Manipal ಜಿಲ್ಲಾ ಸಾಲ ಯೋಜನೆಯಲ್ಲಿ ಶೇ.130ರಷ್ಟು ಸಾಧನೆ


Team Udayavani, Feb 10, 2024, 12:42 AM IST

Manipal ಜಿಲ್ಲಾ ಸಾಲ ಯೋಜನೆಯಲ್ಲಿ ಶೇ.130ರಷ್ಟು ಸಾಧನೆ

ಮಣಿಪಾಲ: ಜಿಲ್ಲಾ ವಾರ್ಷಿಕ ಸಾಲ ಯೋಜನೆಯಲ್ಲಿ ಶೇ.130.57ರಷ್ಟು ಸಾಧನೆ ಮಾಡ ಲಾಗಿದೆ. 2023-24ನೇ ಸಾಲಿನಲ್ಲಿ 13,877.95 ಕೋ.ರೂ. ಸಾಲ ನೀಡುವ ಗುರಿಹೊಂದಿದ್ದು 2023ರ ಡಿಸೆಂಬರ್‌ ಅಂತ್ಯಕ್ಕೆ 18,121.02 ಕೋ.ರೂ. ಸಾಲ ಒದಗಿಸಲಾಗಿದೆ.

ಜಿಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಲೀಡ್‌ ಬ್ಯಾಂಕ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆನರಾ ಬ್ಯಾಂಕ್‌ ಪ್ರಾದೇಶಿಕ ವ್ಯವಸ್ಥಾಪಕಿ ಶೀಬಾ ಸಹಜನ್‌ ಮಾಹಿತಿ ನೀಡಿ, ಕೃಷಿ, ಕೈಗಾರಿಕೆ, ಶಿಕ್ಷಣ, ವಸತಿ ಸಹಿತ ಆದ್ಯತಾ ವಲಯಕ್ಕೆ 10,812 ಕೋ.ರೂ. ಸಾಲ ನೀಡಲಾಗಿದೆ. ಆದ್ಯತೇತರ ವಲಯಕ್ಕೆ 7,308 ಕೋ.ರೂ. ಸಾಲ ನೀಡಿದ್ದೇವೆ. ದುರ್ಬಲ ವರ್ಗಕ್ಕೆ 2,660 ಕೋ.ರೂ. ಸಾಲ ವಿತರಿಸಲಾಗಿದೆ ಎಂದರು.

ಪಿ.ಎಂ.ಸ್ವನಿಧಿ ಯೋಜನೆಯಡಿ ಮೊದಲನೇ ಹಂತದಲ್ಲಿ 4,462 ಜನರಿಗೆ ಸಾಲ ವಿತರಿಸಿದ್ದು, ರಾಜಕ್ಯದಲ್ಲೇ ಜಿಲ್ಲೆಯ ಪ್ರಥಮ ಸ್ಥಾನ ಪಡೆದಿದೆ ಎಂದರಲ್ಲದೇ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕ್‌ ಸಾಲ ಠೇವಣಿ ಅನುಪಾತವು ಶೇ. 48.41ರಷ್ಟು ಬೆಳವಣಿಗೆಯಾಗಿ ಶೇ. 1.62 ರಷ್ಟು ಸಾಧನೆ ಮಾಡಲಾಗಿದೆ. ಬ್ಯಾಂಕ್‌ಗಳ ಸಾಲ ನೀಡಿಕೆ ಪ್ರಮಾಣವನ್ನು ಹೆಚ್ಚಿಸಬೇಕು. ಬ್ಯಾಂಕ್‌ಗಳಲ್ಲಿ 56,191 ಕೋ. ರೂ. ವ್ಯವಹಾರ ನಡೆದಿದ್ದು, ಸಾಲ ವಿತರಣೆಯಲ್ಲಿ 12.19ರಷ್ಟು ಬೆಳವಣಿಗೆಯಾಗಿದೆ ಎಂದರು.

ಜಿಪಂ ಸಿಇಒ ಪ್ರತೀಕ್‌ ಬಾಯಲ್‌ ಮಾತನಾಡಿ, ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಕೈಗಾರಿಕೆ ಇಲಾಖೆಗಳಿಂದ ಶಿಫಾರಸು ಮಾಡಿದ ಅರ್ಜಿದಾರರಿಗೆ ಬ್ಯಾಂಕ್‌ಗಳು ಶೀಘ್ರವಾಗಿ ನೆರವು ಒದಗಿಸಬೇಕು ಎಂದು ಸೂಚಿಸಿದರು.

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಎಕ್ಸಿಕ್ಯೂಟಿವ್‌ ಅಧಿಕಾರಿ ಮುರಳಿ ಮೋಹನ್‌ ಪಾಠಕ್‌, ಎಸ್‌ಸಿಡಿಸಿಸಿ ಬ್ಯಾಂಕ್‌ನ ಡಿಜಿಎಂ ನಿತ್ಯಾನಂದ ಶೇರಿಗಾರ್‌ ಉಪಸ್ಥಿತರಿದ್ದರು. ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಪಿ.ಎಂ. ಪಿಂಜಾರ ಸ್ವಾಗತಿಸಿ, ನಿರೂಪಿಸಿದರು.

 

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.