ಧ್ವಜಸ್ತಂಭವೇ ಕರವೇ ಅಧ್ಯಕ್ಷರ ಬದಲಾವಣೆಗೆ ಕಾರಣವಾಯ್ತ; ಆಕ್ರೋಶ

ನೂರಾರು ಜನ ಸಾಮೂಹಿಕ ರಾಜಿನಾಮೆಗೆ ಸಿದ್ದತೆ

Team Udayavani, Oct 15, 2022, 9:07 PM IST

1-ddsdsf

ಕೊರಟಗೆರೆ: ತುಮಕೂರು ಜಿಲ್ಲಾಧ್ಯಕ್ಷ ರಾಜಕೀಯ ಪ್ರೇರಿತವಾಗಿ ಕೊರಟಗೆರೆ ಕರವೇ ಅಧ್ಯಕ್ಷರ ದಿಢೀರ್ ಬದಲಾವಣೆ ಮಾಡಿದ್ದಾರೆ. ಆದೇಶವನ್ನು ಹಿಂದಕ್ಕೆ ಪಡೆಯದಿದ್ದರೇ ಕೊರಟಗೆರೆಯ ಸಾವಿರಾರು ಕರವೇ ಕಾರ್ಯಕರ್ತರು ಸಾಮೂಹಿಕ ರಾಜಿನಾಮೆ ನೀಡಲು ಸಿದ್ದರಿದ್ದೇವೆ ಎಂದು ಕೊರಟಗೆರೆ ಘಟಕದ ಕರವೇ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕಲೀಂವುಲ್ಲಾ ಎಚ್ಚರಿಕೆ ನೀಡಿದ್ದಾರೆ.

ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣ ಗೌಡರ ಬಣ)ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ,ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ತುಮಕೂರು ನಗರದಲ್ಲಿ ಕುಳಿತು ಕೊರಟಗೆರೆಯ ವಿಚಾರದಲ್ಲಿ ಹಿಟ್ಲರ್ ಆದೇಶ ಮಾಡಿದ್ದಾರೆ. ಕೊರಟಗೆರೆಯ ಕರವೇ ಘಟಕದ ಗಮನಕ್ಕೆ ಬರದೇ, ಸಂಘಟನೆಯ ನಿಬಂಧನೆಯ ಗಾಳಿಗೆ ತೂರಿ ರಾಜಕೀಯ ಮತ್ತು ವೈಯಕ್ತಿಕ ದ್ವೇಷದಿಂದ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ. ಸಂಘಟನೆಯಲ್ಲಿ ಸಕ್ರಿಯ ಆಗಿರುವ ವ್ಯಕ್ತಿಗೆ ಅವಕಾಶ ನೀಡಬೇಕಿದೆ. ಇಲ್ಲವಾದ್ರೇ ಎಲ್ಲಾ ಘಟಕದ ಕಾರ್ಯಕರ್ತರು ಸಾಮೂಹಿಕ ರಾಜಿನಾಮೇ ನೀಡುತ್ತೇವೆ ಎಂದರು.

ಕೊರಟಗೆರೆ ಘಟಕದ ಕರವೇ ಗೌರವಧ್ಯಕ್ಷ ಬಿ.ಹೆಚ್.ಪ್ರಸನ್ನಕುಮಾರ್ ಮಾತನಾಡಿ, ಗ್ರಾಮೀಣ ಕಾರ್ಯಕರ್ತರಿಗೆ ತಿಳಿಸದೇ ಕೊರಟಗೆರೆ ಕರವೇ ಅಧ್ಯಕ್ಷರ ಬದಲಾವಣೆ ರಾಜಕೀಯ ಪ್ರೇರಿತ. ಜಿಲ್ಲಾಧ್ಯಕ್ಷ ತುಮಕೂರು ನಗರದಲ್ಲಿ ಕುಳಿತು ಕರವೇಗೆ ಸಂಬಂಧವೇ ಇಲ್ಲದ ವ್ಯಕ್ತಿಗೆ ಅಧ್ಯಕ್ಷ ಮಾಡಿರುವುದೇ ನಮ್ಮೇಲ್ಲರ ದುರ್ದೈವ. ಕನ್ನಡದ ನೆಲ ಜಲ-ಬಾಷೆಯ ಪರವಾಗಿ ಹೋರಾಡುವ ನಟರಾಜ್‌ಗೆ ಜಿಲ್ಲಾಧ್ಯಕ್ಷನಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕೊರಟಗೆರೆ ಸಾಮಾಜಿಕ ಹೋರಾಟಗಾರ ಜೆಟ್ಟಿಅಗ್ರಹಾರ ನಾಗರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದ ಪ್ರತಿಹಳ್ಳಿಗೂ ಕನ್ನಡದ ಕಂಪನ್ನು ಹರಿಸಿದ ಕೀರ್ತಿ ಕರವೇ ನಟರಾಜ್‌ಗೆ ಸಲ್ಲಲಿದೆ. ಕನ್ನಡ ನಾಡುನುಡಿ-ನೆಲ ಜಲ-ಭಾಷೆಯ ಜೊತೆ ಕೊರಟಗೆರೆ ಅಭಿವೃದ್ದಿಗೆ ಪೂರಕವಾಗಿ ಯುವಜನತೆಯ ಜೊತೆಗೂಡಿ ನೂರಾರು ಹೋರಾಟ ನಡೆಸಿದ್ದಾರೆ. ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥಗೌಡನ ಏಕಪಕ್ಷಿಯ ಹಿಟ್ಲರ್ ರೀತಿಯ ತಿರ್ಮಾನದಿಂದ ಕರವೇ ಕಾರ್ಯಕರ್ತರಿಗೆ ನೋವಾಗಿದೆ. ರಾಜ್ಯಾಧ್ಯಕ್ಷ ನಾರಾಯಣಗೌಡ ತಕ್ಷಣ ಸಮಸ್ಯೆಯನ್ನು ಸರಿಪಡಿಸಬೇಕಿದೆ ಎಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಕರವೇ ಹೊಳವನಹಳ್ಳಿ ಅಧ್ಯಕ್ಷರಾದ ಮಹೇಶ್, ಸಿ.ಎನ್.ದುರ್ಗ ದಿನೇಶ್, ತುಂಬಾಡಿ ಕೋದಂಡರಾಮು, ಬುಕ್ಕಾಪಟ್ಟಣ ಸುನಿಲ್, ಮುಖಂಡರಾದ ರಮೇಶ್, ಶ್ರೀನಿವಾಸು, ವಿಜಯ್, ಪ್ರೇಮಕುಮಾರ್, ಮಂಜುನಾಥ, ಗಿರೀಶ್, ಲಕ್ಷ್ಮೀಕಾಂತ, ರಕ್ಷಿತ್‌ಗೌಡ್ರು, ರಾಮಮೂರ್ತಿ, ಮಲ್ಲೇಶ್, ಓಬಳರಾಜು ಸೇರಿದಂತೆ ಇತರರು ಇದ್ದರು.

ಅಧ್ಯಕ್ಷ ಸ್ಥಾನಕ್ಕೆ ಧ್ವಜಸ್ತಂಭವೇ ಕಂಟಕವಾಯ್ತ

ಸರಕಾರಿ ಬಸ್ ನಿಲ್ದಾಣದ ಸಮೀಪದ ಮುಖ್ಯರಸ್ತೆಯಲ್ಲಿ ಕಳೆದ ೧೪ತಿಂಗಳ ಹಿಂದೆಯೇ ೫೬ಅಡಿ ಎತ್ತರದ ಕನ್ನಡಧ್ವಜ ಕಂಬ ನಿರ್ಮಾಣವಾಗಿದೆ. ಧ್ವಜಕಂಬದ ವಿಚಾರದಲ್ಲಿ ಸರಕಾರಿ ಅಧಿಕಾರಿವರ್ಗ ಮತ್ತು ಕರವೇ ಕಾರ್ಯಕರ್ತರ ನಡುವೆ ತಿಕ್ಕಾಟ ನಡೆದಿದೆ. ಇದರ ನಡುವೆಯೇ ರಾಜಕೀಯ ಪ್ರೇರಿತ ಮತ್ತು ವೈಯಕ್ತಿಕ ದ್ವೇಷದಿಂದ ತುಮಕೂರು ಜಿಲ್ಲಾಧ್ಯಕ್ಷರು ಕೊರಟಗೆರೆ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ಕಲೀಂವುಲ್ಲಾ ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.