ಶಾಲೆಗಳಿಗೆ ಬಂದಿಲ್ಲ ಆರ್ಟಿಇ ಹಣ
ಮೊದಲ ಕಂತಿನ ಹಣ ಮಾತ್ರ ಬಿಡುಗಡೆ | ಖಾಸಗಿ ಶಾಲೆಗಳ ಆಡಳಿತ ಮಂಡಳಿಗೆ ಸಂಕಷ್ಟ
Team Udayavani, Jun 3, 2019, 1:10 PM IST
ಹುಳಿಯಾರು: ಹೊಸ ಶೈಕ್ಷಣಿಕ ವರ್ಷ ಆರಂಭವಾದರೂ ಕಳೆದ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅನುದಾನ ಇನ್ನೂ ಖಾಸಗಿ ಶಾಲೆಗಳಿಗೆ ಬಾರದೆ ಆಡಳಿತ ಮಂಡಳಿ ಸಂಕಷ್ಟದಲ್ಲಿ ಶಾಲೆ ನಡೆಸುವಂತ್ತಾಗಿದೆ.
ಹೌದು, ಬಡ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಸರ್ಕಾರ ಜಾರಿಗೆ ತಂದ ಈ ಕಾಯ್ದೆಯಂತೆ ಪ್ರವೇಶ ಪಡೆದ ಮಕ್ಕಳ ವೆಚ್ಚವನ್ನು ಆಯಾ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಸರ್ಕಾರ ನೀಡಬೇಕಿದೆ. ಆದರೆ, ಶೈಕ್ಷಣಿಕ ವರ್ಷ ಆರಂಭವಾದರೂ ಇದುವರೆಗೆ ಸರ್ಕಾರ ಶಾಲೆಗಳಿಗೆ 2ನೇ ಹಂತದ ಅನುದಾನ ಬಿಡುಗಡೆ ಮಾಡದೆ ವಿಳಂಬ ಮಾಡಿದೆ.
2ನೇ ಕಂತಿನ ಹಣ ನೀಡಿಲ್ಲ: ಆರ್ಟಿಇ ಅಡಿ ಪ್ರವೇಶ ಪಡೆದ ರಾಜ್ಯದ ಎಲ್ಲ ಮಕ್ಕಳಿಗೂ ಪ್ರತಿ ವರ್ಷ ಸರ್ಕಾರ ಒಂದು ಮಗುವಿಗೆ ಆಯಾ ಶಾಲೆಗೆ ಶುಲ್ಕಕ್ಕೆ ಅನುಗುಣವಾಗಿ 8ರಿಂದ 16 ಸಾವಿರ ರೂ. ಬಿಡುಗಡೆ ಮಾಡಬೇಕು. ಆದರೆ, 2018- 19ನೇ ಸಾಲಿನಲ್ಲಿ ಮೊದಲ ಕಂತಿನ ಹಣವನ್ನು ಮಾತ್ರ ಬಿಡುಗಡೆ ಮಾಡಿದೆ. ಶೈಕ್ಷಣಿಕ ವರ್ಷ ಮುಗಿದು ಹೊಸ ವರ್ಷ ಆರಂಭವಾದರೂ ಎರಡನೇ ಕಂತಿನ ಹಣ ಮಾತ್ರ ನೀಡಿಲ್ಲ.
ಹಣ ಬಿಡುಗಡೆಗೆ ವಿಳಂಬ: ಆರ್ಟಿಇ ಹಣ ಬಿಡುಗಡೆಗೆ ವಿಳಂಬವಾಗಲು ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಕಡ್ಡಾಯ ಹಾಜರಾತಿ, ಆಡಿಟ್ ರಿಪೋರ್ಟ್ ಸೇರಿದಂತೆ ಇತರೆ ಮಾಹಿತಿಯನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡದೆ ಇರುವುದು ಕಾರಣವೆಂದು ಶಿಕ್ಷಣ ಇಲಾಖೆ ಹೇಳುತ್ತಿದೆ. ಆದರೆ, ಇದೆಲ್ಲವನ್ನೂ ಅಪ್ಲೋಡ್ ಮಾಡಿರುವ ಶಾಲೆಗಾದರೂ ಹಣ ಕೊಡಬಹುದಲ್ಲ ಎಂದು ಖಾಸಗಿ ಶಾಲೆಯವರು ಪ್ರತಿಪಾದಿಸುತ್ತಿದ್ದಾರೆ.
ಹಣ ಹೊಂದಿಸಲು ಪರದಾಟ: ಖಾಸಗಿ ಶಾಲೆಯ ದಾಖಲಾತಿಯ ಶೇ.25ರಷ್ಟು ಆರ್ಟಿಇ ಅಡಿ ಪ್ರವೇಶ ಕೊಡಬೇಕಿದೆ. ಅದರಂತೆ ಪ್ರವೇಶ ಕೊಟ್ಟ ಶಾಲೆಗಳಿಗೆ 2ನೇ ಕಂತಿನಲ್ಲಿ ಒಂದು ಲಕ್ಷದಿಂದ ಹತ್ತದಿನೈದು ಲಕ್ಷ ರೂ. ಬಾಕಿ ಬರಬೇಕಿದೆ. ಪರಿಣಾಮ ಶಿಕ್ಷಕರ ಸಂಬಳ, ವ್ಯಾನ್ ಮೈಟೆನಿಂಗ್ಸ್, ಕರೆಂಟ್, ಇಂಟರ್ನೆಟ್ ಬಿಲ್ ಹೀಗೆ ಅಗತ್ಯ ಶಾಲಾ ವೆಚ್ಚಕ್ಕೆ ಹಣ ಹೊಂದಿಸಲು ಆಡಳಿತ ಮಂಡಳಿ ಪರದಾಡುತ್ತಿದ್ದಾರೆ.
ಇನ್ನಾದರೂ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ನಿರ್ವಹಣೆಯ ಕಷ್ಟ ಅರಿತು ತಕ್ಷಣ ಆರ್ಟಿಇಯ ಎರಡನೇ ಕಂತಿನ ಹಣ ಬಿಡುಗಡೆ ಮಾಡಬೇಕಿದೆ. ಈ ಮೂಲಕ ಶಾಲೆಯಲ್ಲಿ ಆರ್ಟಿಇ ಮಕ್ಕಳ ಶೋಷಣೆ ತಪ್ಪಿಸಬೇಕಿದೆ. ಜೊತೆಗೆ 2019-20ನೇ ಸಾಲಿನ ಆರ್ಟಿಇ ಮೊದಲ ಕಂತಿನ ಹಣ ಬಿಡುಗಡೆಗೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ.
● ಎಚ್.ಬಿ.ಕಿರಣ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ
Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.