ಬೈಂದೂರು: ಶಿರೂರು ಚೆಕ್ಪೋಸ್ಟ್ ಬಳಿ ಅಪಾಯದ ಗುಂಡಿ
Team Udayavani, Feb 12, 2019, 1:00 AM IST
ಬೈಂದೂರು: ಶಿರೂರು ತೂದಳ್ಳಿ ಕ್ರಾಸ್ ಬಳಿಯ ಚೆಕ್ಪೋಸ್ಟ್ ಸಮೀಪ ಚರಂಡಿಯ ಸ್ಲಾಬ್ ಜಾರಿದ್ದು ಗುಂಡಿ ನಿರ್ಮಾಣವಾಗಿದೆ.
ಹೆದ್ದಾರಿ ಚತುಷ್ಪಥ ಕಾಮಗಾರಿ ವೇಳೆ ಎರಡು ಕಡೆಗಳಲ್ಲಿ ಚರಂಡಿ ನಿರ್ಮಾಣ ಮಾಡಲಾಗಿದೆ. ಚರಂಡಿ ಮೇಲ್ಭಾಗವನ್ನು ಕಾಂಕ್ರೀಟ್ ಸ್ಲಾಬ್ನಿಂದ ಮುಚ್ಚಲಾಗಿದ್ದರೂ ಕೆಲವು ಕಡೆಗಳಲ್ಲಿ ಸ್ಲಾಬ್ ಇಲ್ಲದ ಪರಿಣಾಮ ಪಾದಚಾರಿಗಳು ಗುಂಡಿಗೆ ಬಿದ್ದು ಕೈಕಾಲು ಮುರಿದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ವಿಷಯವನ್ನು ಹಲವು ಬಾರಿ ಸ್ಥಳೀಯರು ಪಂಚಾಯತ್ ಹಾಗೂ ಅಧಿಕಾರಿಗಳ, ಕಂಪೆನಿ ಗಮನಕ್ಕೆ ತಂದರೂ ಪ್ರಯೋಜನ ವಾಗಿಲ್ಲ. ಅಪಾಯ ಸಂಭವಿಸುವ ಮೊದಲು ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎನ್ನುವುದು ಸ್ಥಳೀಯರ ಆಗ್ರಹ.
ಇಲಾಖೆ ಸ್ಪಂದಿಸುತ್ತಿಲ್ಲ
ಐಆರ್ಬಿ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಈಗಾಗಲೇ ಹಲವು ದೂರುಗಳು ಬಂದಿವೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪತ್ರಗಳನ್ನು ಬರೆಯಲಾಗಿದೆ. ಆದರೆ ಇಲಾಖೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ.
– ಮಂಜುನಾಥ ಶೆಟ್ಟಿ, ಶಿರೂರು ಪಿಡಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.