ಸೇವೆಗಳು ಆನ್‌ಲೈನ್‌: ಎಆರ್‌ಟಿಒ ದೇವಿಕಾ


Team Udayavani, Apr 2, 2022, 1:50 PM IST

ಸೇವೆಗಳು ಆನ್‌ಲೈನ್‌: ಎಆರ್‌ಟಿಒ ದೇವಿಕಾ

ಮಧುಗಿರಿ: ಸಾರಿಗೆ ಇಲಾಖೆಯಲ್ಲಿ ಜನಪರವಾದ ಯೋಜನೆಗಳು ಆರಂಭವಾಗಿದ್ದು, ಸಾರ್ವಜನಿಕರ 30 ಸೇವೆಗಳನ್ನು ಆನ್‌ಲೈನ್‌ ಮೂಲಕ ನೀಡಲು ಇಲಾಖೆ ಮುಂದಾಗಿದೆ ಎಂದು ಎಆರ್‌ಟಿಒ ದೇವಿಕಾ ತಿಳಿಸಿದ್ದಾರೆ.

ಪಟ್ಟಣದ ತಮ್ಮ ಕಚೇರಿಯಲ್ಲಿ ಬಸ್‌, ಕ್ಯಾಬ್‌ ಹಾಗೂ ಆಟೋ ಚಾಲಕರು, ಮಾಲೀಕರ ಸಭೆ ಕರೆದು ಮಾತನಾಡಿದ ಅವರು, ಕಳೆದ ತಿಂಗಳು 4 ಸೇವೆಗಳನ್ನು ಆನ್‌ಲೈನ್‌ ಮಾಡಿದ್ದು, ಹಳೆಯ ಯೋಜನೆಯಲ್ಲಿ 30 ಸೇವೆಗಳನ್ನು ಇಲಾಖೆ ಜನಪರವಾಗಿಸಿದೆ ಎಂದರು.

ಬಸ್‌ ಮೇಲೆ ಪ್ರಯಾಣಿಕರ ಸಾಗಾಟ ಮಾಡುವುದು ನಡೆದಿದ್ದು, ಚಾವಣಿ ತೆರವುಗೊಳಿಸಬೇಕೆಂದು ಮಾಲೀಕರಿಗೆ ಸೂಚಿಸಿದರು. ಆಟೋಗಳಲ್ಲಿಯೂ ಕೂಡ ಹೆಚ್ಚಿನ ಜನರನ್ನು ಸಾಗಣೆ ಮಾಡುವುದು ನಿಲ್ಲಿಸಬೇಕು ಎಂದರು.

ಇಲಾಖೆಯಿಂದ ಅನ್ಯಾಯ: ಖಾಸಗಿ ಬಸ್‌ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ್‌ ಮಾತನಾಡಿ, ಸರ್ಕಾರದ ನಿಯಮ ಪಾಲಿಸಿ ಟ್ಯಾಕ್ಸ್‌ ಕಟ್ಟೋರು ನಾವು. ನಮಗೆ ಸಾರಿಗೆ ಇಲಾಖೆಯಿಂದ ಅನ್ಯಾಯವಾಗುತ್ತಿದೆ. ಸಮಯದ ಪರ್ಮಿಟ್‌ ಇಲ್ಲದಿದ್ದರೂ ಖಾಸಗಿ ವಾಹನದ ಜೊತೆ ಪೈಪೋಟಿಗೆ ಇಳಿಯುತ್ತಾರೆ. ಸಮಯದ ಹೊಂದಾಣಿಕೆಯ ಬಗ್ಗೆ ಅರಿವಿಲ್ಲದೆ ಸಾರಿಗೆ ಡಿಪೋ ಅಧಿಕಾರಿಗಳ ಎಡವಟ್ಟಿ ನಿಂದ 2 ಬಸ್‌ಗಳು ಇಲ್ಲದ ಕಾರಣ ಒಂದೇ ಬಸ್‌ ಬಂದಾಗ ಪಾವಗಡದ ಘಟನೆ ನಡೆದಿದೆ ಎಂದರು.

ಗ್ರಾಮೀಣಕ್ಕೆ ಸಂಚಾರ ಇಲ್ಲ: ಗ್ರಾಮಾಂತರ ಸಾರಿಗೆ ಎಂಬ ಹೆಸರಿದ್ದರೂ ಯಾರೂ ಗ್ರಾಮೀಣ ಭಾಗದಲ್ಲಿ ಬಸ್‌ ಓಡಿಸಲ್ಲ. ಉಪವಿಭಾಗದ ಶೇ.80 ಹಳ್ಳಿಗಳಿಗೆ ಈಗಲೂ ಸಾರಿಗೆ ಬಸ್‌ ಸಂಚಾರವಿಲ್ಲ. ಯಾವುದೇ ಅಪಘಾತವಾದರೂ ಖಾಸಗಿ ಬಸ್‌ಗಳ ಮೇಲೆ ಬರೆ ಎಳೆಯುವುದು ಸರಿಯಲ್ಲ. ವಿದ್ಯಾರ್ಥಿಗಳಿಗೆ ಸಂಸ್ಥೆ ಪಾಸ್‌ ಕೊಟ್ಟು ಬಸ್‌ ಬಿಡುತ್ತಿಲ್ಲ. ಬಂದರೆ ಖಾಸಗಿ ಬಸ್‌ ಸಮಯಕ್ಕೆ ಬರುತ್ತಾರೆ. ಆಗ ಎಲ್ಲರಿಗೂ ನಷ್ಟವಾಗಲಿದ್ದು, ಈ ಬಗ್ಗೆಯೂ ಡಿಪೋ ಅಧಿಕಾರಿಗಳಿಗೆ ತಿಳಿ ಹೇಳಬೇಕು ಎಂದರು.

 30 ಸೇವೆಗಳು ಆನ್‌ಲೈನ್‌: ಸಾರಥಿ ಸೇವೆಯಲ್ಲಿ ಎಲ್‌ಎಲ್‌ಆರ್‌ ಅಸಲಿ ಮತ್ತು ನಕಲು ಪತ್ರ, ಹೆಸರು ಮತ್ತು ವಿಳಾಸ ಬದಲಾವಣೆ, ಕಂಡಕ್ಟರ್‌ ಪರವಾನಿಗಿ, ಹೆಸರು, ವಿಳಾಸ ಬದಲಾವಣೆ ಮತ್ತು ನಕಲು ಪತ್ರ, ಅಂತಾರಾಷ್ಟ್ರೀಯ ಕಲಿಕಾ ಪತ್ರ.

ವಾಹನ್‌ ಸೇವೆಯಲ್ಲಿ: ಹೊಸ ವಾಹನ ನೋಂದಣಿ, ಮಾಲೀಕತ್ವ, ವಿಳಾಸ ವರ್ಗಾವಣೆ, ನಕಲು ಪತ್ರ, ಕಂತಿನ ಕರಾರು, ಮುಂದುವರಿಕೆ, ತಾತ್ಕಾಲಿಕ ನೋಂದಣಿ, ಎನ್‌ಒಸಿ, ಸಿಸಿ ಹಾಗೂ ಬಿ ವರದಿ, ಕ್ಯಾಬ್‌, ಆಟೋ, ಸರಕು ಸಾಗಣೆ ವಾಹನ ಪರ್ಮಿಟ್‌, ಎಲ್ಲ ತರದ ನವೀಕರಣ, ನಕಲಿ ಪರ್ಮಿಟ್‌, ಪರ್ಮಿಟ್‌ ರದ್ಧತಿ ಸೇರಿದಂತೆ ಒಟ್ಟು 30 ಸೇವೆಗಳನ್ನು ಆನ್‌ಲೈನಲ್ಲಿ ಕುಳಿತು ಪಡೆಯಬಹುದು.

ಈ ಸಂದರ್ಭದಲ್ಲಿ ಖಾಸಗಿ ಬಸ್‌ ಮಾಲೀಕರಾದ ಮಂಜುನಾಥ್‌, ಚೌಡಪ್ಪ, ಮಂಜಣ್ಣ, ಪ್ರಸನ್ನಪ್ಪ, ಸಲೀಂ ಹಾಗೂ ಆಟೋ, ಕ್ಯಾಬ್‌ ಮಾಲೀಕರು, ಚಾಲಕರು ಎಆರ್‌ಟಿಒ ಕಚೇರಿ ವ್ಯವಸ್ಥಾಪಕ ಜಯಣ್ಣ, ರಾಜಣ್ಣ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.