ವಿತರಣೆಗಾಗಿ ಕಾದಿವೆ 2 ಲಕ್ಷ  ಸಸಿಗಳು


Team Udayavani, Jun 7, 2018, 2:35 AM IST

ಉಡುಪಿ: ಗಿಡ-ಮರಗಳನ್ನು ನೆಟ್ಟು ಪರಿಸರ ಸಮೃದ್ಧಿಗೆ ಉತ್ತೇಜನ ನೀಡಲು ಸರಕಾರ ಅರಣ್ಯ ಇಲಾಖೆ ಮೂಲಕ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ವಿತರಿಸುತ್ತಿದೆ. ಕುಂದಾಪುರ ವಿಭಾಗದ ಎಂಟು ವಲಯಗಳಲ್ಲಿ ತಲಾ ಒಂದು ನರ್ಸರಿಗಳಿದ್ದು ಇವುಗಳಲ್ಲಿ ಸಾರ್ವಜನಿಕ ವಿತರಣೆಗಾಗಿ ಹಾಗೂ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ 1.45 ಲಕ್ಷ ಸಸಿಗಳನ್ನು ಬೆಳೆಸಲಾಗಿದೆ. ರೆಗ್ಯುಲರ್‌ ಅರಣ್ಯ ವಿಭಾಗವಲ್ಲದೆ ಉಡುಪಿ ಜಿ.ಪಂ. ಸಾಮಾಜಿಕ ಅರಣ್ಯ ವಿಭಾಗದಲ್ಲಿ ಸಾರ್ವಜನಿಕ ವಿತರಣೆಗಾಗಿ 65,000 ಗಿಡಗಳನ್ನು ಬೆಳೆಸಲಾಗಿದೆ.


ಯಾವೆಲ್ಲ ಸಸಿಗಳು?

ನೇರಳೆ, ಬೆತ್ತ, ಸಾಗುವಾನಿ, ರಕ್ತಚಂದನ, ಮಹಾಗನಿ, ದಾಲಿcನಿ, ಹಲಸು, ಬಾದಾಮಿ, ಕಿರಾಲುಬೋಗಿ, ರಾಂಪತ್ರೆ, ಹೆಬ್ಬೇವು, ಅಂಟುವಾಳ, ಬೆಂಗ, ಹೊಂಗೆ, ನಾಗಲಿಂಗ ಪುಷ್ಪ, ಹೊಳೆ ದಾಸವಾಳ, ಕಕ್ಕೆ, ಬೀಟೆ, ಮಾವು, ಅಶೋಕ, ಬಿಲ್ವಪತ್ರೆ, ನೆಲ್ಲಿ, ಪುನರ್‌ಪುಳಿ, ಮುತ್ತುಗ, ಶ್ರೀಗಂಧ, ಸಂಪಿಗೆ, ಶಿವಾನಿ, ಬಿಲ್ವಾರ, ಮುರಿಯ, ಸೆಳ್ಳೆ, ರೆಂಜ ಇತ್ಯಾದಿ ಗಿಡಗಳನ್ನು ಬೆಳೆಸಲಾಗಿದೆ. ಇದರಲ್ಲಿ ಹಣ್ಣು- ಹೂವು ಬಿಡುವ, ಉರುವಲು ಆಗುವ, ಗೃಹೋಪಯೋಗಿ ಗಿಡಗಳಿವೆ.

ರಿಯಾಯಿತಿ ದರ
ವಿತರಣೆಗಾಗಿ ಬೆಳೆಸಿದ ಸಸಿಗಳನ್ನು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವುದು.(58 ಗಾತ್ರದ ಸಸಿಗೆ 1 ರೂ., 812 ಗಾತ್ರದ ಸಸಿಗೆ 3 ರೂ. ನಿಗದಿಪಡಿಸಲಾಗಿದೆ. )


ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ 

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಸಸಿಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಸಸಿ ಇಚ್ಛಿಸುವ ರೈತರು ಸಸಿ ನೆಡಲು ಲಭ್ಯವಿರುವ ಸ್ಥಳಕ್ಕೆ ಸಂಬಂಧಿಸಿದ ಪಹಣಿ ಪತ್ರದೊಂದಿಗೆ ಸಮೀಪದ ವಲಯ ಕಚೇರಿಗೆ ತಾವು ಇಚ್ಛಿಸಿದ ಸಸಿಗಳ ವಿವರದೊಂದಿಗೆ ಅರ್ಜಿ ಸಲ್ಲಿಸಿದಲ್ಲಿ ಸಸಿ ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯಡಿ ಸಸಿ ನೆಟ್ಟ ರೈತರಿಗೆ 1 ವರ್ಷದ ತರುವಾಯ ಪ್ರತಿ ಜೀವಿತ ಸಸಿಗೆ ಮೊದಲ ವರ್ಷದಲ್ಲಿ 40 ರೂ., ಎರಡನೇ ವರ್ಷದಲ್ಲಿ 30 ರೂ., 3ನೇ ವರ್ಷದಲ್ಲಿ 30 ರೂ. ಸಹಾಯಧನ ನೀಡಲಾಗುವುದು. ಯೋಜನೆಯಡಿ ಹೆಕ್ಟೇರ್‌ ಗೆ ಗರಿಷ್ಠ 400 ಸಸಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅವಕಾಶ ಇದೆ. 2 ವರ್ಷಗಳ ಹಿಂದೆ ಈ ಯೋಜನೆಯಡಿ ಒಂದು ಸಸಿಗೆ 40 ರೂ. ಇತ್ತು, ಹೋದ ವರ್ಷದಿಂದ 100 ರೂ.ಗೆ ಏರಿಕೆಯಾಗಿದೆ. ಇದು ಪಾಳುಬೀಳುವ ಜಾಗದಲ್ಲಿ ಸುಲಭದಲ್ಲಿ ಆದಾಯ ತರುವ ಯೋಜನೆಯಾಗಿದೆ.


ಸಬ್ಸಿಡಿ ದರ

ಒಂದು ಗಿಡ ಬೆಳೆಸಲು ಇಲಾಖೆಗೆ ಸುಮಾರು 30 ರೂ. ಖರ್ಚಾಗುತ್ತದೆ. ಸರಕಾರ ಸಬ್ಸಿಡಿ ದರದಲ್ಲಿ ಗಿಡಗಳನ್ನು ರೈತರಿಗೆ ವಿತರಿಸುತ್ತಿದೆ.  ಮೂರು ವರ್ಷಗಳಲ್ಲಿ 100 ರೂ. ಕೊಡಲಾಗುತ್ತದೆ. ರೈತರು ತಮ್ಮ ಜಾಗದಲ್ಲಿ ಗಿಡಗಳನ್ನು ನೆಟ್ಟು ಪರಿಸರಕ್ಕೂ ಸ್ವಂತಕ್ಕೂ ಪ್ರಯೋಜನ ಪಡೆದುಕೊಳ್ಳಬೇಕು.
– ಪ್ರಭಾಕರನ್‌, ಉಪ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.