ಸರ್ಪನಮನೆ ಸಸ್ಯ ಕೇಂದ್ರದಲ್ಲಿದೆ 3.52 ಲಕ್ಷ ವಿಧದ ಗಿಡಗಳು


Team Udayavani, Jun 19, 2019, 6:10 AM IST

sarpana-mane

ಬೈಂದೂರು: ತಾಲೂಕಿನ ಪ್ರಸಿದ್ದ ಸಸ್ಯ ಕ್ಷೇತ್ರವಾದ ಶಿರೂರು ಸರ್ಪನಮನೆಯಲ್ಲಿ ಈ ವರ್ಷ 3.52 ಲಕ್ಷ ಗಿಡಗಳನ್ನು ಸಿದ್ಧಪಡಿಸಲಾಗಿದ್ದು, ಹಸಿರು ಕ್ರಾಂತಿಯ ಚಿಂತನೆಯೊಂದಿಗೆ ಅರಣ್ಯ ಇಲಾಖೆ ಕಾಡು ವೃದ್ಧಿ ಹಾಗೂ ಅರಣ್ಯ ಬೆಳೆಸಲು ಸಾರ್ವಜನಿಕರ ಸಹಕಾರದೊಂದಿಗೆ ಹತ್ತಾರು ವಿಭಿನ್ನ ಯೋಜನೆಗಳನ್ನು ರೂಪಿಸಿದೆ.

ಕುಂದಾಪುರ ತಾಲೂಕಿನ ಶಿರೂರು ಗ್ರಾಮದ ಸಂಕದಗುಂಡಿ ಬಳಿ ಇರುವ ಸರ್ಪನಮನೆ ಸಸ್ಯ ಕ್ಷೇತ್ರ 5 ಎಕರೆ ವಿಸ್ತಾರವಾಗಿದೆ. ಸಾಗುವಾನಿ, ಬಾದಾಮಿ, ಹಲಸು, ಶ್ರೀಗಂಧ, ಮಾವು, ಮಹಾಗನಿ, ಸೇರಿದಂತೆ 38ಕ್ಕೂ ಅಧಿಕ ಪ್ರಭೇದದ ಗಿಡಗಳನ್ನು ಪೂರೈಸಲಾಗುತ್ತಿದೆ.

ಅರಣ್ಯ ವ್ಯಾಪ್ತಿ ವಿವರ

ಬೈಂದೂರು ವಲಯಾರಣ್ಯ ಬೈಂದೂರಿನಿಂದ ಮರವಂತೆಯವರೆಗೆ ತನ್ನ ವ್ಯಾಪ್ತಿ ಹೊಂದಿದೆ. ಇದರಲ್ಲಿ ಬೈಂದೂರು ಕೇಂದ್ರ ಸ್ಥಾನ, ಗೋಳಿಹೊಳೆ, ಕಿರಿಮಂಜೇಶ್ವರ ವ್ಯಾಪ್ತಿಗಳಿದ್ದು 9 ಗಸ್ತುಗಳಾಗಿ ವಿಂಗಡಿಸಲಾಗಿದೆ. ಒಟ್ಟು 8,467 ಹೆಕ್ಟೇರ್‌ ಅರಣ್ಯ ಭೂಮಿ ಇದ್ದು ಶಿರೂರು, ಕರ್ನ್ಗದ್ದೆ, ಬೈಂದೂರು, ವಸ್ರೆ, ಗೋಳಿಹೊಳೆ, ಹುಲಿಮೀಸೆ ಪಾರೆ, ಕುರ್ಶಿಗುಡ್ಡೆ, ಹೇರೂರು ಪೂರ್ವ ಮತ್ತು ಹೇರೂರು ಪಶ್ಚಿಮ ಎಂದು ವಿಂಗಡಿಸಲಾಗಿದೆ.

2019-20ರ ಸಾಲಿನಲ್ಲಿ 316 ಹೆಕ್ಟೇರ್‌ ನೆಡುತೋಪು ನೆಡುವ ಗುರಿ ಹೊಂದಿದೆ. ಹಸಿರು ಕರ್ನಾಟಕ ಯೋಜನೆಯಡಿ 5 ಸಾವಿರ ಹೊಂಡಗಳನ್ನು ತೆಗೆಯಲಾಗಿದೆ. ಇದುವರೆಗೆ 2 ಲಕ್ಷಕ್ಕೂ ಅಧಿಕ ಗಾಳಿ ಗಿಡಗಳನ್ನು ನೆಡಲಾಗಿದೆ.

ಸಾರ್ವಜನಿಕ ಯೋಜನೆಗಳು

ಅರಣ್ಯ ಇಲಾಖೆ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ 20 ಸಾವಿರ ಗಿಡ ನೆಡಲಾಗಿದೆ. ಕೃಷಿಕರಿಗೆ 1 ಹೆಕ್ಟೇರ್‌ಗೆ 400 ಗಿಡಗಳನ್ನು ನೀಡಲಾಗುತ್ತದೆ.ಅತ್ಯಂತ ರಿಯಾಯಿತಿ ದರದಲ್ಲಿ ನೀಡುವ ಜತೆಗೆ ಮೊದಲ ವರ್ಷ 30 ರೂಪಾಯಿ, ಎರಡನೇ ವರ್ಷದಲ್ಲಿ 30 ರೂಪಾಯಿ ಹಾಗೂ ಮೂರನೇ ವರ್ಷ 40 ರೂಪಾಯಿ ಸಹಾಯಧನ ನೀಡುತ್ತಿದೆ. ಪ.ಪಂಗಡ ಮತ್ತು ಪ.ಜಾತಿಯವರಿಗೆ ಗ್ಯಾಸ್‌ ಸ್ಟವ್‌ ಹಾಗೂ ಸಿಲಿಂಡರ್‌ ವಿತರಿಸಲಾಗುತ್ತದೆ. ಸೋಲಾರ್‌ ವಾಟರ್‌ ಹೀಟರ್‌ ಸೌಲಭ್ಯ ಕೂಡ ದೊರೆಯುತ್ತದೆ.ಬೈಂದೂರು ವ್ಯಾಪ್ತಿಯಲ್ಲಿ 8 ಜನರಿಗೆ ಇದನ್ನು ಶಿಫಾರಸು ಮಾಡಲಾಗಿದೆ. ಗೋಬರ್‌ ಗ್ಯಾಸ್‌, ಕಸಿಗೇರು, ಮಾವಿನ ಗಿಡಗಳು ದೊರೆಯಲಿವೆ.

ಪ್ರಾಯೋಜಕತ್ವ

ಬೈಂದೂರು ವ್ಯಾಪ್ತಿಯಲ್ಲಿನ ಸಂಘ ಸಂಸ್ಥೆಗಳು ಮತ್ತು ಸರಕಾರದ ಇಲಾಖೆಯ ವತಿಯಿಂದ ನಡೆಯುವ ಪರಿಸರ ಸ್ನೇಹಿ ಮತ್ತು ಗಿಡಗಳನ್ನು ನೆಡುವ ಕಾರ್ಯಕ್ರಮಗಳಲ್ಲಿ ಅರಣ್ಯ ಇಲಾಖೆ ಸಹಭಾಗಿತ್ವ ನೀಡುತ್ತಿದೆ. ಶಿರೂರು ಜೆಸಿಐ ವತಿಯಿಂದ ನಡೆಯುವ ವೃಕ್ಷರಥ -2019 ಅಭಿಯಾನದ ಮೂಲಕ ಶಾಲಾ ಕಾಲೇಜುಗಳಿಗೆ ಒಂದು ಸಾವಿರ ಗಿಡಗಳನ್ನು ನೆಡುವ ಯೋಜನೆಗೆ ಸಹಭಾಗಿತ್ವ ನೀಡಲಾಗಿದೆ.

ಕ್ಷಿತಿಜ ನೇಸರಧಾಮ ಅರಣ್ಯ ವ್ಯಾಪ್ತಿ ಮುಂತಾದ ಕಡೆ ಹಸಿರಾಗಿಸುವ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ಇದರ ಜೊತೆಗೆ ಅರಣ್ಯ ಮಾಹಿತಿ, ಗ್ರಾಮೀಣ ಭಾಗದಲ್ಲಿ ಕೃಷಿ ತೋಟಗಾರಿಕೆಯ ಅಕ್ರಮ ಸಕ್ರಮ ಮುಂತಾದ ಕಾರಣಗಳಿಂದ ಕಾಡು ನಾಶ ಮಾಡುವುದನ್ನು ನಿಯಂತ್ರಿಸುವ ಕೆಲಸವಾಗಬೇಕಿದೆ.

ಪರಿಸರ ಜಾಗೃತಿ, ಕೆರೆಗಳ ರಕ್ಷಣೆ, ಚೆಕ್‌ಡ್ಯಾಮ್‌ ಅಳವಡಿಕೆ, ಮಳೆನೀರು ಕೊಯ್ಲು, ಇಂಗುಗುಂಡಿ ಅನುಷ್ಠಾನದ ಮೂಲಕ ಪರಿಸರ ಜಾಗೃತಿ ಹೆಚ್ಚಿಸುವ ಕೆಲಸಗಳಾಗಬೇಕಿದೆ.

ಮನಪರಿವರ್ತನೆಗೆ ಹೊಸ ಪ್ರಯೋಗ

ಅಪರಾಧಗಳು ನಡೆದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಕ್ಕಿಂತ ಘಟಿಸುವ ಮುನ್ನ ಜನಸಾಮಾನ್ಯರಿಗೆ ವಾಸ್ತವ ಸಂಗತಿ ಅರಿವು ಮೂಡಿಸಿದರೆ ಅಪರಾಧಗಳ ಸಂಖ್ಯೆ ಇಳಿಮುಖವಾಗುತ್ತದೆ.

ಮುಖ್ಯವಾಗಿ ಗ್ರಾಮೀಣ ಭಾಗಗಳಲ್ಲಿ ಮರಕಳ್ಳತನ, ಕಾಡುಪ್ರಾಣಿಗಳ ಶಿಕಾರಿ ನಡೆಸುವ ಮೂಲಕ ಕೆಲವು ತಂಡಗಳು ಜೀವನ ಸಾಗಿಸುತ್ತಿದೆ. ಇಂಥವರಿಗೆ ಕಾಡುಪ್ರಾಣಿಗಳ ಬೇಟೆಗೆ ಕಾನೂನಿನ ಪ್ರಕಾರ ಯಾವ ಶಿಕ್ಷೆಗಳಿವೆ, ಒಂದೊಮ್ಮೆ ಬೆಲೆ ಬಾಳುವ ಮರಕಳ್ಳತನ ನಡೆಸಿದರೆ ಉಂಟಾಗುವ ಪರಿಣಾಮಗಳೇನು, ಪ್ರಕೃತಿ ರಕ್ಷಣೆಯಲ್ಲಿ ಜನಸಾಮಾನ್ಯರ ಜವಾಬ್ದಾರಿಗಳೇನು ಮುಂತಾದ ವಿಷಯಗಳ ಕುರಿತು ಸ್ವ-ಸಹಾಯ ಸಂಘಗಳು, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮನಪರಿವರ್ತನೆ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಯೋಗ ಬೈಂದೂರು ವಲಯಾರಣ್ಯಾಧಿಕಾರಿಗಳ ಮುತುವರ್ಜಿಯಲ್ಲಿ ನಡೆಯುತ್ತಿದೆ.

ಮಳೆಗಾಲದ ಬಳಿಕ ಕಾಡು ತೊರೆಗಳಿಗೆ ಸಾಂಪ್ರದಾಯಿಕ ಚೆಕ್‌ಡ್ಯಾಂ ನಿರ್ಮಿಸಿದಾಗ ನೀರು ಶೇಖರಣೆಯಾಗಿ ಕಾಡು ಪ್ರಾಣಿಗಳಿಗೆ, ಪಕ್ಷಿಗಳಿಗೆ ನೀರಿನ ದಾಹ ತೀರುತ್ತದೆ ಎಂಬುದು ಇಲಾಖೆಯ ಸಿಬಂದಿಗಳ ಅಭಿಪ್ರಾಯ. ಒಟ್ಟಾರೆಯಾಗಿ ಹಸಿರು ಚಿಂತನೆಯಲ್ಲಿ ಬೈಂದೂರು ಅರಣ್ಯ ಇಲಾಖೆ ತಂಡ ಸಾಂಘಿಕ ಪ್ರಯತ್ನ ನಡೆಸುತ್ತಿದ್ದು, ಪರಿಸರ ಸ್ನೇಹಿ ಕಾರ್ಯಕ್ರಮಗಳ ಮೂಲಕ ಮಾದರಿಯಾಗುತ್ತಿದೆ.

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.