ತುಮಕೂರು ಜಿಲ್ಲೆಯಲ್ಲಿ ಪ್ರತ್ಯೇಕ 2 ಅಪಘಾತ 8 ಸಾವು


Team Udayavani, Jul 5, 2018, 3:09 PM IST

tmk.jpg

ತುಮಕೂರು: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 8 ಜನ ಮೃತಪಟ್ಟಿದ್ದು ಜಿಲ್ಲೆಯ ಪಾಲಿಗೆ ಬುಧವಾರ ಕರಾಳ ಬುಧವಾರವಾಗಿದ್ದು. ಗೆಳೆಯನ ಮದುವೆ ನಿಶ್ಚಿತಾರ್ಥಕ್ಕೆ ಸಂತಸದಿಂದ ಪಾವಗಡಕ್ಕೆ ಹೋಗಿ ಬೆಂಗಳೂರಿಗೆ ವಾಪಸಾಗುವಾಗ ಲಾರಿಗೆ ಕಾರು ಅಪ್ಪಳಿಸಿದ ಪರಿಣಾಮ ಸ್ಥಳದಲ್ಲಿಯೇ 5 ಜನ ಮೃತಪಟ್ಟಿದ್ದಾರೆ. ಮತ್ತೂಂದು ಪ್ರಕರಣದಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು 3 ಜನ ದುರ್ಮರಣ ಹೊಂದಿದ್ದು ಜಿಲ್ಲೆಯಲ್ಲಿ ಒಟ್ಟು 8 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಭೀಕರ ಅಪಘಾತದಲ್ಲಿ ಐದು ಸಾವು: ಕಾರು ಮತ್ತು ಸಿಮೆಂಟ್‌ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐದು ಜನರು ದಾರಣವಾಗಿ ಮೃತಪಟ್ಟಿರುವ ಘಟನೆ ಮಧುಗಿರಿ ಸಮೀಪದ ಕರೆಗಳ ಪಾಳ್ಯದಲ್ಲಿ ಬುಧವಾರ ಸಂಜೆ ನಡೆಸಿದೆ. 

ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಯಿಂದ ಪಾವಗಡದಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರೊಂದಿಗೆ ಬೆರೆತು ಸಂತಸ ಸಂಭ್ರಮ ಪಟ್ಟು ಸಂಜೆಯವರೆಗೂ ಗೆಳೆಯರು ಕುಟುಂಬಸ್ಥರೊಂದಗೆ ಇದ್ದು ನಂತರ ಪಾವಗಡದಿಂದ ಬೆಂಗಳೂರಿಗೆ ವಾಪಸಾಗುವಾಗ ಸಂಜೆ 5.30 ರ ಸಮಯದಲ್ಲಿ ಎದುರಿಗೆ ಬರುತ್ತಿದ್ದ ಸಿಮೆಂಟ್‌ ಲಾರಿಗೆ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ವಾಸಿಗಳಾದ ಮುರುಳಿ (20), ರಾಮ್‌ ಮೋಹನ್‌ (23), ಮಂಜುನಾಥ್‌ (24), ಶಿವಪ್ರಸಾದ್‌(25) ದಿನೇಶ್‌ (24) ಸ್ಥಳದಲ್ಲಿಯೇ ಮೃತಪಟ್ಟ ದುದೈವಿಗಳಾಗಿದ್ದಾರೆ.

ಹೆದ್ದಾರಿಯಲ್ಲಿ ಅಪಘಾತವಾಗಿ ಐದು ಜನ ಮೃತಪಟ್ಟಿರುವ ಸುದ್ದಿ ಹರಡಿ ಸುತ್ತ ಮುತ್ತಲ ಜನ ಸೇರಿ ನೋಡಿದರೆ ಐವರು ಮೃತಪಟ್ಟಿದ್ದರು ತಕ್ಷಣವೇ ಮಧುಗಿರಿ ಪೊಲೀಸ್‌ ಠಾಣೆಗೆ ನಾಗರೀಕರು ಸುದ್ದಿ ಮುಟ್ಟಿಸಿದ ತಕ್ಷಣ ಕೂಡಲೇ ಸ್ಥಳಕ್ಕೆ ಮಧಗಿರಿ ಪೊಲೀಸರು ಬಂದು ಪ್ರಕರಣ ದಾಖಲಿಸಿಕೊಂಡು
ಮುಂದಿನ ಕ್ರಮ ಕೈಗೊಂಡಿದ್ದಾರೆ.

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಮೂರು ಸಾವು: ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಮುಖಾ ಮುಖೀಯಾಗಿ ಅಪ್ಪಳಿಸಿದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗಿನ ಜಾವ ಜಿಲ್ಲೆಯ ಗುಬ್ಬಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರು ನಗರದ ವಾಸಿಗಳಾದ ಇರ್ಫಾನ್‌ (28), ಆಸ್ಕರ್‌ (26) ಹಾಗೂ ಸೈಯದ್‌ ಇರ್ಫಾನ್‌ (30) ಈ ಮೂವರು ತುಮಕೂರಿನಲ್ಲಿ ಮೆಕಾನಿಕ್‌ ಕೆಲಸ ಮಾಡುತ್ತಿದ್ದು ಕಳೆದ ರಾತ್ರಿ ಗುಬ್ಬಿ ಸಮೀಪದಲ್ಲಿ ಕಾರೊಂದು ಕೆಟ್ಟಿದೆ ಎಂದು ದೂರವಾಣಿ ಬಂದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಮೂವರು ಕಾರು ರಿಪೇರಿಗಾಗಿ ಹೋಗಿದ್ದರು ಎಂದು ತಿಳಿದು ಬಂದಿದೆ.

ಕಾರು ರಿಪೇರಿ ಮಾಡಿ ಪುನಃ ತುಮಕೂರು ಕಡೆ ಬರುವಾಗ ಗುಬ್ಬಿ ತಾಲೂಕಿನ ಬೆಣಚಿಗೆರೆ ಗೇಟ್‌ ಬಳಿ ಅತಿ ವೇಗವಾಗಿ ಎದುರಿಗೆ ಬಂದ ಕಾರು ಬೈಕ್‌ಗೆ ಮುಖಮುಖೀಯಾಗಿ ಅಪ್ಪಳಿಸಿದ್ದರಿಂದ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಗುಬ್ಬಿ ಪೊಲೀಸರು ಸ್ಥಳಕ್ಕೆಧಾವಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಪತ್ಯೇಕ ಎರಡು ಅಪಘಾತದಲ್ಲಿ 8 ಜನ ಮೃತಪಟ್ಟಿದ್ದಾರೆ ಈ ಸಾವಿಗೆ ಅತಿ ವೇಗ ಮತ್ತು ಅಜಾಗರುಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು. ಮೃತ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.