ಜಿಲ್ಲೆಯಲ್ಲಿ 155 ಅರ್ಜಿ ಸ್ಥಳದಲ್ಲೇ ಇತ್ಯರ್ಥ


Team Udayavani, Feb 23, 2021, 4:12 PM IST

ಜಿಲ್ಲೆಯಲ್ಲಿ 155 ಅರ್ಜಿ ಸ್ಥಳದಲ್ಲೇ ಇತ್ಯರ್ಥ

ಗ್ರಾಮ ವಾಸ್ತವ್ಯದ ವೇಳೆ ವಾಲಿಬಾಲ್‌ ಆಟವಾಡಿದ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌.

ತುಮಕೂರು: ರೈತರ ಮನೆ ಬಾಗಿಲಿಗೇ ಆಡಳಿತ ಎನ್ನುವ ದೃಷ್ಟಿಕೋನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎನ್ನುವ ಕಲ್ಪನೆಯಲ್ಲಿ ಪ್ರತಿ ತಿಂಗಳು3ನೇ ಶನಿವಾರ ನಡೆಸಲು ಉದ್ದೇಶಿಸಿರುವಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಮೊದಲ ಕಾರ್ಯಕ್ರಮದಲ್ಲಿಯೇ ಜಿಲ್ಲೆಯ ಮಧುಗಿರಿ ತಾಲೂಕಿನ ಲಕ್ಷ್ಮೀಪುರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇಡೀ ದಿನ ಜಿಲ್ಲಾಧಿಕಾರಿ ವೈ. ಎಸ್‌.ಪಾಟೀಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೋ.ನಂ.ವಂಸಿಕೃಷ್ಣ, ಜಿಪಂ ಸಿಇಒಗಂಗಾಧರಸ್ವಾಮಿ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ,ತಹಶೀಲ್ದಾರ್‌ ವಿಶ್ವನಾಥ್‌ ಸೇರಿದಂತೆ ಇತರೆ ಅಧಿಕಾರಿನಡೆಸಿದ ಗ್ರಾಮ ವಾಸ್ತವ್ಯದಲ್ಲಿ ಅಧಿಕಾರಿಗಳಿಂದಜನರಿಗೆ ಉತ್ತಮ ಸ್ಪಂದನೆ ದೊರೆತಿದ್ದು ಒಟ್ಟು 155ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥ ಮಾಡಲಾಗಿದೆ. ರೈತರು ತಮ್ಮ ಸಮಸ್ಯೆಗಳ ನಿವಾರಣೆಗೆ ಕಚೇರಿಯಿಂದ ಕಚೇರಿಗೆ ಅಲೆದರೂ ಅವರ ಕೆಲಸ ಮಾತ್ರ ಆಗುತ್ತಿರಲಿಲ್ಲ. ಹೀಗಾಗಿ ಪ್ರತಿ ತಿಂಗಳ 3ನೇ ಶನಿವಾರ ಜಿಲ್ಲಾಧಿಕಾರಿಗಳನಡೆ ಹಳ್ಳಿಯ ಕಡೆ ಎನ್ನುವ ಕಲ್ಪನೆಯೊಂದಿಗೆ ಸರ್ಕಾರಆರಂಭಿಸಿರುವ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲಾಡಳಿತವೇ ರೈತರ ಮನೆ ಬಾಗಿಲಿಗೆ ಹೋಗಿ ಉನ್ನತ ಅಧಿಕಾರಿಗಳು ಗ್ರಾಮದಲ್ಲಿಯೇ ವಾಸ್ತವ್ಯ ಹೂಡಿ ಅಲ್ಲಿನ ರೈತರ ಜಮೀನುಗಳ ಪಹಣಿಲೋಪದೋಷ, ಪಿಂಚಣಿ, ರೇಷನ್‌ ಕಾರ್ಡ್‌ ಮತ್ತಿತರ ಜನರ ಸಮಸ್ಯೆ ಆಲಿಸಿದ್ದಾರೆ. ಹಳ್ಳಿ ಜನರ ಆರೋಗ್ಯತಪಾಸಣೆ ನಡೆದಿದ್ದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲಅವರು ವಿದ್ಯಾರ್ಥಿಗಳು, ರೈತರು, ಗ್ರಾಮಸ್ಥರೊಂದಿಗೆಸಂವಾದ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ಅಂಗವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ನಡೆಸಿರುವ ಗ್ರಾಮ ವಾಸ್ತವ್ಯಕ್ಕೂ ಜನಸ್ಪಂದನೆ ದೊರೆತಿದೆ.

ಜಿಲ್ಲಾಧಿಕಾರಿಗಳ ಗ್ರಾಮ ಭೇಟಿಯಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ, ಮಧುಗಿರಿ ತಾಲೂಕಿನ ತಹಶೀಲ್ದಾರ್‌, ಕೃಷಿ, ತೋಟಗಾರಿಗೆ, ಆರೋಗ್ಯ,ಆಹಾರ, ಸಮಾಜ ಕಲ್ಯಾಣ, ಮತ್ತಿತರ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಆಯಾಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ,ಮಾಹಿತಿ ನೀಡಿ ಬಹುತೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರು.

ಹಲವು ಸಮಸ್ಯೆಗೆ ಪರಿಹಾರ :

ಗ್ರಾಮ ವಾಸ್ತವ್ಯದಲ್ಲಿ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆಕಿದೆ. ಗ್ರಾಮ ಭೇಟಿ ವೇಳೆಗ್ರಾಮದಲ್ಲಿ ಕೆಲವು ರೈತರ ಪಹಣಿಯಲ್ಲಿನ ಲೋಪದೋಷ, ಪಹಣಿ ಕಾಲಂ ನಂಬರ್‌ 3ಮತ್ತು ಆಕಾರ್‌ ಬಂದ್‌ ತಾಳೆ ಹೊಂದಿರುವ ಬಗ್ಗೆ, ಕಾಲಂ ನಂ.3 ಮತ್ತು 9 ತಾಳೆ ಹೊಂದಿರುವ ಕುರಿತು, ಪೌತಿಖಾತೆ, ರೇಷನ್‌ ಕಾರ್ಡ್‌ಗೆಸಂಬಂಧಿಸಿದ ಸಮಸ್ಯೆ, ಮತದಾರರ ಪಟ್ಟಿ ಪರಿಷ್ಕರಣೆ, ಅರ್ಜಿ ನೀಡಿದ್ದಾರೆ. ಜತೆಗೆ ಆಶ್ರಯಯೋಜನೆಯಡಿ ವಸತಿ ಕಲ್ಪಿಸಿ, ಸರ್ಕಾರಿ ಜಮೀನು ಒತ್ತುವರಿ ಬಗ್ಗೆ, ಆಧಾರ್‌ ಕಾರ್ಡ್‌ನ ಅನುಕೂಲತೆ, ಹದ್ದುಬಸ್ತು, ಪೋಡಿ, ದರಕಾಸ್ತುಬಗ್ಗೆ ಮಾಹಿತಿ ನೀಡಿದ್ದು ಇಲ್ಲಿಯ ಶಾಲೆ,ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾಕ್ರಮ ಇತ್ಯಾದಿ ಅಂಶಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಜತೆಗೆ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಒದಗಿಸಿದ್ದಾರೆ. ಕೆಲವು ಅಲ್ಲಿ ಪರಿಹರಿಸಲು ಸಾಧ್ಯವಾಗದ ಉಳಿದ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲು ಸ್ಥಳದಲ್ಲಿಯೇ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗ್ರಾಮವಾಸ್ತವ್ಯದಲ್ಲಿ ಜಿಲ್ಲಾಧಿಕಾರಿ ಅನುಭವ ಹೇಗಿತ್ತು? :

ಜಿಲ್ಲೆಯಲ್ಲಿ ಸರ್ಕಾರಿ ಮಾರ್ಗಸೂಚಿ ಅನ್ವಯಮೊದಲ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಘನ ಸರ್ಕಾರ ಘೋಷಣೆ ಮಾಡಿದ್ದು ನಮ್ಮ ಮೊದಲ ವಾಸ್ತವ್ಯ ಲಕ್ಷ್ಮೀಪುರದಲ್ಲಿ ನಡೆಯಿತು. ಎಸ್‌ಪಿ, ಸಿಇಒ ಎಲ್ಲಾ ಸೇರಿ ಗ್ರಾಮ ವಾಸ್ತವ್ಯ ಮಾಡಿದ್ದೆವು. ನಮಗೆ ಬಹಳ ಸಂತೊಷವಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ತಿಳಿಸಿದರು.

“ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಅನೇಕ ಜನ ಸರ್ಕಾರಿ ಕಚೇರಿಗಳನ್ನೇ ನೋಡಿಲ್ಲ, ಇಲಾಖೆ ಸೌಲಭ್ಯ ಪಡೆದಿಲ್ಲ, ಸರ್ಕಾರದ ಮಾಸಾಶನ ಸೇರಿದಂತೆ ಇತರೆ ಸೌಲಭ್ಯವನ್ನು ಸ್ಥಳದಲ್ಲಿಯೇ ನೀಡಿದರೆಜನ ಸಂತಸಪಡುತ್ತಾರೆಂದರು. ನಾವು ಈವಾಸ್ತವ್ಯದಿಂದ ಅಲ್ಲಿಯ ಜನರ ಸಂಸ್ಕೃತಿ ಪರಂಪರೆ ಅರಿತೆವು, ಎಸ್‌ಸಿ, ಎಸ್‌ಟಿ ಸಮಸ್ಯೆಆಲಿಸಿದೆವು. ಜನರೊಂದಿಗೆ ಭಜನೆ ನಾಟಕಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದೆವು. ಜಿಲ್ಲಾಧಿಕಾರಿಗಳು ದೂರದವರಲ್ಲ ನಮಗೆ ನಿಲುಕುವವರು ಎನ್ನುವ ಭಾವನೆ ಬರುತ್ತದೆ ಎಂದು ತಿಳಿಸಿದರು.

ಗ್ರಾಮ ವಾಸ್ತವ್ಯದಲ್ಲಿ ಆಗಿರುವ ಲೋಪ ಸರಿಪಡಿಸಿಕೊಂಡು ಮುಂದೆಇನ್ನೂ ಪರಿಣಾಮಕಾರಿಯಾಗಿ ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ ತಹಶೀಲ್ದಾರ್‌ರಿಗೆತಿಳಿಸಿದ್ದೇನೆ ಎಂದು ಹೇಳಿದರು. ವಾಸ್ತವ್ಯಕ್ಕೆಮೊದಲೇ ಅರ್ಜಿ ಸ್ವೀಕರಿಸಿ ವಾಸ್ತವ್ಯದಂದುಅವರ ಅರ್ಜಿವಿಲೇವಾರಿ ಮಾಡಲು ಸೂಚನೆನೀಡಿದ್ದೇನೆ. ಕೃಷಿ, ತೊಟಗಾರಿಕೆ ಇಲಾಖೆಯೊಜನೆಗಳನ್ನೂ ಇಲ್ಲಿನ ಜನರಿಗೆ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರತಿ ತಿಂಗಳು ಮೂರನೇ ಶನಿವಾರ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ಮತ್ತು ಗ್ರಾಮ ವಾಸ್ತವ್ಯದ ಬಗ್ಗೆ ಸರ್ಕಾರದಿಂದ ಸುತ್ತೋಲೆ ಬಂದಿರುವ ರೀತಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಲಾಗಿದೆ. ಅಲ್ಲಿ ಗ್ರಾಮಸ್ಥರ ಮತ್ತು ರೈತರ ಸಮಸ್ಯೆ ಆಲಿಸಿ ಅಲ್ಲಿಯ ಚಿಕ್ಕಕೆರೆಯಿಂದ ಮಲ್ಲನಾಯಕನಹಳ್ಳಿ ಕೆರೆಗೆ ನೀರು ಬರಲು ರಾಜಕಾಲುವೆ ತೆರವು ಮಾಡಲು ಸೂಚಿಸಲಾಗಿದೆ.ಸರ್ಕಾರಿ ಶಾಲಾ ಕಾಂಪೌಂಡ್‌ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಶಿಕ್ಷಕರ ಸಮಸ್ಯೆ ಬಗೆಹರಿಸಲು ಸೂಚಿಸಲಾಗಿದೆ. ವೈ.ಎಸ್‌.ಪಾಟೀಲ್‌, ಜಿಲ್ಲಾಧಿಕಾರಿ

 

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.