Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

ಶೌಚಾಲಯ ಅವ್ಯವಸ್ಥೆ ಕಂಡು ಸಿಬ್ಬಂದಿಗಳಿಗೆ ಹಿಗ್ಗಾಮುಗ್ಗಾ ತರಾಟೆ

Team Udayavani, Jun 24, 2024, 9:24 PM IST

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

ಕುಣಿಗಲ್ : ತಾಲೂಕಿನ ಹಿಂದುಳಿದ ವರ್ಗಗಳ ಮತ್ತು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಿದ್ಯಾರ್ಥಿನಿಲಯಗಳಿಗೆ ದಿಢೀರ್ ಭೇಟಿ ನೀಡಿದ ತಹಶೀಲ್ದಾರ್ ಎಸ್.ವಿಶ್ವನಾಥ್ ಅಲ್ಲಿನ ಶೌಚಾಲಯದ ಅವ್ಯವಸ್ಥೆ ಕಂಡು ಇಲಾಖೆಯ ಸಿಬ್ಬಂದಿಗಳನ್ನು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಪ್ರಸಂಗ ಹುಲಿಯೂರು ದುರ್ಗದಲ್ಲಿ ನಡೆಯಿತು.

ತಾಲೂಕಿನ ಹುಲಿಯೂರುದುರ್ಗದಲ್ಲಿ ಬಿಸಿಎಂ ಹಾಸ್ಟೆಲ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಸುಚಿತ್ವ, ಕುಡಿಯುವ ನೀರು,ಅಡುಗೆ ಕೋಣೆ, ವಿದ್ಯಾರ್ಥಿಗಳು ಮಲಗುವ ಕೊಠಡಿ, ಸ್ನಾನದ ಗೃಹ, ಶೌಚಾಲಯವನ್ನು ಪರಿಶೀಲಿಸಿದರು.

ಬಿಸಿಎಂ ಹಾಸ್ಟೆಲ್‌ನ ಶೌಚಾಲಯ ಸ್ವಚ್ಛತೆ ಇಲ್ಲದೆ ಗಬ್ಬೆದು ನಾರುತ್ತಿತ್ತು. ಇದನ್ನು ಕಂಡ ಎಸ್.ವಿಶ್ವನಾಥ್ ಅಡುಗೆ ಸಿಬ್ಬಂದಿಗಳ ವಿರುದ್ದ ಕೆಂಡಾಮಂಡಲರಾದರು, ನಿಮ್ಮ ಮನೆಯ ಶೌಚಾಲಯವನ್ನು ಇದೇ ರೀತಿ ಇಟ್ಟುಕೊಳ್ಳುತ್ತೀರಾ.. ಸರ್ಕಾರ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗಾಗಿ ಉಚಿತ ವಸತಿ, ಊಟ, ಪಠ್ಯ ಪುಸ್ತಕ, ಸಮವಸ್ತ್ರ ಮೊದಲಾದ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆದರೆ ಹಾಸ್ಟೆಲ್‌ಗಳನ್ನು ಸುಚಿತ್ವವಾಗಿ ಇಟ್ಟುಕೊಳ್ಳದೇ ಈ ರೀತಿ ಇಟ್ಟುಕೊಂಡಿದ್ದೀರ ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಟಪರಿಣಾಮ ಭೀರುವುದಿಲ್ಲವೇ ಎಂದು ಕಿಡಿಕಾರಿದರು.

ವಿದ್ಯಾರ್ಥಿಗಳಿಗೆ ಪಾಠ ಮಾಡಿದ ತಹಶೀಲ್ದಾರ್ : ಹಾಸ್ಟೆಲ್‌ಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಎಸ್.ವಿಶ್ವನಾಥ್ ವಿದ್ಯಾರ್ಥಿಗಳನ್ನು ಪರಿಚಯಿಸಿಕೊಂಡರು, ವಿದ್ಯಾಭ್ಯಾಸದ ಬಗ್ಗೆ ವಿಚಾರ ಮಾಡಿದರು. ಪಠ್ಯ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದರು. ಬಳಿಕ ಹಲವು ವಿಷಯಕ್ಕೆ ಸಂಬಂಧಿಸಿದಂತೆ ಬೋಧನೆ ಮಾಡಿದರು. ಹಳ್ಳಿಗಾಡಿನ ಮಕ್ಕಳು ದಡ್ಡರಲ್ಲ, ಕಷ್ಟಪಟ್ಟು ಓದಿದರೇ ಸಾಧನೆ ಮಾಡಬಹುದು. ಇದಕ್ಕಾಗಿ ಶ್ರದ್ದೆಯಿಂದ ಪಾಠ ಪ್ರವಚನ ಶಿಕ್ಷಕರಿಂದ ಪಡೆದು ಉನ್ನತ ಶಿಕ್ಷಣ ಪಡೆಯಬೇಕು. ಪ್ರತಿಯೊಬ್ಬ ವಿದ್ಯಾರ್ಥಿ ಶಿಸ್ತು ಮೈಗೂಡಿಸಿಕೊಳ್ಳಬೇಕು. ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್‌ನಲ್ಲಿ ವಾರ್ಡ್ ಇಲ್ಲವೇ ಎಂದು ಇಲ್ಲಿನ ಅಡಿಗೆಯವರಾದ ಭಾನುಪ್ರಕಾಶ್ ಅವರನ್ನು ತಹಶೀಲ್ದಾರ್ ಪ್ರಶ್ನಿಸಿದರು, ವಾರ್ಡ್ ಇಲ್ಲ ಸಾರ್ ನಾನೇ ವಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದು ತಿಳಿಸಿದರು.ಅಲ್ಲ ರೀ ಗುಮಾಸ್ತ ಒಬ್ಬ ತಹಶೀಲ್ದಾರ್ ಆಗಲು ಸಾಧ್ಯವೇ ಎಂದು ತಹಶೀಲ್ದಾರ್ ಅಡುಗೆಯವರು ವಾರ್ಡ್ ಆಗಿ ಕೆಲಸ ಮಾಡಲು ಆಗುತ್ತದ್ದ ಎಂದರು. ಈ ಸಂಬಂಧ ಜಿಲ್ಲಾಧಿಕಾರಿಗೆ ಪತ್ರ ಬರೆಯುವುದ್ದಾಗಿ ತಿಳಿಸಿದರು.

ರಾತ್ರಿ ಕಾವಲುಗಾರನಿಗೆ ಛೀಮಾರಿ : ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗೆ ತಹಶೀಲ್ದಾರ್ ಭೇಟಿ ನೀಡಿದ್ದ ವೇಳೆ ಇಲ್ಲಿನ ರಾತ್ರಿ ಕಾವಲುಗಾರ ಲೋಕೇಶ್ ಎಂಬುವರು, ಶರ್ಟ್ ಹಾಕಿಕೊಳ್ಳದೇ ಬನಿಯನ್ ಹಾಕಿಕೊಂಡು ತಿರುಗಾಡುತ್ತಿದ್ದರು. ಇದರಿಂದ ಸಿಡಿಮಿಡಿಗೊಂಡ ತಹಶೀಲ್ದಾರ್ ಎಸ್.ವಿಶ್ವನಾಥ್ ಇಲ್ಲಿ ಏನು ಕೆಲಸ ಮಾಡುತ್ತಿದ್ದೀಯ ಎಂದು ಲೋಕೇಶನನ್ನು ಪ್ರಶ್ನಿಸಿದರು. ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಉತ್ತರಿಸಿದರು. ವಿದ್ಯಾರ್ಥಿಗಳ ಮುಂದೆ ಬನಿಯನ್ ಹಾಕಿಕೊಂಡು ಓಡಾಡಲು ನಿನ್ನಗೇನು ಅನಿಸುವುದಿಲ್ಲವೇ ಎಂದು ಲೋಕೇಶ್‌ಗೆ ಛೀಮಾರಿ ಹಾಕಿದರು.

ಕೆಲ ಊರುಗಳಲ್ಲಿ ಈಗಾಗಲೇ ಡೆಂಗ್ಯೂ ಕಾಯಿಲೆ ಕಾಣಿಸಿಕೊಂಡು ಆನೇಕ ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಹಾಸ್ಟೆಲ್‌ಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಮಕ್ಕಳಿಗೆ ಗುಣಮಟ್ಟದ ಊಟ ಶುದ್ದ ಕುಡಿಯುವ ನೀರು ನೀಡಬೇಕೆಂದು ಸಿಬ್ಬಂದಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

7-kunigal

Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ

ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

11-koratagere

Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ

10-koratagere

Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.