ಕಾರು ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಶಿಕ್ಷೆ
Team Udayavani, Jul 13, 2023, 6:25 AM IST
ಉಡುಪಿ: ಆರು ವರ್ಷಗಳ ಹಿಂದೆ ನಡೆದ ಕಾರು ಚಾಲಕನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಎರಡನೇ ಹೆಚ್ಚುವರಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿ ಬುಧವಾರ ಆದೇಶಿಸಿದೆ.
ಉಡುಪಿ ಚಿಟ್ಟಾಡಿಯ ಯೋಗೀಶ್ ಪೂಜಾರಿ(43), ಕೊಡವೂರು ಮಾಧವ ನಗರದ ಸುಧಾಕರ್(42), ಉದ್ಯಾವರದ ವಸಂತ(52), ಎಲ್ಲೂರಿನ ಕಿರಣ್ (34) ಶಿಕ್ಷೆಗೆ ಗುರಿಯಾದ ಆರೋಪಿಗಳು. ಇವರೆಲ್ಲರು ಕಾರು ಚಾಲಕರಾಗಿ ದುಡಿಯುತ್ತಿದ್ದರು.
ಘಟನೆ ವಿವರ
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶಿರ್ವ ನಿವಾಸಿ ರಾಜೇಶ್ ಶೆಟ್ಟಿಗಾರ್(40) ಅವರು ಕಾರು ಬಾಡಿಗೆ ನಡೆಸುತ್ತಿದ್ದರು. ಇಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿಯ ಬಳಿ ಬ್ಯಾಡ್ಜ್ ಇಲ್ಲ ಎಂಬ ಕಾರಣಕ್ಕೆ ಅವರು ಕಾರು ನಿಲ್ದಾಣದಲ್ಲಿ ಕಾರು ನಿಲ್ಲಿಸುವ ಬಗ್ಗೆ ಅವರ ಸಂಘಕ್ಕೆ ದೂರು ನೀಡಿದ್ದರು. ಇದೇ ದ್ವೇಷದಲ್ಲಿ ಯೋಗೀಶ್ ಪೂಜಾರಿ ಇತರರೊಂದಿಗೆ ಸೇರಿ 2017ರ ಮಾ.7ರಂದು ರಾಜೇಶ್ ಶೆಟ್ಟಿಗಾರ್ ವಾಸ ಮಾಡಿಕೊಂಡಿದ್ದ ಕುಂಜಿಬೆಟ್ಟು ಕಾನೂನು ಕಾಲೇಜು ಸಮೀಪದ ರೂಮಿಗೆ ಹೋಗಿ ಕೊಲೆಗೆ ಯತ್ನಿಸಿ ಮರಾಣಾಂತಿಕವಾಗಿ ಹಲ್ಲೆ ನಡೆಸಿದ್ದರು.
ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಎಸ್ಐ ಅನಂತಪದ್ಮನಾಭ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾ ರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿ ಪ್ರಾಯ ಪಟ್ಟು, ಕಲಂ 307 ಅಡಿ 6 ತಿಂಗಳ ಸಾದಾ ಸಜೆ, 326ರಡಿ 3ವರ್ಷ ಗಳ ಜೈಲು ಶಿಕ್ಷೆ ಮತ್ತು ತಲಾ 20ಸಾವಿರ ರೂ. ದಂಡ, 504ರಡಿ 6 ತಿಂಗಳ ಹಾಗೂ 506ರಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಜಯರಾಮ್ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ
Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.