ಕಿರ್ಲೋಸ್ಕರ್‌ ಕಾರ್ಮಿಕರು ಬೀದಿಪಾಲು


Team Udayavani, Aug 2, 2020, 10:08 AM IST

ಕಿರ್ಲೋಸ್ಕರ್‌ ಕಾರ್ಮಿಕರು ಬೀದಿಪಾಲು

ತುಮಕೂರು: ಹಲವು ವರ್ಷಗಳಿಂದ ಕಿರ್ಲೋಸ್ಕರ್‌ ಕಂಪನಿಯ ಬೆಳವಣಿಗೆಗೆ ಹಗಲಿರುಳು ದುಡಿದು ಕಂಪನಿಯ ಬೆಳವಣಿಗೆಗೆ ಕಾರಣಕರ್ತರಾದ ಕಾರ್ಮಿಕರ ಹಿತ ಕಾಯಬೇಕಾದ ಕಂಪನಿಯು ಹೊರಗುತ್ತಿಗೆಯ ಹೆಸರಿನಲ್ಲಿ ಕಾರ್ಮಿಕರನ್ನು ಕಡೆಗಣಿಸಿದೆ ಎಂದು ಕಿರ್ಲೋಸ್ಕರ್‌ ಎಂಪ್ಲಾಯಿಸ್‌ ಅಸೋಸಿಯೇಷನ್‌ ಘಟಕ 7ರ ಅಧ್ಯಕ್ಷ ಗಿರೀಶ್‌ ಪ್ರಧಾನ ಕಾರ್ಯದರ್ಶಿ ಕುಮಾರ್‌, ಖಜಾಂಚಿ ಪದ್ಮನಾಭಯ್ಯ ಹಾಗೂ ಆನಂದ್‌ ದೂರಿದ್ದಾರೆ.

ಈ ಸಂಬಂಧ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಿರ್ಲೋಸ್ಕರ್‌ ಕಂಪನಿಯು ಕಳೆದ 75 ವರ್ಷಗಳಿಂದ ಮೋಟಾರ್‌ ಬಿಡಿಭಾಗಗಳ ತಯಾರಿಕೆಯಲ್ಲಿ ತೊಡಗಿಕೊಂಡಿದ್ದು ಕರ್ನಾಟಕ ರಾಜ್ಯದ ಮೈಸೂರು – ಹುಬ್ಬಳಿ – ಬೆಂಗಳೂರಲ್ಲಿ ಪ್ರಾರಂಭಗೊಂಡು, ಕಾರ್ಮಿಕರು ಶ್ರಮವಹಿಸಿ ದುಡಿದ ಪರಿಣಾಮವಾಗಿ ತನ್ನ ಕಂಪನಿಯ ಘಟಕಗಳನ್ನು ದೇಶ ವಿದೇಶಗಳಲ್ಲಿ ಪ್ರಾರಂಭಮಾಡಿ ಕಂಪನಿಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಕಂಪನಿಯ ಈ ವಿಸ್ತರಣೆಗೆ ಕಾರ್ಮಿಕರ ಶ್ರಮವೇ ಇದಕ್ಕೆ ಕಾರಣ ವಾಗಿದೆ ಎಂಬುದು ಗಮನಾರ್ಹ ಎಂದಿದ್ದಾರೆ.

ಸುಮಾರು 25 ವರ್ಷಗಳ ಹಿಂದೆ ಏಳನೇ ಘಟಕವನ್ನು ಪ್ರಾರಂಭಿಸಿ, ಅಂದಿನಿಂದ ಸುಮಾರು 150 ಕಾರ್ಮಿಕರ ದುಡಿಮೆಯ ಫ‌ಲವಾಗಿ ನೂರಾರು ಕೋಟಿ ರೂ. ಲಾಭಗಳಿಸಿದೆ. ಇತ್ತೀಚೆಗೆ ಕಾರ್ಮಿಕರ ಸಂಖ್ಯೆಯನ್ನು ಕಡಿಮೆ ಮಾಡುತ್ತಾ ತನಗೆ ಬಂದ ಕೆಲಸವನ್ನು ಹೊರಗುತ್ತಿಗೆನೀಡುತ್ತಾ, ಕಾರ್ಮಿಕರನ್ನು ಶೋಷಣೆ ಮಾಡುತ್ತಾ ಕಾರ್ಮಿಕರ ಸಂಖ್ಯೆಯನ್ನು 83ಕ್ಕೆ ಇಳಿಸಿದೆ ಎಂದು ತಿಳಿಸಿದ್ದಾರೆ.

ಇಷ್ಟೆಲ್ಲಾ ಹೋರಾಟಗಳ ನಡುವೆ ಕಳೆದ 20 ದಿನಗಳ ಹಿಂದೆ ಕಂಪನಿ ಆಡಳಿತ ವರ್ಗಕ್ಕೆ ಮೇಲಿನ ಎಲ್ಲಾ ವಿಷಯಗಳನ್ನು ಗಮನಕ್ಕೆ ತಂದು ಸಂಘವು ಮುಷ್ಕರದ ನೋಟಿಸ್‌ ನೀಡಿತ್ತು. ಆ ಮುಷ್ಕರದ ನೋಟಿಸ್‌ಗೂ ಬೆಲೆಕೊಡದ ಆಡಳಿತವರ್ಗ ತನ್ನ ಹಠಮಾರಿ ಧೋರಣೆಯಿಂದ ಕೈಗಾರಿಕಾ ಶಾಂತಿಯನ್ನು ಕದಡುವ ಕೆಲಸಕ್ಕೆ ಆಡಳಿತ ಮಂಡಳಿಯೇ ಮುಂದಾಗುತ್ತಿದ್ದು, ಅಕ್ರಮವಾಗಿ ಕೈಗಾರಿಕೆಯಲ್ಲಿರುವ ಯಂತ್ರೋಪಕರಣ ಗಳನ್ನು ಕದ್ದು ಬೇರೆಡೆಗೆ ಸ್ಥಳಾಂತರಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದಕ್ಕೆ ಆರಕ್ಷಕ ಇಲಾಖೆಯನ್ನು ಜನಪ್ರತಿ ನಿಧಿಗಳ ಮೂಲಕ ದುರುಪಯೋಗ ಪಡಿಸಿ ಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.