೋಡಿ ಗೋಳಾಡಿದರು.

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಡಾ.ಹೆಚ್.ಡಿ.ರಂಗನಾಥ್, ಮಾಜಿ ಸಚಿವ ಡಿ.ನಾಗರಾಜಯ್ಯ, ಪಿಕಾರ್ಡ್ ಬ್ಯಾಂಕ್ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್ ಮೃತನ ಪೋಷಕರನ್ನು ಬೇಟಿಯಾಗಿ ಸಮಾಧಾನ ಪಡಿಸಿದರು, ಬಳಿಕ ಪೊಲೀಸ ರಿಂದ ಘಟನೆ ಸಂಬಂಧ ಮಾಹಿತಿ ಪಡೆದರು.

ಪಟ್ಟು ಬಿಡದ ಪ್ರತಿಭಟನಾಕಾರರು
ಘಟನೆ ನಡೆದು ನಾಲ್ಕು ಗಂಟೆಗಳು ಕಳೆದರೂ ಶಾಲಾ ಆಡಳಿತ ಮಂಡಳಿ ಯಾರೊಬ್ಬರು ಸ್ಥಳಕ್ಕೆ ಬರದ ಕಾರಣ ಕುಪಿತಗೊಂಡ ಪ್ರತಿಭಟನಾಕಾರರು ಶಾಲಾ ಅವರಣಕ್ಕೆ ನುಗ್ಗಲು ಯತ್ನಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಸಮಾಧಾನ ಪಡಿಸಲು ಪ್ರಯತ್ನಿಸಿದರು. ಬಿಜಿಎಸ್ ಶಾಲಾ ಕಾಲೇಜು ಆಡಳಿತಾಧಿಕಾರಿ, ಅದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಪ್ರತಿಭಟನೆಯನ್ನು ಶಾಲಾ ಮುಂಭಾಗದಲ್ಲಿ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.