ತುಮಕೂರು: ಶತಕದತ್ತ ಸೋಂಕಿತರು


Team Udayavani, Jun 29, 2020, 7:39 AM IST

100 sonku

ತುಮಕೂರು: ಕಲ್ಪತರು ನಾಡಿನಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೋವಿಡ್‌ 19 ಕಡಿಮೆ ಯಾಗಿತು ಅಂದು ಕೊಂಡಿದ್ದ ಜನರಿಗೆ ಸೋಂಕು ಉಲ್ಬಣವಾಗು ತ್ತಲೇ ಇದ್ದು ಶತಕದತ್ತ ಮುನ್ನೆಡೆಯುತ್ತಾ  ಭಾನುವಾರ ಒಂದೇ ದಿನ 18 ಜನ ಜನರಿಗೆ ಸೋಂಕು ದೃಢವಾಗಿ ಸೋಂಕಿತರ ಸಂಖ್ಯೆ 93 ಕ್ಕೇರಿಕೆಯಾಗಿ, ಇನ್ನೂ ಒಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 5ಕ್ಕೇರಿದೆ.

ಜನರಲ್ಲಿ ಹೆಚ್ಚಿದ ಆತಂಕ: ದೇಶದ ಎಲ್ಲಾಕಡೆ ಲಾಕ್‌ಡೌನ್‌ ತೆಗೆದಿರುವ ಹಿನ್ನೆಲೆಯಲ್ಲಿ ಜನರ ಓಡಾಟ ಜಾಸ್ತಿಯಾಗಿದೆ. ಹೊರ ರಾಜ್ಯ ದಿಂದ ಜಿಲ್ಲೆಗೆ ಬರುವವರೂ ಜಾಸ್ತಿಯಾಗು ತ್ತಿದ್ದಾರೆ. ಬಂದಿರುವವರಿಗೆ ಸೋಂಕು ಇರುವುದು  ಪತ್ತೆಯಾಗುತ್ತಲೇ ಇದೆ. ಇನ್ನೂ ಸಾವಿರಾರು ಜನರ ಲ್ಯಾಬ್‌ ವರದಿ ಬಾಕಿ ಇದ್ದು ಇನ್ನೂ ಹಲವರಲ್ಲಿ ಕೋವಿಡ್‌ 19 ಪಾಸಿಟಿವ್‌ ಬರುವ ಲಕ್ಷಣಗಳೇ ಹೆಚ್ಚು ಗೋಚರ ವಾಗುತ್ತಿದ್ದು, ಈಗಿನ ವಾತಾವರಣ ನೋಡಿದರೆ ಜಿಲ್ಲೆಯಲ್ಲಿ ಕೋವಿಡ್‌  19 ಸೋಂಕಿ ತರು ಸಂಖ್ಯೆ ನೂರನ್ನು ದಾಟಿ ಮುನ್ನೆಡೆಯುವ ಸಾಧ್ಯತೆ ಇದೆ ಎನ್ನುವ ಆತಂಕ ಜನರನ್ನು ಕಾಡುತ್ತಿದೆ.

ಮಾಸ್ಕ್ ಧರಿಸದ ಜನತೆ: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರು ಹೆಚ್ಚುತ್ತಿರುವುದ ರಿಂದ ನಾಗರಿಕರು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು. ಆದ್ದರಿಂದ ಮಕ್ಕಳು, ವಯಸ್ಸಾದವರು ಮನೆಯಿಂದ ಹೊರಗಡೆ ಹೋಗಬಾರದು.  ಸಾರ್ವಜನಿಕರು ಸರ್ಕಾ ರದ ನಿರ್ದೇಶನಗಳನ್ನು ಪಾಲಿಸಿ ತಮ್ಮ ಆರೋಗ್ಯದ ಕಡೆ ಗಮನ ನೀಡಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ಮೂಡಿಸುತ್ತಿದೆ. ಆದರೆ ಜನ ಮಾತ್ರ ತಮ್ಮ ಪಾಡಿಗೆ ತಾವು ಸಾಮಾಜಿಕ ಅಂತರ ಬಿಟ್ಟು ಮುಖಕ್ಕೆ  ಮಾಸ್ಕ್ ಕೂಡಾ ಧರಿಸದೇ ಸಂಚಾರ ಮಾಡುವುದು ಕಂಡು ಬರುತ್ತಲೇ ಇದೆ.

ಕೋವಿಡ್‌ 19ದಿಂದ ಮೃತರ ಸಂಖ್ಯೆ 5ಕ್ಕೆ ಏರಿಕೆ: ಜಿಲ್ಲೆಯಲ್ಲಿ ಈ ವರೆಗೆ 17,399 ಜನರ ಗಂಟಲು ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಅದರಲ್ಲಿ 1,5369 ಜನರಿಗೆ ನೆಗೆಟಿವ್‌ ಬಂದಿದೆ, 93 ಜನರಿಗೆ ಕೋವಿಡ್‌ 19 ಪಾಸಿಟಿವ್‌ ಕಂಡು ಬಂದಿದ್ದು  ಈವರೆಗೆ ಈ ಸೋಂಕಿನಿಂದ 5 ಜನರು ಮೃತರಾಗಿದ್ದಾರೆ. 39 ಜನ ಗುಣಮುಖರಾಗಿದ್ದು, 49 ಜನ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅದರಲ್ಲಿ ಇನ್ನೂ 1,747 ಜನರ ಲ್ಯಾಬ್‌ ವರದಿ ಬರಬೇಕಾಗಿದೆ.  ದರಲ್ಲಿ ಎಷ್ಟು ಜನರಿಗೆ ಸೋಂಕು ಇರುವುದೋ ತಿಳಿಯದಾಗಿದೆ.

ತುಮಕೂರು ಜಿಲ್ಲಾ ಕೋವಿಡ್‌ -19 ಆಸ್ಪತ್ರೆಯಲ್ಲಿ ಇರುವ ಆರ್‌.ಟಿ-ಪಿಸಿಆರ್‌ ಲ್ಯಾಬ್‌ನಲ್ಲಿ ಪ್ರತಿದಿನ 700 ಗಂಟಲು ದ್ರವ ಪರೀಕ್ಷೆಗೆ ಬರುತ್ತಿದೆ, ದಿನದ 24 ಗಂಟೆಯೂ ಪರೀಕ್ಷೆ ನಡೆಸಲಾಗು ವುದು, ಪ್ರತಿದಿನ 350 ಜನರ  ಗಂಟಲು ದ್ರವ ಪರೀಕ್ಷೆಯನ್ನು ಜಿಲ್ಲಾ ಆಸ್ಪತ್ರೆಯ ಕೋವಿಡ್‌ ಲ್ಯಾಬ್‌ನಲ್ಲಿ ಮಾಡಲಾಗುತ್ತಿದೆ, ಹೆಚ್ಚುವರಿಯನ್ನು ಬೆಂಗಳೂರಿಗೆ ಕಳುಹಿಸಲಾಗುವುದು. 
-ಡಾ.ವೀರಭದ್ರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ

* ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.