ಅಧಿಕಾರಿಗಳು ಸರ್ಕಾರಿ ವಸತಿ ಗೃಹಗಳಲ್ಲೇ ವಾಸಿಸಲಿ


Team Udayavani, Dec 18, 2019, 3:00 AM IST

adhikarigalu

ಚಿಕ್ಕನಾಯಕನಹಳ್ಳಿ: ಸಾರ್ವಜನಿಕರ ತೆರಿಗೆ ಹಣದಲ್ಲಿ ಸರ್ಕಾರಿ ಅಧಿಕಾರಿಗಳಿಗಾಗಿ ನಿರ್ಮಾಣಗೊಂಡಿರುವ ವಸತಿ ಗೃಹಗಳಲ್ಲಿ ಅಧಿಕಾರಿಗಳು ವಾಸಿಸದೇ ಪಾಳು ಬಿದ್ದಿವೆ. ಜತೆಗೆ ಜನರ ತೆರಿಗೆ ಹಣ ನೀರಲ್ಲಿ ಹೋಮ ಮಾಡಿದಂತಾಗಿದೆ ಎಂದು ಲಂಚ ಮುಕ್ತ ವೇದಿಕೆ ಮಲ್ಲಿಕಾರ್ಜುನ್‌ ಭಟ್ಟರಹಳ್ಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿ.ಎಚ್‌.ರಸ್ತೆ ಪಕ್ಕದ ತಹಶೀಲ್ದಾರ್‌ ವಸತಿ ಗೃಹದ ಹಿಂಭಾಗದಲ್ಲಿ ಸುಮಾರು 12ಕ್ಕೂ ಹೆಚ್ಚು ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಆದರೆ ವಸತಿಗೃಹಗಳಲ್ಲಿ ಅಧಿಕಾರಿಗಳು ವಾಸ ಮಾಡದೇ ಪಾಳುಬಿದ್ದಿವೆ. ಸುಸಜ್ಜಿತ ಕಟ್ಟಡಗಳು ಈಗ ದುರಸ್ತಿ ಹಂತ ತಲುಪುತ್ತಿವೆ. ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳು ಇಲ್ಲಿವೆ. ಆದರೂ ಅಧಿಕಾರಿಗಳು ಇಲ್ಲಿ ವಾಸ ಮಾಡಲು ಸಿದ್ಧರಿಲ್ಲದಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಎಚ್‌ಆರ್‌ಎ ಸೌಲಭ್ಯ ಕಡಿತವಾಗೊಳಿಸಿ: ಸರ್ಕಾರ ಅಧಿಕಾರಿಗಳಿಗೆ ವಸತಿಗಾಗಿ ಮನೆ ಬಾಡಿಗೆ ಭತ್ಯೆ(ಎಚ್‌ಆರ್‌ಎ)ಎಂದು ತಾಲೂಕಿಗೆ ಅನುಗುಣವಾಗಿ ಪ್ರತಿ ತಿಂಗಳು ಭತ್ಯೆ ನೀಡುತ್ತಿದೆ. ಅಧಿಕಾರಿಗಳು, ಸರ್ಕಾರಿ ವಸತಿ ಗೃಹಗಳಲ್ಲಿ ವಾಸ ಮಾಡಿದರೆ ಹಣ ಕಡಿತವಾಗುತ್ತದೆ. ಸರ್ಕಾರಿ ವಸತಿ ಗೃಹಗಳು ಸುಸಜ್ಜಿತವಾಗಿದ್ದರೂ, ತಾಪಂ ಇಒ ಸೇರಿದಂತೆ ಯಾವ ಅಧಿಕಾರಿಗಳೂ, ಇಲ್ಲಿ ವಾಸ ಮಾಡುತ್ತಿಲ್ಲ. ಆದರೆ ತಾಲೂಕು, ಜಿಲ್ಲಾ ಕೇಂದ್ರಗಳಿಂದ ಪ್ರತಿದಿನ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಕೆಲಸಕ್ಕೆ ಬರುತ್ತಿದ್ದಾರೆ. ಅಧಿಕಾರಿಗಳಿಗಾಗಿಯೇ ನಿರ್ಮಾಣವಾಗಿರುವ ವಸತಿ ಗೃಹಗಳಲ್ಲಿ ವಾಸ ಮಾಡದ ಅಧಿಕಾರಿಗಳ ಎಚ್‌ಆರ್‌ಎ ಕಡಿತಗೊಳಿಸಿ ಕೇಂದ್ರ ಸ್ಥಾನದಲ್ಲಿ ವಾಸ ಮಾಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

ವ್ಯವಸ್ಥಿತವಾದ ಕಟ್ಟಡ: ಅಧಿಕಾರಿಗಳಿಗೆ ವಾಸ ಮಾಡಲು ಬೇಕಾಗಿರುವ ನೀರಿನ ವ್ಯವಸ್ಥೆ ವಿದ್ಯುತ್‌ ವ್ಯವಸ್ಥೆ, 2 ಬಿಎಚ್‌ಕೆ, 3 ಬಿಎಚ್‌ಕೆ ಮನೆಗಳು, ಮನೆಗಳ ಮುಂದೆ ವಿಶಾಲ ಆವರಣ, ಮನೆಗಳಿಗೆ ಸಮೀಪವಾಗಿರುವ ಬಸ್‌ ನಿಲ್ದಾಣ, ಹೋಟಲ್‌, ದಿನಸಿ ಅಂಗಡಿಗಳು ಹಾಗೂ ಕಾಲು ನೆಡಿಗೆಯಲ್ಲಿ ಹೋಗಬಹುದಾದಷ್ಟು ಹತ್ತಿರದಲ್ಲಿ ಇರುವ ತಾಲೂಕು ಪಂಚಾಯಿತಿ, ತಾಲೂಕು ಕಚೇರಿಗಳು ಇಷ್ಟೆಲ್ಲ ಮೂಲ ಸೌಕರ್ಯ ಹೊಂದಿದ್ದರೂ ವಾಸ ಮಾಡುತ್ತಿಲ್ಲ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕಚೇರಿಗೆ ಸಮಯಕ್ಕೆ ಹಾಜರಾಗದ ಅಧಿಕಾರಿಗಳು: ದೂರದ ಊರುಗಳಿಂದ ದಿನನಿತ್ಯ ಬರುವ ಅಧಿಕಾರಿಗಳು ಬಹುತೇಕ ದಿನಗಳು ಕಚೇರಿ ಸಮಯಕ್ಕೆ ಸರಿಯಾಗಿ ಹಾಜರಿರುವುದಿಲ್ಲ ಹಾಗೂ ಕಚೇರಿ ಸಮಯ ಮುಗಿಯುವ ಮುನ್ನವೇ ಕಚೇರಿಯಿಂದ ಹೋಗುತ್ತಾರೆ. ಸಾರ್ವಜನಿಕರು ಪ್ರಶ್ನಿಸಿದರೆ ಸಭೆ, ಬೇರೆ ಕಚೇರಿಗಳಲ್ಲಿ ಕೆಲಸವಿದೆ ಎಂದು ಉತ್ತರಿಸುತ್ತಾರೆ. ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಕೇಂದ್ರ ಸ್ಥಳದಲ್ಲಿ ವಾಸ ಮಾಡಬೇಕು. ಇದರಿಂದ ಸಾರ್ವಜನಿಕರಿಗೆ ದಿನ ಯಾವ ಸಮಯದಲ್ಲಿಯಾದರೂ ಅಧಿಕಾರಿಗಳು ಸಿಗುತ್ತಾರೆ. ಕೇಂದ್ರ ಸ್ಥಳದಲ್ಲೇ ಅಧಿಕಾರಿಗಳು ವಾಸಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದ್ದಾರೆ.

ವಸತಿ ಗೃಹದಲ್ಲೇ ವಾಸವಿರುವ ತಹಶೀಲ್ದಾರ್‌: ದುರಸ್ತಿ ಹಂತ ತಲುಪಿದ್ದ ವಸತಿ ಗೃಹವನ್ನು ತಹಶೀಲ್ದಾರ್‌ ತೇಜಸ್ವಿನಿ ನವೀಕರಣಗೊಳಿಸಿಕೊಂಡು ತಾಲೂಕು ಕೇಂದ್ರ ಸ್ಥಳದಲ್ಲಿ ವಾಸ ಮಾಡುತ್ತಿದ್ದಾರೆ. ಇದೇ ರೀತಿ ಇಒ, ಎಇಇ, ಬಿಇಒ ಸೇರಿದಂತೆ ಬೇರೆ ಇಲಾಖೆ ಅಧಿಕಾರಿಗಳು ಸಹ ಇಲ್ಲೇ ವಾಸ ಮಾಡಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯಪಟ್ಟಿದ್ದಾರೆ.

ಸುಸಜ್ಜಿತ ಹಾಗೂ ಮೂಲ ಸೌಕರ್ಯಗಳನ್ನು ಹೊಂದಿರುವ ವಸತಿ ಗೃಹಗಳಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ವಾಸಿಸಬೇಕು. ಜನಪ್ರತಿನಿಧಿಗಳು ಹಾಗು ಸಂಬಂಧಿಸಿದ ಅಧಿಕಾರಿಗಳು ಈ ಸಂಬಂಧ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ.
-ಮಲ್ಲಿಕಾರ್ಜುನ್‌ ಭಟ್ಟರಹಳ್ಳಿ, ಹೋರಾಟಗಾರ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.