ಎತ್ತಿನಹೊಳೆ: ಹೋರಾಟ ತೀವ್ರಗೊಳಿಸಲು ಸಂಘಟನೆಗಳ ನಿರ್ಧಾರ

ಕೊನೆಹಳ್ಳಿಯಿಂದ ಕೆ.ಬಿ.ಕ್ರಾಸ್‌ವರೆಗೆ ಕಾಲ್ನಡಿಗೆ ಜಾಥಾ, ಬೃಹತ್‌ ಸಮಾವೇಶ ನಡೆಸಲು ತೀರ್ಮಾನ

Team Udayavani, Jun 26, 2019, 1:23 PM IST

tk-tdy-2..

ತಿಪಟೂರು ತಾಲೂಕಿಗೆ ಎತ್ತಿನಹೊಳೆ ಯೋಜನೆಯಲ್ಲಿ ನ್ಯಾಯ ಕೋರಿ ಹೋರಾಟ ಸಂಘ ಟಿಸಲು ವಿವಿಧ ಸಂಘಟನೆಗಳ ಹಾಗೂ ಮುಖಂಡರ ಸಭೆ ನಡೆಯಿತು.

ತಿಪಟೂರು:ಎತ್ತಿನಹೊಳೆ ಯೋಜನೆಯಲ್ಲಿ ತಾಲೂಕಿಗೆ ನೀರು ಮೀಸಲಿಡಲು ಆಗ್ರಹಿಸಿ ಹಾಗೂ ಭೂ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಹೋರಾಟ ತೀವ್ರಗೊಳಿಸಲು ರೈತ ಮತ್ತು ಜನಪರ ಸಂಘಟನೆಗಳು ನಿರ್ಧರಿಸಿವೆ.

ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ರೈತ-ಕೃಷಿ ಕಾರ್ಮಿಕರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಎಪಿಎಂಸಿಯ ರೈತ ಭವನದಲ್ಲಿ ನಡೆದ ಸಭೆಯಲ್ಲಿ ಹೋರಾಟದ ನಿರ್ಣಯ ಕೈಗೊಳ್ಳಲಾಯಿತು.

ನೀರಿನ ಸೌಲಭ್ಯ ಸಿಗುತ್ತಿಲ್ಲ: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿ ತುಮಕೂರು ಜಿಲ್ಲೆಯಲ್ಲಿ ಕಾಮಗಾರಿ ಆರಂಭಕ್ಕೆ ಪ್ರಾಥಮಿಕ ಹಂತದಲ್ಲಿ ನೋಟಿಸ್‌ ಜಾರಿ ಹಾಗೂ ಸರ್ವೆ ಕಾರ್ಯ ನಡೆ ಯುತ್ತಿದೆ. ಆದರೆ ಭೂಮಿ ಕಳೆದುಕೊಳ್ಳುವ ರೈತರ ಅಹವಾಲನ್ನು ಸರ್ಕಾರ ನಿರ್ಲಕ್ಷಿಸಿದೆ. ಎತ್ತಿನಹೊಳೆ ಮುಖ್ಯ ಕಾಲುವೆ ಹಾದು ಹೋಗುತ್ತಿದ್ದರೂ ತೀವ್ರ ಬರ ಪ್ರದೇಶದ ತಿಪಟೂರಿಗೆ ಯೋಜನೆಯಲ್ಲಿ ನೀರಿನ ಸೌಲಭ್ಯ ಕಲ್ಪಿಸಿಲ್ಲ ಎಂದು ಮುಖಂಡರು ಆರೋಪಿಸಿದರು.

ಸೂಕ್ತವಾಗಿ ಸ್ಪಂದಿಸದ ಜಿಲ್ಲಾಡಳಿತ: ಎತ್ತಿನ ಹೊಳೆ ಯೋಜನೆಯಲ್ಲಿ ತಾಲೂಕಿಗೆ ಅಗತ್ಯ ಹಂಚಿಕೆ ಆಗಬೇಕು. ಇಲ್ಲಿನ ಕರೆಗಳನ್ನು ತುಂಬಿಸಬೇಕು. ಯೋಜನೆಯ ಸಂತ್ರಸ್ತ ರೈತರ ಭೂಮಿ, ಮನೆ, ನಿವೇಶನಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಈ ಹಿಂದೆ ಬೃಹತ್‌ ಪ್ರತಿಭಟನೆ ನಡೆಸಿದ್ದರೂ ಜಿಲ್ಲಾ ಡಳಿತ ಸ್ಪಂದಿಸಿಲ್ಲವೆಂದು ದೂರಿದರು.

ಕಾಲ್ನಡಿಗೆ ಜಾಥಾ: ಹಾಗಾಗಿ ಹೋರಾಟ ತೀರ್ವ ಗೊಳಿಸಲು ಸಭೆ ಒಮ್ಮತದ ತೀರ್ಮಾನ ಕೈಗೊಂಡಿತು. ಹೋರಾಟದ ಭಾಗವಾಗಿ ಪ್ರತಿ ಗ್ರಾಮಗಳಲ್ಲೂ ಹೋರಾಟ ಸಮಿತಿಗಳ ರಚನೆ, ಪಂಚಾಯಿತಿವಾರು ಗ್ರಾಮಸಭೆ ನಡೆಸಿ ಜನರನ್ನು ಜಾಗೃತಗೊಳಿಸುವುದು. ಕೊನೆಹಳ್ಳಿಯಿಂದ ಕೆ.ಬಿ. ಕ್ರಾಸ್‌ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಯಿತು.

ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ದೇವರಾಜ್‌, ತಾಲೂಕು ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ, ಹಸಿರು ಸೇನೆ ತಾಲೂಕು ಅಧ್ಯಕ್ಷ ತಿಮ್ಲಾಪುರ ದೇವ ರಾಜ್‌, ರೈತ ಕೃಷಿ ಕಾರ್ಮಿಕರ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಆನಂದ, ಸಂಚಾಲಕ ಭೈರನಾಯಕನ ಹಳ್ಳಿ ಲೋಕೇಶ್‌, ಯೋಜನಾ ಸಂತ್ರಸ್ತರ ಸಮಿತಿ ಮನೋಹರ್‌ ಪಾಟೀಲ್, ಸೌಹಾರ್ದ ವೇದಿಕೆಯ ಅಲ್ಲಾ ಬಕಾಶ್‌, ಜನ ಸ್ಪಂದನಾ ಟ್ರಸ್ಟ್‌ ಅಧ್ಯಕ್ಷ ಸಿಬಿ ಶಶಿಧರ್‌, ಹೋರಾಟಗಾರರಾದ ವಿಜಯ ಕುಮಾರ್‌, ಸಿದ್ದು, ಕೋದಂಡರಾಮಯ್ಯ, ಚಿಕ್ಕ ಬಿದರೆ ರಾಜಶೇಖರಪ್ಪ, ತಿಮ್ಲಾಪುರ ಭೈರೇಶ್‌, ಬೊಮ್ಲಾಪುರ ದಕ್ಷಿಣಮೂರ್ತಿ, ಉಜ್ಜಜ್ಜಿ ರಾಜಣ್ಣ, ನೀಲಕಂಠ ಸ್ವಾಮಿ ಸೇರಿದಂತೆ ನಾಗತಿಹಳ್ಳಿ, ಮಾದಿಹಳ್ಳಿ, ಕಲ್ಲೇಗೌಡನ ಪಾಳ್ಯ, ಭೈರನಾಯಕನ ಹಳ್ಳಿ, ಹಳೇಪಾಳ್ಯ, ಕಂಚೇಘಟ್ಟ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.