ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!


Team Udayavani, Mar 15, 2024, 11:45 PM IST

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಮುನಿಸಿಕೊಂಡಿರುವ ಮಾಧುಸ್ವಾಮಿ, ತಮ್ಮ ಭೇಟಿಗೆ ಮುಂದಾಗಿದ್ದ ವಿ.ಸೋಮಣ್ಣ ಅವರನ್ನೇ ಮನೆಗೆ ಬರಬೇಡಿ ಎಂದು ಹೇಳುವ ಮೂಲಕ ಬಿಜೆಪಿ ವರಿಷ್ಠರ ಮೇಲೆ ಮುನಿಸು ತೋರಿಸಿದ್ದಾರೆ.

ಟಿಕೆಟ್‌ ಘೋಷಣೆಗೂ ಮುನ್ನ ಮಾಧುಸ್ವಾಮಿ ಬೆಂಬಲಿಗರು “ಗೋ ಬ್ಯಾಕ್‌ ಸೋಮಣ್ಣ’ ಅಭಿಯಾನ ಆರಂಭಿಸಿದ್ದರು. ಆದರೂ ವರಿಷ್ಠರು ಸೋಮಣ್ಣಗೇ ಟಿಕೆಟ್‌ ಸಿಕ್ಕಿರುವುದು ಮಾಧುಸ್ವಾಮಿ ಆಕ್ರೋಶಕ್ಕೆ ಕಾರಣವಾಗಿದೆ. ಅಪ್ಪ ಮಕ್ಕಳ ಅಸ್ತಿತ್ವಕ್ಕಾಗಿ ಏನೇನೋ ಮಾಡಬಾರದು. ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಹಾಗೂ ನನಗೂ ಇಷ್ಟವಿಲ್ಲ. ಎಂದು ಮಾಧುಸ್ವಾಮಿ ಹೇಳಿದ್ದಾರೆ.

ಈ ನಡುವೆ ಇಡೀ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ಮಾಧುಸ್ವಾಮಿ ಮನೆಗೆ ಬರುತ್ತೇನೆಂದು ದೂರವಾಣಿ ಮೂಲಕ ತಿಳಿಸಿದೆ. ಅವರು ನಮ್ಮ ಮನೆಗೆ ಬರುವುದು ಬೇಡ ಎಂದು ಹೇಳಿದರು. ಮುಂದೆ ಎಲ್ಲ ಸರಿಹೋಗುತ್ತದೆ ಎಂಬ ವಿಶ್ವಾಸ ಇದೆ ಎಂದು ಸೋಮಣ್ಣ ತಿಳಿಸಿದರು.

ಸೋಮಣ್ಣ ಪರ ಪ್ರಚಾರ ಮಾಡಲಾರೆ: ಮಾಧುಸ್ವಾಮಿ
ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಾನು ಯಾವುದೇ ಕಾರಣಕ್ಕೂ ಪ್ರಚಾರ ಮಾಡುವುದಿಲ್ಲ. ಮನೆಯಲ್ಲಿ ಕುಳಿತ ನನಗೆ ಲೋಕಸಭೆ ಟಿಕೆಟ್‌ ಕೊಡುತ್ತೇನೆಂದು ಹೇಳಿ ಕೊನೇ ಕ್ಷಣದಲ್ಲಿ ಬಿ.ಎಸ್‌.ಯಡಿಯೂರಪ್ಪನವರು ಕೈಕೊಟ್ಟರು. ಆದರೂ ಬಿಜೆಪಿ ಬಿಡುವ ತೀರ್ಮಾನ ಮಾಡಿಲ್ಲ ಎಂದು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಎಂದೂ ಲೋಕಸಭೆ ಟಿಕೆಟ್‌ ಕೊಡಿ ಎಂದು ಕೇಳಿಲ್ಲ. ಯಡಿಯೂರಪ್ಪನವರು ಮನೆಗೆ ಕರೆಸಿಕೊಂಡು ನಿನಗೆ ಬಿ ಫಾರಂ ಕೊಡುತ್ತೇನೆ, ಚುನಾವಣೆ ತಯಾರಿ ಮಾಡಿಕೋ ಎಂಬ ಭರವಸೆ ನೀಡಿದ್ದರು. ಆದರೆ ಮಾತು ಉಳಿಸಿಕೊಳ್ಳಲಿಲ್ಲ. ಇದರಿಂದ ನನಗೆ ನೋವಾಗಿದೆ ಎಂದರು.

ಸೋಮಣ್ಣನಿಗೆ ಬೆಂಬಲವಿಲ್ಲ
ನಾನು ಸ್ಪಷ್ಟವಾಗಿ ಹೇಳುತ್ತೇನೆ. ವಿ.ಸೋಮಣ್ಣನಿಗೆ ಈ ಚುನಾವಣೆಯಲ್ಲಿ ಬೆಂಬಲ ನೀಡುವುದಿಲ್ಲ. ಹೊರಗಿನವರು ಬಂದು ನಮ್ಮ ಜಿಲ್ಲೆಯಲ್ಲಿ ಆಡಳಿತ ಮಾಡಲು ಅವಕಾಶ ಕೊಡಲು ನಾವು ಸಿದ್ಧವಿಲ್ಲ ಎಂದರು.

ಮನೆಗೆ ಬರಬೇಡ ಎಂದಿಲ್ಲ
ನನಗೆ ಮನಸ್ಸು ಸರಿಯಿಲ್ಲ, ಕೋಪದಲ್ಲಿ ಮಾತನಾಡುವುದು ಬೇಡ. ಸ್ವಲ್ಪ ದಿನಗಳು ಕಳೆಯಲಿ, ಅನಂತರ ಮಾತನಾಡೋಣ ಎಂದು ಸೋಮಣ್ಣನಿಗೆ ಹೇಳಿದ್ದು ನಿಜ. ಆದರೆ ಮನೆಗೆ ಬರುವುದೇ ಬೇಡ ಎಂದು ಹೇಳಿಲ್ಲ. ನನ್ನ ಮನೆ ಎಲ್ಲರಿಗೂ ತೆರೆದಿರುತ್ತದೆ ಎಂದು ಮಾಧುಸ್ವಾಮಿ ಹೇಳಿದರು.

ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ಅದು ವಿಧಿ ಲಿಖಿತ. ವರಿಷ್ಠರು ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದ ಜನರು ನನಗೆ ಅವಕಾಶ ಕೊಟ್ಟರೆ ತುಮಕೂರನ್ನು ಮತ್ತೊಂದು ವಾರಾಣಸಿ ಮಾಡಬೇಕೆಂಬ ಕನಸಿದೆ.
-ವಿ.ಸೋಮಣ್ಣ, ತುಮಕೂರು ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.