Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ
ಹೆಬ್ಬಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟ ಉರಗತಜ್ಞ ದಿಲೀಪ್
Team Udayavani, Sep 30, 2024, 5:45 PM IST
ಕೊರಟಗೆರೆ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಬೃಹತ್ ಹೆಬ್ಬಾವೊಂದನ್ನು ಉರಗತಜ್ಞ ದಿಲೀಪ್ ಮತ್ತು ಅವರ ತಂಡ ಸುರಕ್ಷಿತವಾಗಿ ಹಾವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಕೊರಟಗೆರೆ ಪಟ್ಟಣದ ಹೊರವಲಯದ ಡಿಗ್ರಿ ಕಾಲೇಜ್ ಸಮೀಪದಲ್ಲಿರುವ ಮಂಜುನಾಥ್ ಎನ್ನುವವರ ಟೀ ಅಂಗಡಿ ಬಳಿ ಕಾಣಿಸಿಕೊಂಡ ಈ ಬೃಹತ್ ಹೆಬ್ಬಾವುವನ್ನು ಕಂಡು ಸಾರ್ವಜನಿಕರು ಗಾಬರಿಗೊಂಡಿದ್ದರು.
ಸ್ಥಳೀಯರು ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಉರಗತಜ್ಞರಿಗೆ ಕರೆ ಮಾಡಿ ತಿಳಿಸಿದ್ದರು, ಕೂಡಲೇ ಸ್ಥಳಕ್ಕೆ ಆಗಮಿಸಿದ ಉರಗತಜ್ಞ ದಿಲೀಪ್ ಹಾಗೂ ಅವರ ತಂಡ ಟೀ ಅಂಗಡಿ ಮುಂಭಾಗ ಕಲ್ಲುಗಳ ಅಡಿಯಲ್ಲಿ ಸೇರಿಕೊಂಡಿದ್ದ ಹೆಬ್ಬಾವನ್ನು ಹಿಡಿಯುವಲ್ಲಿ ಯಶಸ್ವಿಯಾದರು.
ಈ ಹೆಬ್ಬಾವು ಸುಮಾರು 12ಕೆ.ಜಿ ತೂಕ, 10 ಅಡಿ ಉದ್ದವಿದ್ದು 15ವರ್ಷದ ಬೃಹತ್ ಗಾತ್ರದ ಹೆಬ್ಬಾವು ಇದಾಗಿದೆ.
ಸೆರೆ ಹಿಡಿದ ಹೆಬ್ಬಾವನ್ನು ವಲಯ ಅರಣ್ಯಾಧಿಕಾರಿ ಸುರೇಶ್ ಮಾರ್ಗದರ್ಶನದಂತೆ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಸಾರ್ವಜನಿಕರಲ್ಲಿ ಮನವಿ
ಹಾವುಗಳು ಕಂಡಾಗ ಅವುಗಳನ್ನು ಕೊಲ್ಲಬೇಡಿ ಎಂದು ಸಾರ್ವಜನಿಕರಲ್ಲಿ ಉರಗ ತಜ್ಞ ದಿಲೀಪ್ ಮನವಿ ಮಾಡಿದರು.
ವನ್ಯಜೀವಿ ಉರಗ ಜಾಗೃತಿ ಸಂಸ್ಥೆಯ ದಿಲೀಪ್, ಗುರುಕಿರಣ್, ಹನುಮಯ್ಯ, ನವೀನ್ಕುಮಾರ್, ಡಿಆರ್ಎಫ್ಓ ಚಾಂದ್ಪಾಷ, ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ
Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು
Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ
Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.