ಸುಧಾಕರಲಾಲ್ ಸಚಿವ ಆಗೋದು ಖಚಿತ : JDS ಬೃಹತ್ ಸಮಾವೇಶ

ಮತ ಹಾಕಿದ್ರೆ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ...

Team Udayavani, Apr 10, 2023, 8:14 PM IST

1-erqrq

ಕೊರಟಗೆರೆ: ”ಪರಮೇಶ್ವರ್‌ಗೆ ತನ್ನ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳೋಕೆ ಅಧಿಕಾರ ಬೇಕಿದೆ. ಸ್ನೇಹಜೀವಿ ಸುಧಾಕರಲಾಲ್‌ಗೆ ಜನಸೇವೆ ಮಾಡಲು ಅಧಿಕಾರ ಬೇಕಿದೆ. ಕೊರಟಗೆರೆ ಜನರೇ ಕಾಂಗ್ರೆಸ್-ಬಿಜೆಪಿಗೆ ಮತ ಹಾಕಿದರೆ ನಿಮ್ಮ ಕೆಲಸಕ್ಕೆ ಬೆಂಗಳೂರು ಮತ್ತು ತುಮಕೂರು ನಗರಕ್ಕೆ ಹೋಗ್ಬೇಕು. ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ರೆ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೆ ” ಎಂದು ಹಿಂದುಳಿದ ವರ್ಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಡಿಮಡು ರಂಗಶಾಮಯ್ಯ ತಿಳಿಸಿದರು.

ಕೊರಟಗೆರೆ ಪಟ್ಟಣದ ಜಾಮೀಯಾ ಸಮುದಾಯ ಭವನದ ಆವರಣದಲ್ಲಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳ ಜೆಡಿಎಸ್ ರಾಜ್ಯಾಧ್ಯಕ್ಷ ಜಯರಾಂ ಮಾತನಾಡಿ ಹಿಂದುಳಿದ ವರ್ಗದ ಪರವಾಗಿ ಹೋರಾಟ ಮಾಡುವ ನಾಯಕ ನಮ್ಮ ದೇವೇಗೌಡರು ಮಾತ್ರ. ಪಂಚರತ್ನ ಯೋಜನೆಯು ಮಾಜಿ ಸಿಎಂ ಕುಮಾರಸ್ವಾಮಿಯ ಕರ್ನಾಟಕ ಸಮಗ್ರ ಅಭಿವೃದ್ದಿಯ ಕನಸು. ಕೊರಟಗೆರೆ ಕ್ಷೇತ್ರದ ಲಾಲ್ ೨೫ ವರ್ಷದ ಜನಸೇವೆಯೇ ಅವರ ಗೆಲುವಿಗೆ ಆಧಾರಸ್ತಂಭ. ಆರೋಗ್ಯ ಸೇವೆ ಪಡೆದಿರುವ 35 ಸಾವಿರ ಜನರೇ ಲಾಲ್‌ರನ್ನು ಮತ್ತೆ ಶಾಸಕರನ್ನಾಗಿ ಮಾಡ್ತಾರೇ. ಕುಮಾರಸ್ವಾಮಿ ಸಿಎಂ ಮತ್ತು ಸುಧಾಕರಲಾಲ್ ಸಚಿವ ಆಗೋದು ಖಚಿತ ಎಂದರು.

ಹಿಂದುಳಿದ ವರ್ಗದ ರಾಜ್ಯ ಕಾರ್ಯಧ್ಯಕ್ಷ ಮಹಾಲಿಂಗಪ್ಪ.ಹೆಚ್.ಕೆ ಮಾತನಾಡಿ ಕೊರಟಗೆರೆ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. 2023ಕ್ಕೆ ಕೊರಟಗೆರೆ ಕ್ಷೇತ್ರದಿಂದ ಸುಧಾಕರಲಾಲ್ ಶಾಸಕ ಆಗೋದು ಖಚಿತ. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಿದ್ದು ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ದೇವೇಗೌಡ.ಕಾಂಗ್ರೆಸ್ ಪಕ್ಷ ಜಾತಿ, ನೀತಿ ಮತ್ತು ಓಣಿಯನ್ನೇ ವಿಂಗಡಣೆ ಮಾಡಿ ರಾಜಕೀಯ ಮಾಡುತ್ತಿದೆ. ಕೊರಟಗೆರೆ ಕ್ಷೇತ್ರದ ಮತದಾರರು ಮನೆಯ ಮಗನಿಗೆ ಮತ ನೀಡಬೇಕಿದೆ ಎಂದು ಮನವಿ ಮಾಡಿದರು.

ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಮಾತನಾಡಿ, ಹಿಂದುಳಿದ ಸಮಾಜಕ್ಕೆ ರಾಜಕೀಯ ಮೀಸಲಾತಿ ನೀಡಿದ್ದು ದೇವೇಗೌಡರು. ಧ್ವನಿ ಇಲ್ಲದ ಸಮಾಜಕ್ಕೆ ಶಕ್ತಿಯಾಗಿ ಆಸರೇ ನೀಡಿದವರು ನಮ್ಮ ಕುಮಾರಸ್ವಾಮಿ. ನನಗೇ ಅಧಿಕಾರ ಬೇಕಿರೋದು ಕುಮಾರಸ್ವಾಮಿ ಸಿಎಂ ಮಾಡಲು ಮತ್ತು ಕೊರಟಗೆರೆ ಕ್ಷೇತ್ರದ ಜನರ ಸೇವೆಗಾಗಿ ಮಾತ್ರ. ನನ್ನ ಬಳಿ ಹಣವಿಲ್ಲ ಅಂತಾರೇ ಆದರೇ ಜನರೇ ನನಗೇ ಹಣ ನೀಡಿ ಆರ್ಶಿವಾದ ಮಾಡಿದ್ದಾರೇ. ಜನರ ಋಣವನ್ನು ತೀರಿಸಲು ನನಗೇ ನಿಮ್ಮೇಲ್ಲರ ಸಹಕಾರ ಬೇಕಿದೆ ಎಂದು ಮನವಿ ಮಾಡಿದರು.

ಕೊರಟಗೆರೆ ಕ್ಷೇತ್ರದಲ್ಲಿ 25 ವರ್ಷ ಸೋತ್ರು-ಗೆದ್ರು ಜನರ ಜೊತೆಗಿದ್ದು ಜನಸೇವೆ ಮಾಡಿದ್ದೀನಿ. ಮುಂದಿನ 30 ದಿನ ಮಾತ್ರ ನೀವು ನನ್ನ ಜೊತೆ ಇರಿ, ನಾನು 5 ವರ್ಷ ಮನೆ ಮಗನಾಗಿ ನಿಮ್ಮ ಸೇವೆ ಮಾಡ್ತೀನಿ.2023 ರ ವಿಧಾನಸಭಾ ಚುನಾವಣೆಗೆ ನಾನು ಎ.15 ರ 10 ಗಂಟೆಗೆ ನಾಮಪತ್ರ ಸಲ್ಲಿಸ್ತೀನಿ. ತಾವೆಲ್ಲರೂ ಆಗಮಿಸಿ ನನಗೆ ಬೆಂಬಲ ಮತ್ತು ಸಹಕಾರ ನೀಡಬೇಕಿದೆ ಎಂದರು.

400 ಕಾರ್ಯಕರ್ತರ ಸೇರ್ಪಡೆ..

ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಮಾಜಿ ತಾಪಂ ಸದಸ್ಯರಾದ ಸುಮರಾಜು, ಹನುಮಂತರಾಯಪ್ಪ, ಅಶ್ವತ್ಥನಾರಾಯಣ, ಮಾಜಿ ಗ್ರಾಪಂ ಅಧ್ಯಕ್ಷ ಮಂಜುನಾಥ, ಹಾಲಿ ಗ್ರಾಪಂ ಸದಸ್ಯರು, ಮಾಜಿ ಸದಸ್ಯರು ಸೇರಿದಂತೆ 400ಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರೇ ಹಿಂದುಳಿದ ವರ್ಗದ ಎಷ್ಟು ಜನರಿಗೆ ಟಿಕೆಟ್ ನೀಡಿದ್ದಿರಿ. ನಮ್ಮ ಜೆಡಿಎಸ್ ಪಕ್ಷ ಬಲಿಜ ಮತ್ತು ಕುರುಬ ಸಮಾಜಕ್ಕೆ ನೀಡಿದೆ. ಕುರುಬ ಸಮಾಜ ಪರಮೇಶ್ವರ್‌ಗೆ ಮತ ಹಾಕ್ತಾರೆ ಎಂಬ ನಂಬಿಕೆಯೇ ಸುಳ್ಳು. ಕೊರಟಗೆರೆ ಕ್ಷೇತ್ರದ ಮನೆಯ ಮಗನಾಗಿ ದುಡಿಯುವ ಸುಧಾಕರಲಾಲ್‌ಗೆ ಕುರುಬ ಸಮಾಜದ ಶೇ.75 ರಷ್ಟು ಜನ ಬೆಂಬಲ ನೀಡ್ತಾರೆ.
ಆರ್.ಸಿ.ಅಂಜಿನಪ್ಪ. ಜೆಡಿಎಸ್ ಜಿಲ್ಲಾಧ್ಯಕ್ಷ, ತುಮಕೂರು

ಸಮಾವೇಶದಲ್ಲಿ ಹಿಂದುಳಿದ ವರ್ಗದ ರಾಜ್ಯ ಕಾರ್ಯಾಧ್ಯಕ್ಷ ಪಾತಯ್ಯ, ಜೆಡಿಎಸ್ ಮಹಿಳಾ ಜಿಲ್ಲಾಧ್ಯಕ್ಷೆ ಕುಸುಮಾ, ಕೊರಟಗೆರೆ ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹರಾಜು, ಉಪಾಧ್ಯಕ್ಷ ಕಾಮರಾಜು, ವಕ್ತಾರ ಲಕ್ಷ್ಮಣ್, ಕಾರ್ಯದರ್ಶಿ ಲಕ್ಷ್ಮಣ್, ಹಿಂದುಳಿದ ವರ್ಗದ ಅಧ್ಯಕ್ಷ ಸೋಮಶೇಖರ್, ಮುಖಂಡರಾದ ಮಂಜುನಾಥ, ವೀರಕ್ಯಾತರಾಯ, ಹನುಮಂತರಾಜು, ಪ್ರಕಾಶ್, ಸತೀಶ್, ದೀಪೋ, ಶ್ರೀನಿವಾಸ್, ದೇವರಾಜು, ಸಾಕರಾಜು, ನಾಗೇಂದ್ರ, ನಟರಾಜು, ಪ್ರಕಾಶ್, ರಮೇಶ್, ಕೌಶಿಕ್, ಅಮರ, ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.