ಅನ್‌ಲಾಕ್‌: ಕೋವಿಡ್ ಮರೆತ ಜನ


Team Udayavani, Jul 6, 2021, 3:02 PM IST

ಅನ್‌ಲಾಕ್‌: ಕೋವಿಡ್ ಮರೆತ ಜನ

ತುಮಕೂರು: ಕೋವಿಡ್ 2ನೇ ಅಲೆಯ ಪಾಸಿಟಿವಿಟಿ ದರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕಲ್ಪತರು ನಾಡು ಸಂಪೂರ್ಣ ಅನ್‌ಲಾಕ್‌ ಆಗಿರುವುದರಿಂದ ಜಿಲ್ಲಾದ್ಯಂತ ಜನ ಕೊರೊನಾ ಮರೆತು ಸೋಮವಾರ ಎಂದಿನಂತೆ ಸಂಚರಿಸಿದರು.

3ನೇ ಅಲೆಯ ಕೋವಿಡ್ ಸೋಂಕಿನ ಭೀತಿ ನಡುವೆಯೇ ಜಿಲ್ಲೆ 2ನೇ ಅಲೆಯ 3ನೇ ಅನ್‌ ಲಾಕ್‌ ಆಗಿದೆ. ಈಗ 3ನೇಅಲೆ ಭೀತಿಯಿದ್ದರೂ ಜಿಲ್ಲೆಯಲ್ಲಿ ಜನ ಕೋವಿಡ್  ಮರೆತು ಮಾಸ್ಕ್ಧರಿಸದೇ ಸಂಚರಿಸಿದರು. ಬಹುತೇಕ ಎಲ್ಲಾ ಅಂಗಡಿಗಳು ತೆರೆದಿದ್ದ ಹಿನ್ನೆಲೆಯಲ್ಲಿ ನಗರಸೇರಿದಂತೆ ಜಿಲ್ಲಾದ್ಯಂತ ಜನ ಕೋವಿಡ್ ನಿಯಮ ಮೀರಿ ಓಡಾಡಿದರು.

ನಿಯಮ ಪಾಲಿಸಿ: ಕೋವಿಡ್‌ ನಿಯಮವನ್ನು ತಪ್ಪದೇ ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಪಾಲನೆ ಆಗುತ್ತಿಲ್ಲ. ಜಿಲ್ಲೆಯಲ್ಲಿ ಜನ ಮುಂದೆ 3ನೇ ಅಲೆ ಬರುತ್ತದೆ ಎನ್ನುವುದನ್ನೂ ಮರೆತು ಜನರು ಮಾಸ್ಕ್ ಧರಿಸದೇ ದೈಹಿಕ ಅಂತರ ಕಾಯ್ದು ಕೊಳ್ಳದೇ ಅಡ್ಡಾಡುತ್ತಿದ್ದಾರೆ. ಆದರೆ ಯಾವುದೇ ಅಧಿಕಾರಿಗಳು ನಿಯಂತ್ರಣಕ್ಕೆ ಮುಂದಾಗಿಲ್ಲ.ಜಿಲ್ಲೆಯಲ್ಲಿ ಕಡಿಮೆಯಾಗಿರುವ ಕೊರೊನಾಹೀಗೇ ಮುಂದುವರಿಯಬೇಕಾದರೆ ತಪ್ಪದೇ ಪ್ರತಿಯೊಬ್ಬರೂ ಕೋವಿಡ್‌ ನಿಯಮ ಪಾಲಿಸಬೇಕಿದೆ.

ರಸ್ತೆಗಳು ಎಲ್ಲೆಲ್ಲೂ ಜಾಮ್‌ ಜಾಮ್‌: ಕೋವಿಡ್ 3ನೇ ಅನ್‌ಲಾಕ್‌ ಆಗಿರುವ ಹಿನ್ನೆಲೆಯಲ್ಲಿ ಸೋಮವಾರ ತುಮಕೂರು ನಗರದ ತುಂಬಾ ವಾಹನಗಳು ತೀವ್ರವಾಗಿ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರದ ರಸ್ತೆಗಳು ವಾಹನಗಳಿಂದ ತುಂಬಿ ಹೋಗಿದ್ದವು. ವಾಹನಗಳು ಅಧಿಕವಾಗಿ ಬೀದಿಗೆ ಬಂದಿದ್ದರಿಂದ ನಗರದ ಬಹುತೇಕ ರಸ್ತೆಗಳು ಜಾಮ್‌ ಆಗಿದ್ದವು. ಒಂದೊಂದು ರಸ್ತೆಗಳಲ್ಲಿ ಅರ್ಧ ಗಂಟೆ ಕಾಯಬೇಕಾದ ಪರಿಸ್ಥಿತಿ ಕಂಡು ಬಂದಿತು.

ತುಮಕೂರು ನಗರದೆಲ್ಲೆಡೆ ನಿರ್ಲಕ್ಷ್ಯದ ಓಡಾಟ :

ಲಾಕ್‌ ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ಸೋಂಕು ಮರೆತು ಬೀದಿಗೆ ಬಂದು ನಿರ್ಲಕ್ಷ್ಯದಿಂದ ಜನರ ಓಡಾಟ ಹೆಚ್ಚಿದೆ. ಜಿಲ್ಲೆಯ ಜನ ಸೋಂಕು ಮರೆತು ಎಂದಿನಂತೆ ರಸ್ತೆಗಳಲ್ಲಿ ಸಂಚಾರ ಮಾಡುತ್ತಿದ್ದಾರೆ. ಸಾವಿರಾರು ವಾಹನಗಳು ರಸ್ತೆಗಿಳಿದಿವೆ. ಈ ವೇಳೆ ಕೆಲವರು ಮಾಸ್ಕ್ ಧರಿಸದೇ ಕೊರೊನಾ ನಿಯಮ ಬಿಟ್ಟು ಅಡ್ಡಾಡುತ್ತಿದ್ದಾರೆ. ಇವರಿಗೆ ಹೇಳುವವರು, ಕೇಳುವವರು ಯಾರೂ ಇಲ್ಲದಂತಾಗಿದೆ. ಜಿಲ್ಲಾಡಳಿತ ಇದಕ್ಕೆ ಕಡಿವಾಣ ಹಾಕದಿದ್ದರೆ ಮತ್ತೆ ಜಿಲ್ಲೆಯಲ್ಲಿ ಸೋಂಕು ಹೆಚ್ಚುವ ಸಾಧ್ಯತೆ ನಿಶ್ಚಳವಾಗಿದೆ.

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.