![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 4, 2023, 9:06 PM IST
ತುಮಕೂರು: ನಾನು ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು. ಪ್ರತಿ ದಿನ ಪ್ರಣಾಳಿಕೆ ರಚನೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಶುಕ್ರವಾರವೂ ಸಹ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರೊಂದಿಗೆ ಹಲವಾರು ಗಂಟೆಗಳ ಕಾಲ ಚರ್ಚೆ ನಡೆಯಿತು.
ಪ್ರಣಾಳಿಕೆಯನ್ನು ಆಯಾ ಜಿಲ್ಲೆಗಳ ಸಮಸ್ಯೆಗಳನ್ನೊಳಗೊಂಡಂತೆಯೇ ತಯಾರು ಮಾಡಲಾಗುವುದು ಎಂದು ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಾಲೇ ಕಲ್ಯಾಣ ಕರ್ನಾಟಕ ಮತ್ತು ಮಂಗಳೂರಿಗೆ ಭೇಟಿ ನೀಡಿ ಪ್ರಣಾಳಿಕೆಗೆ ಸ್ಥಳೀಯ ಸಮಸ್ಯೆಗಳನ್ನು ಆಲಿಸಲಾಗಿದೆ. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವುದರ ಬಗ್ಗೆಯೂ ಆಲೋಚನೆಯಿದ್ದು, ಆಯಾ ಜಿಲ್ಲೆಯ 10 ವಿಷಯಗಳನ್ನು ಇಟ್ಟುಕೊಂಡು ಪ್ರಣಾಳಿಕೆ ರಚನೆಯಾಗಲಿದೆ ಎಂದರು.
ಪ್ರತಿ ಬಡ ಕುಟುಂಬದ ಮಹಿಳೆಗೆ 2000 ರೂ.ಗಳನ್ನು ನೀಡಲು ಪ್ರಣಾಳಿಕೆಯಲ್ಲಿ ಸೇರಿಸಲು ಒಪ್ಪಿದ್ದು, ಇದಕ್ಕೆ ವರ್ಷಕ್ಕೆ 24 ಸಾವಿರ ಕೋಟಿ ಹಣ ಬೇಕು. ಇದನ್ನು ಯಾವ ಮೂಲದಿಂದ ಭರಿಸಬೇಕೆಂದು ಸಹ ಚರ್ಚೆಯಾಗಿದೆ. ಇದಲ್ಲದೆ, 1 ರಿಂದ 5ನೇ ತರಗತಿಯ ಮಕ್ಕಳಿಗೆ 150 ರೂ.ಗಳು ಮತ್ತು 6 ರಿಂದ 10ನೇ ತರಗತಿಯಲ್ಲಿನ ಮಕ್ಕಳಿಗೆ ಪ್ರತಿ ತಿಂಗಳು 300 ರೂ.ಗಳನ್ನು ನೀಡುವ ಬಗ್ಗೆ ಆಲೋಚನೆಯಿದ್ದು, ಇದನ್ನು ಪ್ರಣಾಳಿಕೆಯಲ್ಲಿ ಸೇರಿಸಲಾಗುವುದು ಎಂದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.