Kunigal: ಮನೆ ಬೀಗ ಹೊಡೆದು ಕಳ್ಳತನ
Team Udayavani, Sep 23, 2023, 9:49 AM IST
ಸಾಂದರ್ಭಿಕ ಚಿತ್ರ
ಕುಣಿಗಲ್: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆ ಬಾಗಿಲು ಹಾಗೂ ಬೀರುವಿನ ಬೀಗ ಹೊಡೆದು ಬೀರುವಿನಲ್ಲಿದ್ದ ನಗದು ಹಣ ಕಳವು ಮಾಡಿ ಪರಾರಿಯಾಗಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಆರ್.ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಂದ್ರಮ್ಮ ಹಣ ಕಳೆದುಕೊಂಡ ವೃದ್ದ ಮಹಿಳೆ.
ಚಂದ್ರಮ್ಮ ಆನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಆಕೆಯ ಮಗಳು ಮಂಗಳಗೌರಮ್ಮ ಮದ್ದೂರು ಆಸ್ಪತ್ರೆಗೆ ಕಳೆದ ಮೂರು ದಿನಗಳಿಂದ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು.
ಈ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಮನೆಯ ಬೀಗ ಹೊಡೆದು ಒಳಗೆ ಪ್ರವೇಶಿಸಿ ಗಾಡ್ರೇಜ್ ಬೀರುವನ್ನು ಯಾವುದೋ ಆಯುಧ ಬಳಸಿ ಬೀರುವಿನಲ್ಲಿದ್ದ 26 ಸಾವಿರ ರೂ. ನಗದು ಹಣ ಕಳವು ಮಾಡಿ ಹೋಗಿದ್ದಾರೆ.
ಮನೆಯ ಬಾಗಿಲು ಹೊಡೆದಿರುವುದು ಗಮನಿಸಿದ ಗ್ರಾಮಸ್ಥರು ಮಂಗಳಗೌರಮ್ಮನಿಗೆ ವಿಷಯ ತಿಳಿಸಿದ್ದಾರೆ. ಮಂಗಳಗೌರಮ್ಮ ಹುಲಿಯೂರುದುರ್ಗ ಪೊಲೀಸರಿಗೆ ದೂರು ನೀಡಿದ್ದು, ಪಿಎಸ್ಐ ಸುನೀಲ್ಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
Koratagere: ಎರಡು ವಿದ್ಯುತ್ ಉಪಸ್ಥಾವರ ಘಟಕಗಳ ಉದ್ಘಾಟನೆ
Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ
Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.