ಗೌರವಧನಕ್ಕೆ ಆಗ‌್ರಹಿಸಿ ಪ್ರತಿಭಟನೆ

ಮೂರು ತಿಂಗಳಿನಿಂದ ವೇತನವಿಲ್ಲ • ಅಧಿಕಾರಿಗಳ ದೌರ್ಜನ್ಯಕ್ಕೆ ಖಂಡನೆ

Team Udayavani, Jun 25, 2019, 12:26 PM IST

tk-tdy-2..

ಗೌರವಧನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಕುಣಿಗಲ್ ಪಟ್ಟಣದ ಸಿಡಿಪಿಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಾಂತಕುಮಾರಿ ಇತರರಿದ್ದರು.

ಕುಣಿಗಲ್: ಗೌರವಧನಕ್ಕಾಗಿ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿ, ಅಧಿಕಾರಿಗಳ ದೌರ್ಜನ್ಯ, ದಬ್ಟಾಳಿಕೆಯನ್ನು ಖಂಡಿಸಿದರು.

ನಿರಂತರ ದಬ್ಟಾಳಿಕೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅಂಗನವಾಡಿ ನೌಕರರಿಗೆ ಕಳೆದ ಮೂರು ತಿಂಗಳಿನಿಂದ ಗೌರವಧನ ನೀಡಿಲ್ಲ ಹಾಗೂ ನೌಕರರ ಮೇಲೆ ನಿರಂತರ ದಬ್ಟಾಳಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶಾಂತಕುಮಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೂಡಲೇ ಗೌರವಧನ ನೀಡಬೇಕು ಹಾಗೂ ದೌರ್ಜನ್ಯ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕಚೇರಿಯಲ್ಲಿ ಶೌಚಗೃಹವಿಲ್ಲ: ನೌಕರರ ಸಂಘದ ಅಧ್ಯಕ್ಷೆ ಶಾಂತಕುಮಾರಿ ಮಾತನಾಡಿ ಕಾಯಂ ಸಿಡಿಪಿಒ ಇಲ್ಲದ ಕಾರಣ, ಮಹಿಳಾ ಸಂರಕ್ಷಣಾಧಿಕಾರಿಗಳು ಪ್ರಭಾರ ಸಿಡಿಪಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೌಕರರಿಗೆ ಯಾವುದೇ ಸಂರಕ್ಷಣೆ ನೀಡದೆ ವಿನಾ ಕಾರಣ ದೌರ್ಜನ್ಯ ಮಾಡುವ ಮೂಲಕ ತೀವ್ರ ತೊಂದರೆ ನೀಡುತ್ತಿದ್ದಾರೆ, ಅಲ್ಲದೆ ಮೇಲ್ವಿಚಾರಕರು ಚೀಟಿ ವ್ಯವಹಾರ ನಡೆಸಿ ನೌಕರರೊಂದಿಗೆ ಹಣಕಾಸು ಲೇವಾದೇವಿ ನಡೆಸುತ್ತಿದ್ದಾರೆ. ಅವರ ಮಾತು ಕೇಳುವ ನೌಕರರಿಗೆ ಯಾವುದೇ ತೊಂದರೆ ನೀಡುವುದಿಲ್ಲ. ಅವರ ಮಾತು ಕೇಳದ ನೌಕರರಿಗೆ ಸಣ್ಣಪುಟ್ಟ ವಿಚಾರಗಳಿಗೆ ವಿನಾಕಾರಣ ನೋಟಿಸ್‌ ನೀಡಿ ದಬ್ಟಾಳಿಕೆ ನಡೆಸುತ್ತಿದ್ದಾರೆ. ಮೂರು ತಿಂಗಳಿಗೆ ಒಮ್ಮೆ ನೌಕರರ ಕುಂದು ಕೊರತೆ ಸಭೆ ಕರೆಯಬೇಕೆಂಬ ನಿಯಮವಿದ್ದರೂ ಮೂರು ತಿಂಗಳಾದರೂ ಮೀಟಿಂಗ್‌ ಕರೆಯದೆ ನಿಯಮ ಗಾಳಿಗೆ ತೂರಲಾಗಿದೆ. ಕಚೇರಿಯಲ್ಲಿ ಶೌಚಗೃಹವಿಲ್ಲದೆ ನೌಕರರಿಗೆ ತೊಂದರೆಯಾಗಿದೆ. ಸಮಸ್ಯೆ ಸರಿಪಡಿಸುವಂತೆ ಕೇಳಿದರೆ ಬೈದು ಕಳುಹಿಸುತ್ತಾರೆ ಎಂದು ಆರೋಪಿಸಿದರು.

ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ 365ಕ್ಕೂ ಅಧಿಕ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರಿಗೆ ಕಳೆದ ಮೂರು ತಿಂಗಳಿನಿಂದ ಗೌರವಧನ ನೀಡಿಲ್ಲ. ಇದರಿಂದ ಅಂಗನವಾಡಿ ನೌಕರರ ಕುಟುಂಬ ನಿರ್ವಹಣೆಗೆ ತೀವ್ರ ತೊಂದರೆ ಉಂಟಾಗಿದೆ. ಆದರೆ ತಾಲೂಕಿನ ನೆರೆಯ ಜಿಲ್ಲೆಯಾದ ಮಂಡ್ಯದಲ್ಲಿ ಮೂರು ತಿಂಗಳಿನಿಂದ ಗೌರವ ಧನ ನೀಡಿದ್ದಾರೆ. ಆದರೆ ನಮ್ಮ ಜಿಲ್ಲೆಯ ನೌಕರರಿಗೆ ಏಕೆ ನೀಡಿಲ್ಲ ಎಂದು ಪ್ರಶ್ನಿಸಿದರು.

ಎಲ್ಲ ಸರ್ಕಾರಿ ಕೆಲಸಗಳಿಗೆ ಅಂಗನವಾಡಿ ನೌಕರರು ಬೇಕು. ಆದರೆ ಗೌರವಧನ ಮಾತ್ರ ನೀಡುತ್ತಿಲ್ಲ ಎಂದು ಕಿಡಿಕಾರಿದರು. ಕೂಡಲೇ ನೌಕರರಿಗೆ ಗೌರವ ಧನ ನೀಡಬೇಕು. ದೌರ್ಜನ್ಯ, ದಬ್ಟಾಳಿಗೆ ನಡೆಸುವ ಅಧಿಕಾರಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಶಾಂತಕುಮಾರಿ ಒತ್ತಾಯಿಸಿದರು. ಬಳಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘದ ಕಾರ್ಯ ದರ್ಶಿ ಗೌರಮ್ಮ, ಖಜಾಂಚಿ ಗೀತಾ, ಪ್ರಮುಖರಾದ ನಸೀಮಾ, ಅನ್ನಪೂರ್ಣ, ಮಂಜುಳ, ಭಾಗ್ಯ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.