Kunigal ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ; ಇಬ್ಬರು ಆರೋಪಿಗಳ ಬಂಧನ

ಕೊಲೆಗೆ ಮುಳುವಾದ ಬೈಗುಳ....

Team Udayavani, May 31, 2024, 9:47 PM IST

Kunigal ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ; ಇಬ್ಬರು ಆರೋಪಿಗಳ ಬಂಧನ

ಕುಣಿಗಲ್ : ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಕೊಲೆ ಗೈದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಲಿಯೂರುದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಕಸಬಾ ಹೋಬಳಿ ಬೂದಾನಹಳ್ಳಿ ಗ್ರಾಮದ ಪ್ರದೀಪ್‌ನ ಕೊಲೆ ಪ್ರಕರಣವನ್ನು ಭೇದಿಸಿದ ಹುಲಿಯೂರುದುರ್ಗ ಪೊಲೀಸರು ಈ ನಿಟ್ಟಿನಲ್ಲಿ ಲಕ್ಷ್ಮಿಪುರದ ಶಂಕರ್ (31), ಬೂದಾನಹಳ್ಳಿ ಗ್ರಾಮದ ನಾಗೇಶ್ (30) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಕಂಠಪೂರ್ತಿ ಕುಡಿಸಿ, ಟವಲ್‌ನಿಂದ ಕತ್ತು ಜೀರಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ತಲೆ ಮರಿಸಿಕೊಂಡಿದ್ದ ಇಬ್ಬರು ಆರೋಪಿಗಳ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಕೊಲೆಗೆ ಮುಳುವಾದ ಬೈಗುಳ : ಪ್ರದೀಪ್, ಶಂಕರ್ ಮತ್ತು ನಾಗೇಶ್ ಮೂವರು ಸ್ನೇಹಿತರಾಗಿದ್ದರು, ಅವರು ಆಗಿಂದಾಗ್ಗೆ, ಸೇರಿಕೊಂಡು ರಾತ್ರಿ ವೇಳೆಯಲ್ಲಿ ಮದ್ಯಪಾನ ಮಾಡುತ್ತಿದ್ದರು.ಆದರೆ, ಕುಡಿದ ಅಮಲಿನಲ್ಲಿ ಪ್ರದೀಪನು ಶಂಕರ್ ಮತ್ತು ನಾಗೇಶನಿಗೆ ಅವಾಚ್ಯವಾದ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ, ಇದರಿಂದ ಕುಪಿತಗೊಂಡ ಶಂಕರ್ ಮತ್ತು ನಾಗೇಶ್ ಪ್ರದೀಪನನ್ನು ಕೊಲೆ ಮಾಡಲೇ ಬೇಕೆಂದು ತೀರ್ಮಾನಿಸಿ, ಅದರಂತೆ ಮೇ 27 ಸೋಮವಾರ ಸುಮಾರು ರಾತ್ರಿ 8 ಗಂಟೆ ಸಮಯದಲ್ಲಿ ಲಕ್ಷ್ಮಿಪುರ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿಸಲು ಕರೆದೊಯ್ದಿದ್ದರು. ಆದರೆ ಶಂಕರ್ ಮತ್ತು ನಾಗೇಶ್ ಮದ್ಯಪಾನ ಮಾಡುವ ರೀತಿಯಲ್ಲಿ ನಾಟಕವಾಡಿದರು. ಬದಲಾಗಿ ಪ್ರದೀಪನಿಗೆ ಕಂಠಪೂರ್ತಿ ಕುಡಿಸಿದ್ದಾರೆ. ಬಳಿಕ ಪ್ರದೀಪನ ಟವೆಲ್‌ನಿಂದಲೇ ಉಸಿರು ಗಟ್ಟಿಸಿ, ಕೊಲೆ ಮಾಡಿದ್ದಾರೆ. ಬಳಿಕ ಸತ್ತನೋ, ಇಲ್ಲವೋ ಎಂಬ ಅನುಮಾನದಲ್ಲಿ ಮತ್ತೆ ತಲೆ ಮೇಲೆ ಕಲ್ಲು ಎತ್ತಿಹಾಕಿದರು. ಮೃತಪಟ್ಟಿರುವುದನ್ನು ದೃಢ ಪಡಿಸಿಕೊಂಡ ಬಳಿಕ ಶವವನ್ನು ಲಕ್ಷ್ಮಿಪುರ ಅರಣ್ಯದಲ್ಲಿ ಬಿಟ್ಟು ಮನೆಗೆ ತೆರಳಿದ್ದರು.

ಪ್ರಕರಣ ದಾಖಲು : ಪ್ರಕರಣ ದಾಖಲಿಸಿಕೊಂಡ ಹುಲಿಯೂರುದುರ್ಗ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್, ಡಿವೈಎಸ್‌ಪಿ ಓಂಪ್ರಕಾಶ್ ಮಾರ್ಗದರ್ಶನದಲ್ಲಿ, ಸಿಪಿಐ ಮಾದ್ಯನಾಯಕ್, ಪಿಎಸ್‌ಐ ಪ್ರಶಾಂತ್ ಅವರ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.