Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು

ತುಮಕೂರು ಬಂದ್‌ಗೆ ಕೊರಟಗೆರೆ ನೀರಾವರಿ ಹೋರಾಟ ಸಮಿತಿ, ಕನ್ನಡಪರ ಸಂಘನೆಗಳ ಬೆಂಬಲ, ಯಶಸ್ವಿ ಕಂಡ ಪ್ರತಿಭಟನೆ

Team Udayavani, Jun 25, 2024, 7:47 PM IST

10-koratagere

ಕೊರಟಗೆರೆ: ಹೇಮಾವತಿ ನೀರು ಜಿಲ್ಲೆಯ ರೈತರಿಗೆ ಅತ್ಯವಶ್ಯಕವಾಗಿದೆ. ರೈತರಿದ್ದರೆ ದೇಶ ಮತ್ತು ನಾಡು. ಹಾಗಾಗಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಮುಖಾಂತರ ಇನ್ನೂ ಮುಂದೆ ರಾಮನಗರಕ್ಕೆ ಒಂದು ಹನಿಯು ಸಹ ಬಿಡುವುದಿಲ್ಲ. ಇಂದೇ ಈ ಕಾಮಗಾರಿಯ ಕನಸು ಕೈ ಬಿಡದಿದ್ದರೆ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಪಿಆರ್ ಸುಧಾಕರ್‌ಲಾಲ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ನಡೆಯುತ್ತಿರುವ ಹೇಮಾವತಿ ಲಿಂಕ್ ಕಾಮಗಾರಿ ವಿರೋಧಿಸಿ ಬಂದ್‌ಗೆ ರೈತ ಸಂಘಟನೆಗಳು, ಹೋರಾಟ ಸಮಿತಿ, ವಿವಿಧ ಕನ್ನಡಪರ ಸಂಘಟನೆಗಳು ತುಮಕೂರು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಮಂಗಳವಾರ ಕೊರಟಗೆರೆಯಲ್ಲೂ ಸಹ ಬಂದ್‌ಗೆ ಕರೆ ನೀಡಿ ಪಟ್ಟಣದ  ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಿಂದ ತಾಲೂಕು ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿದರು.

ಬಿಜೆಪಿ ಮಾಜಿ ಅಧ್ಯಕ್ಷ ಪವನ್‌ಕುಮಾರ್ ಮಾತನಾಡಿ, ರೈತರ ವಿರೋಧಿಯಾಗಿ ರಾಜ್ಯ ಸರ್ಕಾರ ನಡೆಯುತ್ತಿದೆ. ಹೇಮಾವತಿ ಎಕ್ಸೆಪ್ರೆಸ್ ಚಾನಲ್ ಮುಖಾಂತರ ಇಲ್ಲಿನ ಹೇಮಾವತಿ ನೀರನ್ನು ರಾಮನಗರ, ಮಾಗಡಿಗೆ ಹರಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಯೋಜನೆ ರೂಪಿಸಿಕೊಂಡಿದ್ದಾರೆ. ಅದರಿಂದ ಇದನ್ನು ಖಂಡಿಸಿ ತುಮಕೂರು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ನೀರಾವರಿ ವಿಚಾರಕ್ಕೆ ಮತ್ತೊಂದು ರಾಜ್ಯದ ಮೇಲೆ ಹೋರಾಟ ನಡೆಸಬೇಕಿತ್ತು. ಈಗ ರಾಜ್ಯದಲ್ಲಿಯೇ ನೀರಿಗಾಗಿ ಮತ್ತೊಂದು ಜಿಲ್ಲೆಯ ಜೊತೆ ಕಿತ್ತಾಡುವಂತೆ ಮಾಡಿದೆ ಈ ಸರ್ಕಾರ ಎಂದು ಆರೋಪ ಮಾಡಿದರು.

ಬಿಜೆಪಿ ಅಧ್ಯಕ್ಷ ದರ್ಶನ್ ಮಾತನಾಡಿ, ಹೇಮಾವತಿ ನೀರು ಈವರೆಗೂ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಹಂಚಿಕೆಯಾಗಿಲ್ಲ. ಹೇಮಾವತಿ ತುಮಕೂರು ಜಿಲ್ಲೆಗೆ 24 ಟಿಎಂಸಿ ಮಾತ್ರ ಬಂದಿದೆ. ಇದರಲ್ಲಿ 7 ಟಿಎಂಸಿ ನೀರನ್ನು ರಾಮನಗರಕ್ಕೆ ಕೊಡುತ್ತಾ ಇದ್ದಾರೆ. ತುಮಕೂರು ಗ್ರಾಮಾಂತರಕ್ಕೆ 1.5 ಟಿಎಂಸಿ, ತುಮಕೂರು ನಗರಕ್ಕೆ 1 ಟಿಎಂಸಿ ನೀರು ಮಾತ್ರ ಬಂದಿದೆ. ರೈತರಿಗೆ ಮೀಸಲಿರುವಂತಹ ನೀರನ್ನು ಕೇಳಿದರೆ ಈ ಭಾಗದ ರೈತರು ಏನು ಮಾಡಬೇಕು? ಅದ್ದರಿಂದ ಈ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.

ರೈತ ಸಂಘದ ಅಧ್ಯಕ್ಷ ಸಿದ್ದರಾಜು ಮಾತನಾಡಿ, ಹೇಮಾವತಿ ನೀರು ರೈತರ ಜೀವನಾಡಿ. ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಅವೈಜ್ಞಾನಿಕವಾಗಿದೆ. ಇದರಿಂದ ರಾಜ್ಯಕ್ಕೆ ನಷ್ಟ ಉಂಟಾಗುತ್ತಿದ್ದರು ಅನುದಾನ ಬಿಡುಗಡೆಗೊಳಿಸಿ ರಾಮನಗರ ಜಿಲ್ಲೆಗೆ ಹರಿಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ರಾಜ್ಯ ನಾಯಕರೇ ಬೆಂಬಲವನ್ನು ವ್ಯಕ್ತಪಡಿಸಿರುವುದನ್ನು ಗಮನಿಸಿದರೆ ದೊಡ್ಡ ಮಟ್ಟದ ಹಣಕಾಸಿನ ವ್ಯವಹಾರವನ್ನು ನಡೆಸಿದ್ದಾರೆಂದು ತಿಳಿಯುತ್ತದೆ. ಈ ಯೋಜನೆ ಇಲ್ಲಿಗೆ ಕೈ ಬಿಡದಿದ್ದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರಕ್ಕೆ ನೆರಹೊಣೆಯಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ನೀಡಿದರು.

ಈ ಪ್ರತಿಭಟನೆಯಲ್ಲಿ ತೆಂಗು ನಾರು ನಿಗಮದ ಮಾಜಿ ಅಧ್ಯಕ್ಷ ವೆಂಕಟಾಚಲಯ್ಯ, ರೈತ ಸಂಘದ ಅಧ್ಯಕ್ಷ ರಂಗಹನುಮಯ್ಯ, ಶಬ್ಬೀರ್‌ಬಾಷಾ, ಮಾರುತಿ, ಕರವೇ ಅಧ್ಯಕ್ಷ ನಟರಾಜ್, ಪ್ರಸನ್ನಕುಮಾರ್, ಮುಖಂಡರಾದ ನರಸಿಂಹರಾಜು, ದಾಡಿವೆಂಕಟೇಶ್, ರವಿಕುಮಾರ್(ಕೆಂಗ), ಅಶ್ವತ್ಥ್ ನಾರಾಯಣ ರಾಜು (ಲಂಬುರಾಜು), ತುಂಬಾಡಿ ಲಕ್ಷ್ಮೀಶ್‌, ಕಾಮರಾಜು, ಗುರುದತ್ತ ಸೇರಿದಂತೆ ಇತರರು ಇದ್ದರು.

ರೈತರ ಹಿತ ಕಾಯುವುದು ಸರ್ಕಾರದ ಕೆಲಸ. ಆದರೆ ಒಂದು ಜಿಲ್ಲೆಯ ರೈತರಿಗಾಗಿ ಮತ್ತೊಂದು ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲು ಹೊರಟಿರುವುದು ಯಾವ ನ್ಯಾಯ. ಸರ್ಕಾರ ಕೂಡಲೇ ಈ ಹೇಮಾವತಿ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಿ ರೈತರಿಗೆ ಶಕ್ತಿಯಾಗಿ ನಿಲ್ಲದೇ ರೈತರ ವಿರೋಧಿಯಾದರೆ, ಇದರಿಂದ ಯಾವುದೇ ಘಟನೆ ನಡೆದರೂ ಸರ್ಕಾರವೇ ಜವಬ್ದಾರಿಯಾಗಿರುತ್ತದೆ. –ದೇವರಾಜ್ ಕೆ.ಎನ್, ತಾ. ಅಧ್ಯಕ್ಷ, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ

ರೈತರಿಗೆ ವಿಷವುಣಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕೆನಾಲ್ ಯೋಜನೆ ಬೇಡವೆಂದು ರೈತರು ಗೋಗರೆದರೂ ಅವರ ಅಳಲನ್ನು ತಿರಸ್ಕರಿಸಲಾಗಿದೆ. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿ ಎರಡು ಇಲ್ಲಾ, ಅವರೆಡನ್ನು ತೆರೆಸುವ ಪ್ರಯತ್ನವನ್ನು ಇವತ್ತಿನ ಪ್ರತಿಭಟನೆಯ ಮೂಲಕ ಮಾಡುತ್ತಿದ್ದೇವೆ. – ಅಶ್ವತ್ಥ್ ನಾರಾಯಣ, ಮಾಜಿ ಪ.ಪಂ ಸದಸ್ಯ. ಕೊರಟಗೆರೆ

ಕೊರಟಗೆರೆ ಬಂದ್ ಯಶಸ್ವಿ: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನೀರಾವರಿ ಹೋರಾಟ ಸಮಿತಿ, ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ತುಮಕೂರು ಜಿಲ್ಲೆ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ಕೊರಟಗೆರೆಯ ನೀರಾವರಿ ಹೋರಾಟ ಸಮಿತಿ ಸೇರಿದಂತೆ ಇತರೆ ಸಂಘಟನೆಗಳು ಬೆಂಬಲ ಸೂಚಿಸಿ ಬಂದ್‌ಗೆ ಕರೆ ನೀಡಲಾಗಿತ್ತು. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿದ್ದು, ಅಂಗಡಿ-ಮುಗ್ಗಟ್ಟುಗಳು ಸ್ವಯಂಪ್ರೇರಿತರಾಗಿ ಬಾಗಿಲು ಮುಚ್ಚಿ ಬೆಂಬಲ ಸೂಚಿಸಿದ್ದು, ಬಂದ್ ಯಶಸ್ವಿಯನ್ನು ಕಂಡಿದೆ.

ಟಾಪ್ ನ್ಯೂಸ್

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

rahul-dravid

World Cup ಅಂತೂ ದ್ರಾವಿಡ್‌ಗೆ ಸಿಕ್ತು: ಆಟಗಾರನಾಗಿ, ನಾಯಕನಾಗಿ ವಿಫ‌ಲ, ಕೋಚ್‌ ಆಗಿ ವಿಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

7-kunigal

Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ

ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

11-koratagere

Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.