ಸಿದ್ಧರಾಮೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ಚಾಲನೆ


Team Udayavani, Jan 9, 2022, 12:57 PM IST

Untitled-1

ತುಮಕೂರು: ನಗರಕ್ಕೆ ಸಮೀಪದ ಬೆಳಗುಂಬ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ಸಿದ್ಧರಾಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಗೋಪುರ ನಿರ್ಮಾಣ ಕಾರ್ಯಕ್ಕೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್‌ ಚಾಲನೆ ನೀಡಿದರು.

ಕೆಲವು ಕಾರಣಗಳಿಂದ ಹಲವು ದಿನಗಳಿಂದ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ನೆನೆಗುದಿಗೆಬಿದ್ದಿತ್ತು. ಇದನ್ನು ಮನಗಂಡ ಶಾಸಕ ಗೌರಿಶಂಕರ್‌ಮುತುವರ್ಜಿ ವಹಿಸಿ ಅಧಿಕಾರಿಗಳು, ಗ್ರಾಮಸ್ಥರುಮತ್ತು ಭಕ್ತರೊಂದಿಗೆ ಚರ್ಚೆ ನಡೆಸಿ ದೇವಸ್ಥಾನನಿರ್ಮಾಣ ಕಾರ್ಯಕ್ಕೆ ಇದ್ದ ಅಡ್ಡಿ ಸರಿಪಡಿಸಿದ್ದಾರೆ.

ಈ ವೇಳೆ ಡಿ.ಸಿ.ಗೌರಿಶಂಕರ್‌ ಮಾತನಾಡಿ,  ದೇವಸ್ಥಾನದ ಕೆಲಸ ಶೀಘ್ರ ಆರಂಭಿಸಬೇಕು. ದೇವಸ್ಥಾನ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು.ದೇವಸ್ಥಾನಗಳು ಒಂದು ಊರಿಗೆಕಳಶಪ್ರಾಯವಿದ್ದಂತೆ, ಶಾಂತಿ, ನೆಮ್ಮದಿಯ ತಾಣವೇ ದೇವಸ್ಥಾನ. ಇಂಥ ದೇವಸ್ಥಾನವನ್ನು ಎಲ್ಲರೂ ಒಟ್ಟಾಗಿ ಸೇರಿ ನಿರ್ಮಿಸೋಣ ಎಂದರು.

25 ಲಕ್ಷ ರೂ. ಮಂಜೂರು: ದೇವಸ್ಥಾನ ನಿರ್ಮಾಣಕ್ಕೆ ಸರ್ಕಾರದಿಂದ 25 ಲಕ್ಷ ರೂ. ಮಂಜೂರು ಆಗಿದೆ. ಜತೆಗೆ ನಾನು ವೈಯಕ್ತಿಕವಾಗಿ 10 ಲಕ್ಷ ರೂ. ನೀಡುತ್ತೇನೆ. ನನ್ನ ಸ್ನೇಹಿತರು ಸಹದೇವಸ್ಥಾನದ ವಿಷಯದಲ್ಲಿ ಸಹಾಯ ಮಾಡುತ್ತಾರೆ. ಅದು ಕಡಿಮೆಯಾದರೆ ನಾನೇ ಎಲ್ಲ ವೆಚ್ಚ ಭರಿಸುತ್ತೇನೆ ಎಂದರು.

ಅಭಿವೃದ್ಧಿ ವಿಚಾರದಲ್ಲಿ ನಾನು ಯಾವತ್ತೂ ಹಿಂದೆ ಬೀಳಲ್ಲ, ಈಗಾಗಲೇ ಸಾಕಷ್ಟು ಕೆಲಸ ಮಾಡಿದ್ದೇನೆ. ದೇವಸ್ಥಾನದ ರಥಬೀದಿಯಲ್ಲಿ ಡಾಂಬರೀಕರಣಕ್ಕೆ 18 ಲಕ್ಷ ರೂ. ಅನುದಾನಬಿಡುಗಡೆಯಾಗಿದ್ದು, ಸಾರ್ವಜನಿಕರ ಒತ್ತಾಯದ ಮೇರೆಗೆ ಎರಡು ಬದಿಯಲ್ಲಿ ಚರಂಡಿ ನಿರ್ಮಾಣ ಮಾಡಿ ಡಾಂಬರೀಕರಣ ಬದಲಾಗಿ ಸಿಸಿ ರಸ್ತೆ ಮಾಡಿಸುವುದಾಗಿ ತಿಳಿಸಿದರು.

ಜಾತ್ರೆ ನಡೆಸಲು ಅನುಮತಿ ನೀಡಿ: ಮಕರ ಸಂಕ್ರಾಂತಿ ದಿನದಂದು ಪ್ರತಿವರ್ಷದಂತೆ ಈ ವರ್ಷವೂ ಜಾತ್ರೆ ನಡೆಸಲು ಅನುವು ಮಾಡಿಕೊಡಬೇಕೆಂದು ಗ್ರಾಮಸ್ಥರು ಕೇಳಿದರು.

ಇದಕ್ಕೆ ಉತ್ತರಿಸಿದ ಶಾಸಕರು, ಸರ್ಕಾರದ ಆದೇಶದಂತೆ ನಾವು ಕೂಡ ಅನುಮತಿಪಡೆದುಕೊಳ್ಳ ಬೇಕಾಗುತ್ತದೆ. ಕೊರೊನಾಮೂರನೇ ಅಲೆ ಹೆಚ್ಚಾಗುತ್ತಿರುವುದರಿಂದ ನಾವು ಎಚ್ಚರಿಕೆ ವಹಿಸಬೇಕಾಗುತ್ತದೆ. ನಾನು ಈವಿಷಯವಾಗಿ ಜಿಲ್ಲಾಧಿಕಾರಿ ಬಳಿ ಮಾತ ನಾಡುತ್ತೇನೆ ಎಂದರು. ಗ್ರಾಮದ ಮುಖಂಡಸಿದ್ದರಾಮೇಗೌಡ, ವಿಜಯ್‌ ಕುಮಾರ್‌, ರಾಮಕೃಷ್ಣಪ್ಪ, ಸಿದ್ದರಾಮಣ್ಣ, ಮಲ್ಲಿಕಾರ್ಜುನ,ಅರ್ಚಕರಾದ ಶಾಂತಣ್ಣ, ತಾಪಂ ಮಾಜಿ ಅಧ್ಯಕ್ಷ ಗಂಗಾಂಜನೇಯ, ಕರೆ ರಂಗಪ್ಪ, ಬಸವರಾಜು, ಗಂಗಾಧರ್‌, ಜೆಡಿಎಸ್‌ ಮುಖಂಡ ಬೆಳಗುಂಬ ವೆಂಕಟೇಶ್‌ ಹಾಗೂ ಇತರರು ಇದ್ದರು.

ಶಾಸಕರ ಕಾರ್ಯ ಶ್ಲಾಘನೀಯ: ವೆಂಕಟೇಶ್‌:

ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್‌ ಅಭಿವೃದ್ಧಿ ಕಾರ್ಯದಲ್ಲಿ ಸದಾ ಮುಂದಿರುತ್ತಾರೆ. ಸಾಮಾಜಿಕ ಕಾರ್ಯಗಳ ಜತೆ ಧಾರ್ಮಿಕ ಕಾರ್ಯದಲ್ಲೂ ಶಾಸಕರು ಒಂದು ಕೈ ಮೇಲು. ಕ್ಷೇತ್ರದಲ್ಲಿ ಶಾಲೆಗಳಿಂದ ಹಿಡಿದು ದೇವಸ್ಥಾನಗಳ ಜೀರ್ಣೋ ದ್ಧಾರಕ್ಕಾಗಿ ತಮ್ಮದೇ ಕೊಡುಗೆ ನೀಡುತ್ತಾ ಬಂದಿದ್ದಾರೆ. ನಮ್ಮ ಬೆಳಗುಂಬ ಗ್ರಾಮದ ಶ್ರೀ ಗುರು ಸಿದ್ಧರಾಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಕೆಲ ಕಾರಣಗಳಿಂದ

ಸ್ಥಗಿತಗೊಂಡಿತ್ತು. ಈ ಬಗ್ಗೆ ಮಾಹಿತಿ ಪಡೆದು ಗ್ರಾಮದಲ್ಲಿ ಎಲ್ಲ ಹಿರಿಯರು, ಮುಖಂಡರನ್ನು ಪಕ್ಷಾತೀತವಾಗಿ ಒಂದೆಡೆ ಸೇರಿಸಿ ಸಭೆ ನಡೆಸಿ ದೇವಸ್ಥಾನ ಅಭಿವೃದ್ಧಿ ಕಾರ್ಯ ನಡೆಯುವಂತೆ ಮಾಡಿದ್ದಾರೆ. ಶಾಸಕರ ಇಚ್ಛಾಶಕ್ತಿ ಮತ್ತು ಅಭಿವೃದ್ಧಿ ಬಗ್ಗೆ ಅವರಿಗೆ ಇರುವ ಕಾಳಜಿಗೆ ನಮ್ಮ ಗ್ರಾಮಸ್ಥರ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದು ಜೆಡಿಎಸ್‌ ಮುಖಂಡ ಬೆಳಗುಂಬ ವೆಂಕಟೇಶ್‌ ಹೇಳಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇರಾಜಕಾರಣ ಮಾಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಪಕ್ಷಭೇದ ಮರೆತುಎಲ್ಲರೂ ಸಹಕರಿಸಬೇಕು. ರಾಜಕಾರಣಬಂದಾಗ ರಾಜಕಾರಣ ಮಾಡೋಣ. ಅಭಿವೃದ್ಧಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ. -ಡಿ.ಸಿ. ಗೌರಿಶಂಕರ್‌, ಗ್ರಾಮಾಂತರ ಶಾಸಕ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.