ನೀರಾವರಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ

ಮಾಜಿ ಪ್ರಧಾನಿಯಿಂದ ನಮ್ಮ ಜಿಲ್ಲೆಗೆ ಅನ್ಯಾಯ • ಮತದಾರರ ಋಣ ಎಂದೂ ಮರೆಯಲ್ಲ: ಜಿ.ಎಸ್‌.ಬಸವರಾಜ್‌

Team Udayavani, May 26, 2019, 3:23 PM IST

tk-tdy-2

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಐದನೇ ಬಾರಿ ಸಂಸತ್‌ಗೆ ಪ್ರವೇಶ ಮಾಡುತ್ತಿರುವ ಸಂಸದ ಜಿ.ಎಸ್‌.ಬಸವರಾಜ್‌ ಉದಯವಾಣಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಾನು ಈ ಹಿಂದಿ ನಿಂದಲೂ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಜನ ನರೇಂದ್ರ ಮೋದಿಯವರ ಆಡಳಿತ ಮೆಚ್ಚಿ ನನನ್ನು 17ನೇ ಲೋಕಸಭೆಗೆ ಆಯ್ಕೆ ಮಾಡಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಬಗ್ಗೆ ನನಗೆ ತುಂಬಾ ಅಭಿಮಾನ ಮತ್ತು ಗೌರವವಿದೆ. ಅವರು ಹಿರಿಯರು ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಚುನಾವಣೆ ಅಂದರೆ, ಸೋಲು- ಗೆಲುವು ಇರುತ್ತದೆ. ಆದರೆ, ನನ್ನ ಗೆಲುವಿಗೆ ನಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು ಜೊತೆಗೆ ಕೆಲವು ಮುಖಂಡರು ಇತರೆ ಮತದಾರರು ಪಕ್ಷಾತೀತವಾಗಿ ಮತಚಲಾಯಿಸಿದ್ದಾರೆ. ಅವರ ಈ ಸೇವೆಯನ್ನು ನಾನು ಎಂದೂ ಮರೆಯುವುದಿಲ್ಲ.

ಮಾಜಿ ಪ್ರಧಾನಿ ದೇವೇಗೌಡರನ್ನು ಸೋಲಿಸಲು ಮೋದಿ ಅಲೆಯೇ ಕಾರಣವೇ?:

ನರೇಂದ್ರ ಮೋದಿ ಅಲೆ ಎಲ್ಲಾ ಕಡೆ ಇದೆ. ಅದರಂತೆ ಇಲ್ಲಿಯೂ ಇತ್ತು. ಎಲ್ಲರೂ ಪಕ್ಷಾತೀತವಾಗಿ ನನಗೆ ಮತ ನೀಡಿದ್ದಾರೆ. ಅದರಿಂದ ಗೆಲುವಿಗೆ ಹೆಚ್ಚು ನನಗೆ ಸಹಕಾರಿಯಾಗಿತು.

•ದೇವೇಗೌಡರ ಸೋಲಿಗೆ ಕಾರಣವೇನು? ಅವರ ಸೋಲಿಗೆ ನೀವು ಏನು ಹೇಳುತ್ತೀರಾ?:

ನಾನು ದೇವೇಗೌಡರ ಬಗ್ಗೆ ಏನೂ ಮಾತನಾಡುವುದಿಲ್ಲ. ಅವರು ಹಿರಿಯರಿದ್ದಾರೆ. ಅವರ ಬಗ್ಗೆ ನನಗೆ ಗೌರವ ವಿದೆ. ಅವರು ಮಣ್ಣಿನ ಮಗ, ಅವರು ಹಾಸನಕ್ಕೆ ಒಳ್ಳೆ ಕೆಲಸ ಮಾಡಿದ್ದಾರೆ. ಆದರೆ, ಅವರು ನಮ್ಮ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ. ನಮಗೆ ಹೇಮಾವತಿ ನೀರು ಕೊಡಲಿಲ್ಲ. ಇದನ್ನು ಜಿಲ್ಲೆಯ ಜನ ಮರೆತ್ತಿಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ.

•ಜನ ನಿಮ್ಮನ್ನು ಗೆಲ್ಲಿಸಿದ್ದಾರೆ. ನೀವು ಜಿಲ್ಲೆಯ ಅಭಿವೃದ್ಧಿಗೆ ಮೊದಲ ಆದ್ಯತೆ ಏನು?:

ನನ್ನ ಮೊದಲ ಆದ್ಯತೆ ಜಿಲ್ಲೆಗೆ ಕುಡಿಯಲು ನೀರು ಬೇಕು. ನೀರಾವರಿ ಯೋಜನೆ ಅನುಷ್ಠಾನ ಮಾಡು ವುದು ಜೊತೆಗೆ ಮೋದಿಯವರ ಕಾರ್ಯಕ್ರಮಗಳನ್ನು ಜಿಲ್ಲೆಯ ಜನರಿಗೆ ಹೆಚ್ಚು ತಲುಪಿಸುವುದು, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವುದು.

•ನಿಮ್ಮ ಗೆಲುವಿಗೆ ಜೆಡಿಎಸ್‌ ಶಾಸಕರು ಇರುವ ಕ್ಷೇತ್ರಗಳಲ್ಲಿ ಹೆಚ್ಚು ಮತಗಳು ಬಂದಿವೆ. ಇದಕ್ಕೆ ಏನಂತ್ತೀರಾ?:

ಜಿಲ್ಲೆಯು ಸದಾ ಬರಗಾಲದಲ್ಲಿ ಇದೆ. ಮಳೆ ಸರಿಯಾಗಿ ಬರುತ್ತಿಲ್ಲ. ನೀರಿನ ಸಮಸ್ಯೆ ಇದೆ. ನಾನು ಮೊದಲಿನಿಂದಲೂ ನೀರಿಗಾಗಿ ಹೋರಾಟ ಮಾಡು ತ್ತಿದ್ದೇನೆ. ಜೊತೆಗೆ ಮಧುಗಿರಿಯಲ್ಲಿ ನೀರಿನ ಸಮಸ್ಯ ಇದೆ. ಇದನ್ನೆಲ್ಲಾ ನೋಡಿ, ಮತದಾರರು ಪಕ್ಷಾತೀತ ವಾಗಿ ನನಗೆ ಮತ ನೀಡಿದ್ದಾರೆ. ಜೊತೆಗೆ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ನೋಡಿದ್ದಾರೆ, ನಮ್ಮ ಪಕ್ಷದ ಕಾರ್ಯಕರ್ತರು ಬಹಳ ನಿಷ್ಠೆಯಿಂದ ಒಗ್ಗಾಟ್ಟಾಗಿ ಕೆಲಸ ಮಾಡಿದ್ದು, ನನ್ನ ಗೆಲುವಿಗೆ ಪ್ರಮುಖ ಕಾರಣ.

•ನಿಮ್ಮ ಶಾಸಕರು ಇರುವ ಚಿಕ್ಕನಾಯಕನಹಳ್ಳಿ ಮತ್ತು ತುರುವೇಕೆರೆ ಕ್ಷೇತ್ರದಲ್ಲಿ ಲೀಡ್‌ ಬರದ ಬಗ್ಗೆ ಏನು ಹೇಳುತ್ತೀರಾ?:

ನಮ್ಮ ಶಾಸಕರು ಇರುವ ಕ್ಷೇತ್ರಗಳಲ್ಲಿ ಈ ಹಿಂದಿಗಿಂತ ಉತ್ತಮ ಮತಗಳು ಬಂದಿವೆ.

ಅಲ್ಲಿ ಎರಡೂ ಪಕ್ಷಗಳ ಮತಗಳು ಒಂದಾದವು ಹಾಗೇ ನೋಡಿದರೆ, ನಮ್ಮ ಮತ ಅಲ್ಲಿ ಇನ್ನೂ ಕಡಿಮೆ ಯಾಗಬೇಕಾಗಿತ್ತು. ಆದರೆ, ನಮ್ಮ ಮತಗಳು ಹೆಚ್ಚಿವೆ. ಅಲ್ಲಿಯೂ ನಮ್ಮ ಶಾಸಕರು ಉತ್ತಮ ಕೆಲಸ ಮಾಡಿದ್ದಾರೆ. ಆದ್ದರಿಂದ ಗೆಲುವಿಗೆ ಕಾರಣವಾಗಿದೆ.

•ಮತದಾರರು, ಜನರಿಗೆ ನೀವು ಏನು ಹೇಳುತ್ತೀರಾ?:

ಕ್ಷೇತ್ರದ ಮತದಾರರು ನನಗೆ ಮತನೀಡಿ, ಗೆಲುವಿಗೆ ಕಾರಣರಾಗಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ. ನಮ್ಮ ಪಕ್ಷದ ಎಲ್ಲಾ ಮುಖಂಡರಿಗೆ ಕಾರ್ಯಕರ್ತರಿಗೆ ಮತ್ತು ನನಗೆ ಪ್ರತ್ಯೇಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೆ ಅಭಿನಂದಿಸುತ್ತೇನೆ.

● ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.