ಬೈಪಾಸ್‌ ರಸ್ತೆ ಸುರಕ್ಷತೆಗಾಗಿ ರಸ್ತೆ ಪರಿಶೀಲನೆ


Team Udayavani, Mar 10, 2019, 7:47 AM IST

bypass.jpg

ಕೊರಟಗೆರೆ: ಕೊರಟಗೆರೆ ಬೈಪಾಸ್‌ ರಸ್ತೆ ಸುರಕ್ಷತೆ ಮತ್ತು ಅಪಘಾತ ತಡೆಗಟ್ಟುವ ಮುನ್ನಚ್ಚರಿಕೆ ನಾಮಫ‌ಲಕ ಹಾಗೂ ರಸ್ತೆ ಉಬ್ಬುಗಳ ಬಗ್ಗೆ ಕೆಶಿಪ್‌ ಮತ್ತು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೊರಟಗೆರೆ ಆರಕ್ಷಕ ವೃತ್ತ ನಿರೀಕ್ಷಕ ನದಾಫ್ ಕೆಶಿಪ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಹೊರವಲಯದ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯ ಬೈಪಾಸ್‌ ರಸ್ತೆಯ ಸುರಕ್ಷತೆ ಪೊಲೀಸ್‌ ಇಲಾಖೆ, ಪಿಡಬ್ಲ್ಯೂಡಿ ಮತ್ತು ಕೆಶಿಪ್‌ ಅಧಿಕಾರಿಗಳ ತಂಡ ಜಂಟಿಯಾಗಿ ಬೈಪಾಸ್‌ ರಸ್ತೆ ಪರಿಶೀಲಿಸಿದ ವೇಳೆ ಮಾತನಾಡಿದರು.

ವಾಹನ ಸವಾರರಿಗೆ ತೊಂದರೆ: ಬೈಪಾಸ್‌ ರಸ್ತೆಯ ಕಾಮಗಾರಿ ವಿಳಂಬದಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾಮಗಾರಿ ಅಪೂರ್ಣ ಆಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಕೆಶಿಪ್‌ ರಸ್ತೆಯ ಅಪಘಾತ ಸ್ಥಳಗಳನ್ನು ಮೂರು ಇಲಾಖೆಯ ಅಧಿಕಾರಿ ವರ್ಗ ಜಂಟಿಯಾಗಿ ಅಪಘಾತ ಸ್ಥಳಗಳನ್ನು ಗುರುತಿಸಿರುವ ವರದಿಯನ್ನು ಡಿಸಿಎಂ ಮತ್ತು ಜಿಲ್ಲಾಧಿಕಾರಿಗಳಿಗೆ ಪೊಲೀಸ್‌ ಇಲಾಖೆ ನೀಡಲಿದೆ ಎಂದು ಹೇಳಿದರು. 

ಮೇಲಧಿಕಾರಿಗಳಿಗೆ ಮಾಹಿತಿ: ಕೊರಟಗೆರೆ ಆರಕ್ಷಕ ಉಪನಿರೀಕ್ಷಕ ಮಂಜುನಾಥ ಮಾತನಾಡಿ, ಬೈಪಾಸ್‌ ರಸ್ತೆಯಲ್ಲಿ ರಸ್ತೆ ಸುರಕ್ಷತೆ ಇಲ್ಲದಿರುವ ಪರಿಣಾಮ ಈಗಾಗಲೇ ಸಾಕಷ್ಟು ಅಪಘಾತಗಳು ನಡೆದಿವೆ. ಪೊಲೀಸ್‌ ಇಲಾಖೆಯಿಂದ ಈಗಾಗಲೇ ಎರಡು ಬಾರಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರೂ ಪ್ರಯೋಜನವಾಗಿಲ್ಲ. ಇನ್ನೊಂದು ವಾರದಲ್ಲಿ ಬೈಪಾಸ್‌ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

ಇಲ್ಲದಿದ್ದರೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ ಅವರು, ಬೈಪಾಸ್‌ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ಹೈಮಾಸ್ಟ್‌ ದೀಪ, ರಸ್ತೆ ಉಬ್ಬುಗಳ ಕಾಮಗಾರಿ ವಿಳಂಬವಾಗಿದೆ. ಅಪಘಾತ ನಡೆಯುವ ಸ್ಥಳಗಳಲ್ಲಿ ಎಚ್ಚರಿಕೆ ನಾಮಫ‌ಲಕ ಮತ್ತು ರಸ್ತೆ ಲೈಟ್‌ಗಳ ವ್ಯವಸ್ಥೆ ಮಾಡಬೇಕು. ರಸ್ತೆ ಉಬ್ಬುಗಳ ಕಾಮಗಾರಿ ಪ್ರಾರಂಭವಾಗಿ ಹಲವು ದಿನಗಳಾದರೂ ಮುಕ್ತಾಯವಾಗಿಲ್ಲ. ರಸ್ತೆ ಸುರಕ್ಷಣೆ ಮತ್ತು ಅಪಘಾತ ತಡೆಯುವ ನಿಟ್ಟಿನಲ್ಲಿ ಕೆಶಿಪ್‌ ಅಧಿಕಾರಿಗಳ ತಂಡ ಪೊಲೀಸ್‌ ಇಲಾಖೆಗೆ ಸಲಹೆ ಪಾಲಿಸಿ ಅಪಘಾತ ತಡೆಯಲು ಸಹಕಾರ ನೀಡಬೇಕು ಎಂದು ಹೇಳಿದರು. 

ಕೊರಟಗೆರೆ ಪಟ್ಟಣದ ಬೈಪಾಸ್‌ ಮೂಲಕ ಹಾದುಹೋಗುವ ಥರಡಿ ಗ್ರಾಮ, ಜಂಪೇನಹಳ್ಳಿ ಕ್ರಾಸ್‌, ಡಿಗ್ರಿ ಕಾಲೇಜು, ಊರ್ಡಿಗೆರೆ ವೃತ್ತ, ಬೋಡಬಂಡೇನಹಳ್ಳಿ, ಮಲ್ಲೇಶಪುರ ಕ್ರಾಸ್‌, ಹೊಳವನಹಳ್ಳಿ ರಸ್ತೆ, ಸಿದ್ದೇಶ್ವರ ಕಲ್ಯಾಣ ಮಂಟಪ ಮತ್ತು ತುಂಬಾಡಿ ಕ್ರಾಸಿನಿಂದ ಸಿದ್ದರಬೆಟ್ಟಕ್ಕೆ ಹೋಗುವ ಮಾರ್ಗದ ಬಳಿ ಕೆಶಿಪ್‌ ಇಲಾಖೆ ರಾಜಣ್ಣ, ಪಿಡಬ್ಲ್ಯೂಡಿ ರಾಘವೇಂದ್ರ ಮತ್ತು ಪೊಲೀಸ್‌ ಇಲಾಖೆ ನದಾಫ್ ಮತ್ತು ಮಂಜುನಾಥ ಜಂಟಿಯಾಗಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.