![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jul 31, 2023, 10:29 PM IST
ತುಮಕೂರು: ಪಿಎಸ್ಐ ನೇಮಕಾತಿ ಹಗರಣ ಮುಕ್ತಾಯಗೊಳ್ಳುವವರೆಗೂ ಹೊಸ ನೇಮಕಾತಿ ಸಾಧ್ಯವಿಲ್ಲ. ಹಗರಣದ ತನಿಖೆ ಮುಕ್ತಾಯಗೊಂಡು ಸಮಸ್ಯೆ ಬಗೆಹರಿದ ಬಳಿಕವಷ್ಟೇ ಹೊಸ ನೇಮಕಾತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಹಗರಣದಿಂದ ಬಹಳಷ್ಟು ಮಂದಿಗೆ ತೊಂದರೆಯಾಗಿದೆ. ನೇಮಕಾತಿಯೂ ನಿಂತು ಹೋಗಿದೆ. ಎಲ್ಲವೂ ಸರಿ ಹೋಗಿದ್ದರೆ 545 ಮಂದಿ ಪಿಎಸ್ಐಗಳ ನೇಮಕಾತಿಯಾಗಬೇಕಾಗಿತ್ತು, ಈಗ ಮತ್ತೆ ಗೃಹ ಇಲಾಖೆ 400 ಮಂದಿ ಪಿಎಸ್ಐಗಳ ನೇಮಕ ಮಾಡಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದೆ. ಈ ಎರಡೂ ಸೇರಿ ಒಟ್ಟು ಸಾವಿರ ಮಂದಿ ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಹಗರಣದ ತನಿಖೆ ಮುಕ್ತಾಯಗೊಂಡು ಸಮಸ್ಯೆ ಬಗೆಹರಿದ ಬಳಿಕವಷ್ಟೆ ಹೊಸ ನೇಮಕಾತಿ ಮಾಡಬೇಕಾಗಿದೆ. ಆದಷ್ಟು ಶೀಘ್ರ ಇದನ್ನು ಬಗೆಹರಿಸುತ್ತೇವೆ. ಅಭ್ಯರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕ್ಷಮೆ ಕೇಳುವ ಅಗತ್ಯವಿಲ್ಲ: ಶಾಸಕ ಬಿ.ಆರ್. ಪಾಟೀಲ್ ಕ್ಷಮೆ ಕೇಳಬೇಕಾಗಿಲ್ಲ, ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಬೇರೆ ಉದ್ದೇಶಕ್ಕೆ ನಾವು ಈ ರೀತಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಸಿಎಲ್ಪಿ ಸಭೆ ಕರೆಯುವಂತೆ ಶಾಸಕರು ಮನವಿ ಮಾಡಿದ್ದರು. ಅದರಂತೆ ಸಭೆ ಕರೆದು ಚರ್ಚೆ ಮಾಡಲಾಗಿದೆ ಅಷ್ಟೆ. ಈ ಬಗ್ಗೆ ವಿನಾ ಕಾರಣ ಅರ್ಥ ಕಲ್ಪಿಸುವುದು ಅನಗತ್ಯ ಎಂದು ಹೇಳಿದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.