Kunigal ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ; ಇಬ್ಬರು ಆರೋಪಿಗಳ ಬಂಧನ
ಕೊಲೆಗೆ ಮುಳುವಾದ ಬೈಗುಳ....
Team Udayavani, May 31, 2024, 9:47 PM IST
ಕುಣಿಗಲ್ : ಕ್ಷುಲ್ಲಕ ಕಾರಣಕ್ಕಾಗಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಕೊಲೆ ಗೈದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಲಿಯೂರುದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಕಸಬಾ ಹೋಬಳಿ ಬೂದಾನಹಳ್ಳಿ ಗ್ರಾಮದ ಪ್ರದೀಪ್ನ ಕೊಲೆ ಪ್ರಕರಣವನ್ನು ಭೇದಿಸಿದ ಹುಲಿಯೂರುದುರ್ಗ ಪೊಲೀಸರು ಈ ನಿಟ್ಟಿನಲ್ಲಿ ಲಕ್ಷ್ಮಿಪುರದ ಶಂಕರ್ (31), ಬೂದಾನಹಳ್ಳಿ ಗ್ರಾಮದ ನಾಗೇಶ್ (30) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಕಂಠಪೂರ್ತಿ ಕುಡಿಸಿ, ಟವಲ್ನಿಂದ ಕತ್ತು ಜೀರಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ತಲೆ ಮರಿಸಿಕೊಂಡಿದ್ದ ಇಬ್ಬರು ಆರೋಪಿಗಳ ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಕೊಲೆಗೆ ಮುಳುವಾದ ಬೈಗುಳ : ಪ್ರದೀಪ್, ಶಂಕರ್ ಮತ್ತು ನಾಗೇಶ್ ಮೂವರು ಸ್ನೇಹಿತರಾಗಿದ್ದರು, ಅವರು ಆಗಿಂದಾಗ್ಗೆ, ಸೇರಿಕೊಂಡು ರಾತ್ರಿ ವೇಳೆಯಲ್ಲಿ ಮದ್ಯಪಾನ ಮಾಡುತ್ತಿದ್ದರು.ಆದರೆ, ಕುಡಿದ ಅಮಲಿನಲ್ಲಿ ಪ್ರದೀಪನು ಶಂಕರ್ ಮತ್ತು ನಾಗೇಶನಿಗೆ ಅವಾಚ್ಯವಾದ ಶಬ್ದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ, ಇದರಿಂದ ಕುಪಿತಗೊಂಡ ಶಂಕರ್ ಮತ್ತು ನಾಗೇಶ್ ಪ್ರದೀಪನನ್ನು ಕೊಲೆ ಮಾಡಲೇ ಬೇಕೆಂದು ತೀರ್ಮಾನಿಸಿ, ಅದರಂತೆ ಮೇ 27 ಸೋಮವಾರ ಸುಮಾರು ರಾತ್ರಿ 8 ಗಂಟೆ ಸಮಯದಲ್ಲಿ ಲಕ್ಷ್ಮಿಪುರ ಅರಣ್ಯ ಪ್ರದೇಶದಲ್ಲಿ ಮದ್ಯಪಾನ ಮಾಡಿಸಲು ಕರೆದೊಯ್ದಿದ್ದರು. ಆದರೆ ಶಂಕರ್ ಮತ್ತು ನಾಗೇಶ್ ಮದ್ಯಪಾನ ಮಾಡುವ ರೀತಿಯಲ್ಲಿ ನಾಟಕವಾಡಿದರು. ಬದಲಾಗಿ ಪ್ರದೀಪನಿಗೆ ಕಂಠಪೂರ್ತಿ ಕುಡಿಸಿದ್ದಾರೆ. ಬಳಿಕ ಪ್ರದೀಪನ ಟವೆಲ್ನಿಂದಲೇ ಉಸಿರು ಗಟ್ಟಿಸಿ, ಕೊಲೆ ಮಾಡಿದ್ದಾರೆ. ಬಳಿಕ ಸತ್ತನೋ, ಇಲ್ಲವೋ ಎಂಬ ಅನುಮಾನದಲ್ಲಿ ಮತ್ತೆ ತಲೆ ಮೇಲೆ ಕಲ್ಲು ಎತ್ತಿಹಾಕಿದರು. ಮೃತಪಟ್ಟಿರುವುದನ್ನು ದೃಢ ಪಡಿಸಿಕೊಂಡ ಬಳಿಕ ಶವವನ್ನು ಲಕ್ಷ್ಮಿಪುರ ಅರಣ್ಯದಲ್ಲಿ ಬಿಟ್ಟು ಮನೆಗೆ ತೆರಳಿದ್ದರು.
ಪ್ರಕರಣ ದಾಖಲು : ಪ್ರಕರಣ ದಾಖಲಿಸಿಕೊಂಡ ಹುಲಿಯೂರುದುರ್ಗ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್, ಡಿವೈಎಸ್ಪಿ ಓಂಪ್ರಕಾಶ್ ಮಾರ್ಗದರ್ಶನದಲ್ಲಿ, ಸಿಪಿಐ ಮಾದ್ಯನಾಯಕ್, ಪಿಎಸ್ಐ ಪ್ರಶಾಂತ್ ಅವರ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ
Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು
Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ
Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.