ಕುಡಿವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ

ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿ

Team Udayavani, May 7, 2020, 4:58 PM IST

ಕುಡಿವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ

ಸಾಂದರ್ಭಿಕ ಚಿತ್ರ

ತುಮಕೂರು: ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ದುರಸ್ತಿಯಲ್ಲಿರುವ ಶುದ್ಧ ಕುಡಿವ ನೀರಿನ ಘಟಕಗಳನ್ನು ಕೂಡಲೇ ಸರಿ ಪಡಿಸುವಂತೆ ಜಿಪಂ ಅಧ್ಯಕ್ಷೆ ಲತಾ ಎಂ.ರವಿ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮೀಣ ಕುಡಿವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿ, ಖಾಸಗಿ ಬೋರ್‌ ವೆಲ್‌ಗ‌ಳಿಂದ ನೀರು ಪೂರೈಸಲು ಅವಕಾಶ ಕಲ್ಪಿಸಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಸಿಇಒ ಶುಭಾ ಕಲ್ಯಾಣ್‌ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ದುರಸ್ತಿಯಲ್ಲಿರುವ ಆರ್‌ಒ ಪ್ಲಾಂಟ್‌ಗಳನ್ನು ಪಟ್ಟಿ ಮಾಡಿ, ದುರಸ್ತಿಯಾಗಿ ರುವ ಘಟಕದಲ್ಲಿ ದುರಸ್ತಿಯಲ್ಲಿದೆ ಎಂದು
ಬೋರ್ಡ್‌ ಹಾಕಬೇಕು. ಅಲ್ಲದೇ ಗ್ರಾಪಂ ವ್ಯಾಪ್ತಿಯಲ್ಲಿ ಶುದ್ಧ ನೀರಿನ ಘಟಕಗಳಲ್ಲಿ ಕಾರ್ಯನಿರ್ವಹಿಸುವ ವಾಟರ್‌ ಮ್ಯಾನ್‌ಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಘಟಕ ನಿರ್ವಹಿಸುವ ಬಗ್ಗೆ, ಸಣ್ಣ ಪುಟ್ಟ ರಿಪೇರಿ ಬಗ್ಗೆ ತರಬೇತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ವೈರಸ್‌ ನಿಯಂತ್ರಣದ ಬಗ್ಗೆ ಅಧ್ಯಕ್ಷರು ಮಾಹಿತಿ ಕೇಳಿದಾಗ, ಇದಕ್ಕೆ ಉತ್ತರಿಸಿದ ಡಿಎಚ್‌ಒ ಡಾ.ಬಿ.ಆರ್‌. ಚಂದ್ರಿಕಾಜಿಲ್ಲೆಯಲ್ಲಿ ಈವರೆಗೂ 1,769
ಮಂದಿಯನ್ನು ಕ್ವಾರೆಂಟೈನ್‌ ಮಾಡಲಾಗಿದ್ದು, 633 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರಲ್ಲಿ 560 ಜನರು ಡಿಸ್ಚಾರ್ಜ್‌ ಆಗಿದ್ದಾರೆ. 3,315 ಜನರ ಗಂಟಲುಸ್ರಾವ ಮಾದರಿ ಸಂಗ್ರಹಿಸಿ ತಪಾಸಣೆಗೊಳ ಪಡಿಸಿದ್ದು, ಅದರಲ್ಲಿ 2701 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ. 474 ತಪಾಸಣೆಯ ವರದಿ ನಿರೀಕ್ಷಿಸಲಾಗಿದ್ದು, ಈವರೆಗೂ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖ ಹಾಗೂ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಂದ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಿಇಒ ಶುಭಾ ಕಲ್ಯಾಣ್‌ ಮಾತನಾಡಿ, ಐಸಿಆರ್‌ಎಂ ನಿರ್ದೇಶನದ ಮೇರೆಗೆ ತಾಲೂಕುವಾರು ಗರ್ಭಿಣಿಯರನ್ನು ಪರೀಕ್ಷೆಗೊಳಪಡಿಸಬೇಕು. ಅಲ್ಲದೇ ಸ್ಥಳೀಯ, ಹೊರ ರಾಜ್ಯ
ಅಥವಾ ಹಾಟ್‌ಸ್ಪಾಟ್‌ ಪ್ರದೇಶಗಳಿಂದ ಬಂದವರು ಸರ್ಕಾರಿ ಅಥವಾ ಖಾಸಗಿ ವೈದ್ಯರ ಬಳಿ ಬಂದಾಗ ಸ್ಕೋರ್‌ ಶೀಟ್‌ನಲ್ಲಿ ಕೇಳಲಾಗಿರುವ ಪ್ರಶ್ನೆಗಳನ್ನು ಭರ್ತಿ ಮಾಡಬೇಕು. ಅದರಲ್ಲಿ
6ಕ್ಕಿಂತ ಹೆಚ್ಚಿನ ಸ್ಕೋರ್‌ ಬಂದರೆ ಅಂತಹವರ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸುವಂತೆ ಸರ್ಕಾರಿ ಮತ್ತು ಖಾಸಗಿ ವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದು ಅಧ್ಯಕ್ಷರ ಗಮನಕ್ಕೆ ತಂದರು.

ಜಿಪಂ ಉಪಾಧ್ಯಕ್ಷೆ ಶಾರದಾ ಮಾತನಾಡಿ, ಜಿಲ್ಲೆಯಲ್ಲಿರುವ ಅಂಗನವಾಡಿಗೆ ಬರುತ್ತಿದ್ದು, ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಊಟದ ವ್ಯವಸ್ಥೆ ಮಾಡಿರುವ ಬಗ್ಗೆ ಮಾಹಿತಿ ಕೇಳಿದಾಗ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್‌.ನಟರಾಜ್‌ ಅವರು, ಲಾಕ್‌ಡೌನ್‌ ಆದಾಗಿನಿಂದ ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಒಂದು ತಿಂಗಳ ಆಹಾರ ಧಾನ್ಯವನ್ನು ನೀಡುತ್ತಿದ್ದೇವೆ ಎಂದರು.

ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಪಿಡಿಒಗಳ ಸಭೆ ಕರೆದು, ಗ್ರಾಮಗಳಲ್ಲಿನ ಜನರು ಶೌಚಾಲಯವನ್ನು ಬಳಸುವಂತೆ ಸೂಚಿಸಿ, ಯಾರು
ಹೊರಗಡೆ ಹೋಗದಂತೆ ತಿಳಿಸಬೇಕು. ಎಂದು ಉಪಾಧ್ಯಕ್ಷರು ಸೂಚನೆ ನೀಡಿದರು. ಜಿಪಂ ಉಪಕಾರ್ಯದರ್ಶಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

1-pavagada

Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.